ಮೀಸಲಾತಿ ಅನುಷ್ಠಾನ ಮಾಡುವಂತೆ ಸರ್ಕಾರಕ್ಕೆ ಬಡಿಗೆ ಹಿಡಿದು ಕೇಳುವೆ: ಬೊಮ್ಮಾಯಿ
ಬೆಂಗಳೂರು, ಜನವರಿ 19: ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್ಟಿ ಸಮುದಾಯದ ಮೀಸಲಾತಿಯನ್ನು ಶೇಕಡಾ 3 ರಿಂದ 7 ಕ್ಕೆ ಹೆಚ್ಚಳ ಮಾಡಿರುವುದನ್ನು ಅನುಷ್ಠಾನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಬಡಿಗೆ ಹಿಡಿದು ಕೇಳುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಿಜೆಪಿ ಪರಿಶಿಷ್ಟ ಜಾತಿ (ಎಸ್ಟಿ) ಮೋರ್ಚಾ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾಷಣದಿಂದ ಯಾವುದೇ ಸಮಾಜ ಉದ್ದಾರ ಆಗಿಲ್ಲ. ಸಮಾಜಿಕ ನ್ಯಾಯ ಕೆಲವೇ ಕೆಲವು ಜನರಿಗೆ ಮೀಸಲಾಗಿದೆ. ಈ ಸಮಾಜದ ಕಡು ಬಡವರಿಗೆ, ಗ್ರಾಮೀಣ ಜನರಿಗೆ ಇದರ ಪ್ರಯೋಜನ ಸಿಕ್ಕಿಲ್ಲ. ಅವರ ಅಪ್ಪನಿಗೆ, ಮಗನಿಗೆ ಸೊಸೆಗೆ ಸಿಕ್ಕಿದೆ.

ಸ್ವಾತಂತ್ರ್ಯ ಬಂದು ಎಪ್ಪತೈದು ವರ್ಷ ಆಗಿದ್ದರು ಸಮಾಜದ ಕಟ್ಟ ಕಡೆಯ ಜನರಿಗೆ ತಲುಪದಿದ್ದರೆ ಯಾವ ರೀತಿಯ ಆಡಳಿತ ನಡೆದಿದೆ ಅಂತ ಯೋಚನೆ ಮಾಡಿ, ಎಸ್ಸಿ ಎಸ್ಟಿ ಕೇವಲ ಜಾತಿ ಸೇರಿಸಿದರೆ ಹೊರತು ಮೀಸಲಾತಿ ಹೆಚ್ಚಳ ಮಾಡಲಿಲ್ಲ ಎಂದರು.
ಡೋಂಗಿ ಸಾಮಾಜಿಕ ನ್ಯಾಯದ ನಾಯಕರಿಂದ ಅನ್ಯಾಯ
ಎಸ್ಟಿ ಸಮುದಾಯಕ್ಕೆ ಶೇಕಡಾ 7ರಷ್ಟು ಮೀಸಲಾತಿಯನ್ನು ಮೋದಿ ಸರ್ಕಾರ ಮಾಡಿದ ಮೆಲೆ ರಾಜ್ಯದಲ್ಲಿ ಶೇಕಡಾ 7ರಷ್ಟು ಮೀಸಲಾತಿ ಬೇಕು ಎಂದು ಆಗ್ರಹ ಶುರುವಾಯಿತು. ಹಿಂದುಳಿದ ವರ್ಗದ ಆಯೊಗಕ್ಕೆ ಸಂವಿಧಾನ ಬದ್ದ ಅಧಿಕಾರ ಕೊಟ್ಟಿದ್ದು ನರೇಂದ್ರಮೋದಿ ಸರ್ಕಾರ. ಡೋಂಗಿ ಸಾಮಾಜಿಕ ನ್ಯಾಯದ ನಾಯಕರು ಈ ಸಮುದಾಯಗಳಿಗೆ ಅನ್ಯಾಯ ಮಾಡಿದ್ದಾರೆ. ಯಾರು ನಮಗೆ ನ್ಯಾಯ ಕೊಡುತ್ತಾರೆ. ಯಾರು ನಮಗೆ ಅವಕಾಶ ಕೊಡುತ್ತಾರೆ ಅವರ ಶಕ್ತಿಗೆ ನಿಮ್ಮ ಶಕ್ತಿ ಜೋಡಿಸಬೇಕು ಎಂದು ಹೇಳಿದರು.

ಮೀಸಲಾತಿ ಹೆಚ್ಚಳಕ್ಕೆ ಸ್ವಾಮೀಜಿಗಳು ಸಮಾಜದ ಮುಖಂಡರು ಹೋರಾಟ ಮಾಡಿದ್ದೀರಿ ಆದರೆ, ಕಾಂಗ್ರೆಸ್ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ನಮ್ಮ ಸರ್ಕಾರ ಬಂದಾಗ ಮಹರ್ಷಿ ವಾಲ್ಮೀಕಿ ಉತ್ಸವವನ್ನು ಸರ್ಕಾರದಿಂದ ಆಚರಿಸುವಂತೆ ಕಲಬುರ್ಗಿ ಕ್ಯಾಬಿನೆಟ್ನಲ್ಲಿ ಸಚಿವರು ಪ್ರಸ್ತಾಪ ಮಾಡಿದರು.
ಬಿಜೆಪಿಯಿಂದ ಮೀಸಲಾತಿ ಹೆಚ್ಚಳ ತೀರ್ಮಾನ
ಸಂಪುಟದಲ್ಲಿ ತೀರ್ಮಾನ ಮಾಡಿದ್ದರ ಪರಿಣಾಮ ಸಮುದಾಯ ಸಂಘಟಿತವಾಗಿ ಮೀಸಲಾತಿ ಹೆಚ್ಚಳಕ್ಕೆ ಹೋರಾಟ ಮಾಡಲು ಸಾಧ್ಯವಾಯಿತು. ನಮ್ಮ ಅವಧಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಲು ತೀರ್ಮಾನ ಮಾಡಿದಾಗ ಜೇನುಗೂಡಿಗೆ ಕೈಹಾಕಬೇಡಿ ಅಂತ ಹೇಳಿದರು. ನನಗೆ ಜೇನು ಕಡಿದರೂ ಅವರಿಗೆ ಜೇನು ಕೊಡುತ್ತೇನೆ ಎಂದು ಮೀಸಲಾತಿ ಹೆಚ್ಚಳ ಮಾಡುವ ತೀರ್ಮಾನ ಮಾಡಿದೆ. ಅದರ ಪರಿಣಾಮ ಮೆಡಿಕಲ್ ಎಂಜನೀಯರಿಂಗ್ ಕಾಲೇಜುಗಳಲ್ಲಿ ಎಸ್ಟಿ ಸಮುದಾಯದ ವಿದ್ಯಾರ್ಥಿಗಳಿಗೆ ಹೆಚ್ಚಿನ ಸೀಟು ಸಿಗುತ್ತಿವೆ ಎಂದು ತಿಳಿಸಿದರು.
ಮಿಸಲಾತಿ ಹೆಚ್ಚಳದ ನಿರ್ಣಯ ನಾವು ಮಾಡಿದ್ದೇವೆ ಅದನ್ನು ಸರಿಯಾಗಿ ಅನುಷ್ಠಾನ ಮಾಡುವಂತೆ ಸರ್ಕಾರಕ್ಕೆ ಬಡಿಗೆ ಹಿಡಿದು ನಿಲ್ಲುತ್ತೇವೆ. ಎಸ್ಟಿ ಸಮುದಾಯದವರು ಬಿಟ್ಟರು ನಾನು ಈ ಸಮದಾಯಕ್ಕೆ ನ್ಯಾಯ ಕೊಡಿಸುವವರೆಗೂ ಬಿಡುವುದಿಲ್ಲ. ಎಸ್ಟಿ ಸಮುದಾಯಕ್ಕೆ ನ್ಯಾಯ ಕೊಡಿಸಿರುವ ಬಿಜೆಪಿಗೆ ಲೋಕಸಭೆ ಚುನಾವಣೆಯಲ್ಲಿ ಮತ ಹಾಕಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಬೋಗಸ್ ಒಳ ಮೀಸಲಾತಿ
ಕಾಂಗ್ರೆಸ್ ನವರು ಈಗ ಸದಾಶಿವ ಆಯೋಗದ ವರದಿ ಜಾರಿ ಮಾಡುವುದಾಗಿ ಹೇಳುತ್ತಾರೆ. ಮತ್ತೊಂದೆಡೆ ಕೇಂದ್ರಕ್ಕೆ ಶಿಪಾರಸ್ಸು ಮಾಡುವುದಾಗಿ ಹೇಳುತ್ತಾರೆ. ಈಗ ಚುನಾವಣೆ ಬರುತ್ತಿದೆ ಅಂತ ಎಸ್ಸಿ ಸಮುದಾಯದ ಜನರು ತಮ್ಮನ್ನು ಕೇಳುತ್ತಾರೆ ಎಂದು ಈಗ ವರದಿ ಜಾರಿ ಮಾಡುವುದಾಗಿ ಹೇಳುತ್ತಾರೆ. ಈಗ ಮಾಡುತ್ತಿರುವುದು ಎಲ್ಲವೂ ಬೋಗಸ್ ಒಳ ಮೀಸಲಾತಿ ವಿಚಾರ ಸುಪ್ರೀಂ ಕೋರ್ಟ್ ನಲ್ಲಿ ಇದೆ. ಅದನ್ನು ಈಗ ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಇವರು ಹೇಳುತ್ತಿದ್ದಾರೆ.
ನಿಮ್ಮ ಸಮುದಾಯದಲ್ಲಿ ನಾಯಕರನ್ನು ಹುಟ್ಟು ಹಾಕಿ, ಅನೇಕ ನಾಯಕರಿದ್ದಾರೆ. ಬೇರೆಯವರ ಭಾಷಣಕ್ಕೆ ಉಧೊ ಉಧೊ ಅನ್ನುವ ಬದಲು ನಿಮ್ಮಲ್ಲೆ ನಾಯಕರನ್ನು ಹುಟ್ಟು ಹಾಕಿ. ವಿಜಯನಗರ ಸಾಮ್ರಾಜ್ಯ ಉಳಿಸಿರುವ ಸಮುದಾಯ ಇದು. ಮದಕರಿ ನಾಯಕರನಿಂದ ಹಿಡಿದು ಸುರಪುರದ ನಾಯಕರವರೆಗೂ ವಿಜಯನಗರ ಸಾಮ್ರಾಜ್ಯ ಉಳಿಸಿದ್ದಾರೆ ಎಂದು ಬೊಮ್ಮಾಯಿ ಕಿಡಿ ಕಾರಿದರು.
ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಗೋವಿಂದ ಕಾರಜೋಳ ಸಿ.ಟಿ.ರವಿ, ರಾಜು ಗೌಡ, ಶಿವನಗೌಡ ನಾಯಕ್ ಸೇರಿದಂತೆ ಪ್ರಮುಖ ಮುಖಂಡರು ಹಾಜರಿದ್ದರು.
-
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications