ನಾನು ಸೋಲಲು ಚಿಕ್ಕಬಳ್ಳಾಪುರದ ಕೆ.ಸುಧಾಕರ್ ಮಾತ್ರವಲ್ಲ, ಬೊಮ್ಮಾಯಿಯೂ ಕಾರಣ: ಎಂಟಿಬಿ ನಾಗರಾಜ್
ಬೆಂಗಳೂರು, ಜೂನ್ 11: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋಲಲು ಚಿಕ್ಕಬಳ್ಳಾಪುರದ ಡಾ.ಕೆ.ಸುಧಾಕರ್ ಮಾತ್ರವಲ್ಲ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯೂ ಸಹ ಕಾರಣ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಆರೋಪಿಸಿದ್ದಾರೆ.
ಈ ಕುರಿತು ಬಿಜೆಪಿ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ನನಗೆ ಮೋಸ ಮಾಡಿದ್ದಾರೆ. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋಲಬೇಕಾಯಿತು' ಎಂದು ಹೊಸಕೋಟೆ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಎಂ.ಟಿ.ಬಿ ನಾಗರಾಜ್ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.
ಇನ್ನೂ 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ನಡೆಸುತ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ನಾನು ಆಕಾಂಕ್ಷಿ ಅಲ್ಲ, ಚುನಾವಣೆಗೆ ಸ್ಪರ್ಧಿಸುವ ಆಸಕ್ತಿಯೂ ನನಗೆ ಇಲ್ಲ ಎಂದು ಮಾಧ್ಯಮಗಳ ಮೂಲಕ ಸ್ಪಷ್ಟಪಡಿಸಿದ್ದಾರೆ.

ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿಕ್ಕಬಳ್ಳಾಪುರದ ಡಾ.ಕೆ.ಸುಧಾಕರ್ ಅವರಿಗೆ ನೀಡಿದರು. ಆ ಮೂಲಕ ಆ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ ಸುವರ್ಣ ಅವಕಾಶ ತಪ್ಪಿಸಿ ಮೋಸ ಮಾಡಿದರು. ಹೀಗಾಗಿ ನಾನು ಚುನಾವಣೆಯಲ್ಲಿ ಸೋಲಬೇಕಾಯಿತು ಎಂದು ಹರಿಹಾಯ್ದರು.
ಇನ್ನೂ ಪಕ್ಷ ಅಧಿಕಾರದಲ್ಲಿದ್ದಾಗ ಹೋಸಕೋಟೆ ತಾಲ್ಲೂಕಿನ ಪಕ್ಷದ ಮುಖಂಡರಿಗೆ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನ ಸೇರಿದಂತೆ ಸರ್ಕಾರದಲ್ಲಿ ಸ್ಥಾನಮಾನ ನೀಡಲಿಲ್ಲ. ಸ್ಥಳೀಯ ಕೆಲವರಿಗಾದರೂ ಅವಕಾಶ ನೀಡಿದಿದ್ದರೆ ನನ್ನ ಕೈ ಮತ್ತಷ್ಟು ಬಲಗೊಳ್ಳುತ್ತಿತ್ತು. ಆದರೆ ಹಾಗಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ ನಡೆಸಿದರು.

ಹೊಸಕೋಟೆ ಕ್ಷೇತ್ರ ಮುಸ್ಲಿಂ ಸಮುದಾಯದ ವಿರುದ್ದವೂ ತರಾಟೆಗೆ ತೆಗೆದುಕೊಂಡ ಅವರು, ನಾನು ಅಪಾರವಾಗಿ ನಂಬಿದ್ದ ಕ್ಷೇತ್ರದ ಅಲ್ಪಸಂಖ್ಯಾತರು ಕೂಡ ಚುನಾವಣೆಯಲ್ಲಿ ನನಗೆ ಮೋಸ ಮಾಡಿದರು. ನನ್ನ ಕ್ಷೇತ್ರದ ಅಲ್ಪಸಂಖ್ಯಾತರಿಗೆ ನಾನು ನನ್ನ ಶಕ್ತಿ ಮೀರಿ ಸಹಾಯ ಮಾಡಿದ್ದೇನೆ. ಆದರೂ, ಅವರು ನನಗೆ ಮೋಸ ಮಾಡಿದರು. ನನಗೇ ಮತ ನೀಡುವುದಾಗಿ ಕುರಾನ್ ಮತ್ತು ಅಲಾ ವಿನ ಮೇಲೆಯೂ ಆಣೆ, ಪ್ರಮಾಣ ಮಾಡಿದ್ದ ಅವರು ನನಗೆ ಮತ ನೀಡದೆ ಮೋಸ ಮಾಡಿದರು. ಮುಸ್ಲಿಮರು ಬಿಜೆಪಿಗೆ ಮತ ಹಾಕಲಿಲ್ಲ. ಬಿಜೆಪಿ ನೀಡಿದ ನೋಟು ಪಡೆದು ಅವರು ಕಾಂಗ್ರೆಸ್ಗೆ ವೋಟು ಹಾಕಿದರುಇನ್ನೆಂದಿಗೂ ನಾನು ಅವರನ್ನು ನಂಬುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ












Click it and Unblock the Notifications