ನಾನು ಸೋಲಲು ಚಿಕ್ಕಬಳ್ಳಾಪುರದ ಕೆ.ಸುಧಾಕರ್ ಮಾತ್ರವಲ್ಲ, ಬೊಮ್ಮಾಯಿಯೂ ಕಾರಣ: ಎಂಟಿಬಿ ನಾಗರಾಜ್
ಬೆಂಗಳೂರು, ಜೂನ್ 11: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋಲಲು ಚಿಕ್ಕಬಳ್ಳಾಪುರದ ಡಾ.ಕೆ.ಸುಧಾಕರ್ ಮಾತ್ರವಲ್ಲ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯೂ ಸಹ ಕಾರಣ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಆರೋಪಿಸಿದ್ದಾರೆ.
ಈ ಕುರಿತು ಬಿಜೆಪಿ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ನನಗೆ ಮೋಸ ಮಾಡಿದ್ದಾರೆ. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋಲಬೇಕಾಯಿತು' ಎಂದು ಹೊಸಕೋಟೆ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಎಂ.ಟಿ.ಬಿ ನಾಗರಾಜ್ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.
ಇನ್ನೂ 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ನಡೆಸುತ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ನಾನು ಆಕಾಂಕ್ಷಿ ಅಲ್ಲ, ಚುನಾವಣೆಗೆ ಸ್ಪರ್ಧಿಸುವ ಆಸಕ್ತಿಯೂ ನನಗೆ ಇಲ್ಲ ಎಂದು ಮಾಧ್ಯಮಗಳ ಮೂಲಕ ಸ್ಪಷ್ಟಪಡಿಸಿದ್ದಾರೆ.

ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿಕ್ಕಬಳ್ಳಾಪುರದ ಡಾ.ಕೆ.ಸುಧಾಕರ್ ಅವರಿಗೆ ನೀಡಿದರು. ಆ ಮೂಲಕ ಆ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ ಸುವರ್ಣ ಅವಕಾಶ ತಪ್ಪಿಸಿ ಮೋಸ ಮಾಡಿದರು. ಹೀಗಾಗಿ ನಾನು ಚುನಾವಣೆಯಲ್ಲಿ ಸೋಲಬೇಕಾಯಿತು ಎಂದು ಹರಿಹಾಯ್ದರು.
ಇನ್ನೂ ಪಕ್ಷ ಅಧಿಕಾರದಲ್ಲಿದ್ದಾಗ ಹೋಸಕೋಟೆ ತಾಲ್ಲೂಕಿನ ಪಕ್ಷದ ಮುಖಂಡರಿಗೆ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನ ಸೇರಿದಂತೆ ಸರ್ಕಾರದಲ್ಲಿ ಸ್ಥಾನಮಾನ ನೀಡಲಿಲ್ಲ. ಸ್ಥಳೀಯ ಕೆಲವರಿಗಾದರೂ ಅವಕಾಶ ನೀಡಿದಿದ್ದರೆ ನನ್ನ ಕೈ ಮತ್ತಷ್ಟು ಬಲಗೊಳ್ಳುತ್ತಿತ್ತು. ಆದರೆ ಹಾಗಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ ನಡೆಸಿದರು.

ಹೊಸಕೋಟೆ ಕ್ಷೇತ್ರ ಮುಸ್ಲಿಂ ಸಮುದಾಯದ ವಿರುದ್ದವೂ ತರಾಟೆಗೆ ತೆಗೆದುಕೊಂಡ ಅವರು, ನಾನು ಅಪಾರವಾಗಿ ನಂಬಿದ್ದ ಕ್ಷೇತ್ರದ ಅಲ್ಪಸಂಖ್ಯಾತರು ಕೂಡ ಚುನಾವಣೆಯಲ್ಲಿ ನನಗೆ ಮೋಸ ಮಾಡಿದರು. ನನ್ನ ಕ್ಷೇತ್ರದ ಅಲ್ಪಸಂಖ್ಯಾತರಿಗೆ ನಾನು ನನ್ನ ಶಕ್ತಿ ಮೀರಿ ಸಹಾಯ ಮಾಡಿದ್ದೇನೆ. ಆದರೂ, ಅವರು ನನಗೆ ಮೋಸ ಮಾಡಿದರು. ನನಗೇ ಮತ ನೀಡುವುದಾಗಿ ಕುರಾನ್ ಮತ್ತು ಅಲಾ ವಿನ ಮೇಲೆಯೂ ಆಣೆ, ಪ್ರಮಾಣ ಮಾಡಿದ್ದ ಅವರು ನನಗೆ ಮತ ನೀಡದೆ ಮೋಸ ಮಾಡಿದರು. ಮುಸ್ಲಿಮರು ಬಿಜೆಪಿಗೆ ಮತ ಹಾಕಲಿಲ್ಲ. ಬಿಜೆಪಿ ನೀಡಿದ ನೋಟು ಪಡೆದು ಅವರು ಕಾಂಗ್ರೆಸ್ಗೆ ವೋಟು ಹಾಕಿದರುಇನ್ನೆಂದಿಗೂ ನಾನು ಅವರನ್ನು ನಂಬುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications