PSI Scam: ಪಿಎಸ್ ಐ ಹಗರಣ ನ್ಯಾಯಾಂಗ ತನಿಖೆಗೆ ವಹಿಸಿದ್ದು,ದ್ಷೇಷದ ರಾಜಕಾರಣ : ಬಸವರಾಜ ಬೊಮ್ಮಾಯಿ
ಬೆಂಗಳೂರು, ಜುಲೈ 22: ಪಿಎಸ್ ಐ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದ್ದು,ದ್ವೇಷದ ರಾಜಕಾರಣ ಎಲ್ಲಿಗೆ ಹೋಗುತ್ತಿದೆ ಅನ್ನುವುದು ಗೊತ್ತಾಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.
ಈ ಕುರಿತು ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಿಎಸ್ ಐ ಹಗರಣ ನಾವೇ ಹೊರಗೆ ತಂದು ಸಿಐಡಿ ತನಿಖೆಗೆ ಆದೇಶ ಮಾಡಿದ್ದೇವು. ಪ್ರಕರಣದಲ್ಲಿ ಎಡಿಜಿಪಿ ಹುದ್ದೆಯ ಅಧಿಕಾರಿಯನ್ನು ಜೈಲಿಗೆ ಕಳುಹಿಸಿದ್ದೇವೆ.ಈ ಹಗರಣದಲ್ಲಿ ಕಾಂಗ್ರೆಸ್ ನವರು ಇದ್ದಾರೆ. ಪ್ರಕರಣದ ತನಿಖೆ ನಡೆದು ಕೊರ್ಟ್ನಲ್ಲಿದೆ. ಈ ಸಂದರ್ಭ ಮತ್ತೆ ತನಿಖೆಗೆ ಆದೇಶ ಮಾಡಿರುವುದು ದ್ವೇಷ ರಾಜಕೀಯವನ್ನು ತೋರಿಸುತ್ತದೆ ಎಂದು ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯವರು ಗೋಡ್ಸೆ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಲಿ ಅಂತ ಹೇಳಿದ್ದಾರೆ. ನಕಲಿ ಗಾಂಧಿಗಳ ಜಪ ಮಾಡುತ್ತಿರುವವರು ಕಾಂಗ್ರೆಸ್ ನವರು. ಗಾಂದೀಜಿಯನ್ನು ಹೆಚ್ಚು ದುರುಪಯೋಗ ಮಾಡಿ ಕೊಂಡವರು ಕಾಂಗ್ರೆಸ್ ನವರು. ಗಾಂಧಿಜಿ ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಿ ಅಂತ ಹೇಳಿದ್ದರು. ಯಾಕೆಂದರೆ ಕಾಂಗ್ರೆಸ್ ನವರಿಗೆ ದೇಶ ಆಳಲು ಬರುವುದಿಲ್ಲ ಅಂತ. ಆದರೆ, ಇವರು ಗಾಂಧೀಜಿ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಜಿವನ ದುಸ್ತರ ಆಗಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ವಿದ್ಯುತ್ ದರ ಹೆಚ್ಚಳ ಮಾಡಿದರು. ಎಲ್ಲ ಕಾಯಿಪಲ್ಯೆ ದರ ಹೆಚ್ಚಳ ಆಗಿದೆ. ಈಗ ಹಾಲಿನ ದರ ಹೆಚ್ಚಳ ಮಾಡಿದ್ದಾರೆ. ಆಗಸ್ಟ್ 1ರ ನಂತರ ಸೈಟ್, ಕಾರು, ಹೊಸ ಮನೆ ಖರೀದಿ ದರವೂ ಹೆಚ್ಚಳವಾಗಲಿದೆ ಎಂದು ಹೇಳಿದರು.
ಪುಸ್ತಕಗಳಿಗೆ ಸರ್ಕಾರದ ಪ್ರೋತ್ಸಾಹ ಹೆಚ್ಚಾದರೆ ಸಾಹಿತ್ಯದ ಮೌಲ್ಯ ಕಡಿಮೆಯಾಗುತ್ತದೆ. ಕಳಪೆ ಸಾಹಿತ್ಯ ಹೆಚ್ಚಾಗುತ್ತದೆ. ವಿಶ್ವೇಶ್ವರ ಭಟ್ಟರು ಪ್ರತಿದಿನ ಹೊಸದನ್ನು ಹುಡುಕಿ ಜನರಿಗೆ ತಿಳಿಸುತ್ತಾರೆ. ಜನರಿಗೆ ಏನಾದರೂ ಹೇಳುವುದು ಬಹಳ ಕಷ್ಟ. ಅವರಲ್ಲಿ ಇರುವ ಚಿಂತನಾ ಶಕ್ತಿ ಸದಾ ಜೀವಂತ ಇರುವುದನ್ನು ನಾನು ಕಂಡಿದ್ದೇನೆ. ಅವರು ಒಬ್ಬ ಕೇವಲ ಪತ್ರಕರ್ತನಾಗಿ ಬೆಳೆದಿಲ್ಲ. ಒಬ್ಬ ಪತ್ರಕರ್ತ ಎಲ್ಲ ರಂಗದವರೊಂದಿಗೆ ಸಂಪರ್ಕ ಹೊಂದಿರದಿದ್ದರೆ, ಅವರು ಜನರ ಮನಸಿನಿಂದ ದೂರವಾಗುತ್ತಾನೆ ಎಂದರು.
ಪತ್ರಕರ್ತರು ಮತ್ತು ರಾಜಕಾರಣಿಗಳ ನಡುವೆ ಅವಿನಾಭಾವ ಸಂಬಂಧ ಇದೆ. ಪತ್ರಕರ್ತರಿಲ್ಲದೆ ರಾಜಕಾರಣ ಇಲ್ಲ. ರಾಜಕಾರಣಿಗಳಿಲ್ಲದೆ ಪತ್ರಿಕೋದ್ಯಮ ಇಲ್ಲ. ಟೀಕೆ ಮಾಡಲಿಕ್ಕೆ ಆದರೂ ಪತ್ರಿಕೆಗಳಿಗೆ ರಾಜಕಾರಣಿಗಳು ಬೇಕು. ರಾಜಕಾರಣಿಗಳು ಭ್ರಮೆಯಲ್ಲಿರುತ್ತೇವೆ. ಆದರೆ ವಾಸ್ತವ ಹಾಗೆ ಇರುವುದಿಲ್ಲ ಎಂದರು.
ಮಾತನಾಡುವವರಿಗಿಂತ ಕೇಳುವವರು ಬುದ್ದಿವಂತರು, ಬರೆಯುವವರಿಗಿಂತ ಓದುವವರು ಬುದ್ದಿವಂತರು ಅಂತ ಅರ್ಥ ಮಾಡಿಕೊಳ್ಳಬೇಕು. ಪುಸ್ತಕ ಉದ್ಯಮ ಯಾವಾಗಲೂ ಸಂಕಷ್ಟದಲ್ಲಿ ಇರುತ್ತದೆ. ಓದುಗರು ಸಾಹಿತ್ಯವನ್ನು ಖರೀದಿ ಮಾಡಿ ಅದರ ಆದಾಯ ಲೇಖಕನಿಗೆ ಸಿಗುವವರೆಗೂ ಪುಸ್ತಕೋದ್ಯಮ ಸಂಕಷ್ಟದಲ್ಲಿಯೇ ಇರುತ್ತದೆ. ಆದರೆ, ಸರ್ಕಾರದಿಂದ ಸೂಕ್ತ ಪ್ರೋತ್ಸಾಹವೂ ಸಿಗಬೇಕು ಎಂದರು.
ನಮ್ಮ ಭವಿಷ್ಯ ಹೇಗಾದರೂ ರೂಪಿಸಬಹುದು, ಡಾಕ್ಟರ್, ಎಂಜನೀಯರ್, ಲಾಯರ್ ಆದರೂ ಮಾನವೀಯ ಗುಣಗಳು ಕಡೆಯಾಗುತ್ತಿವೆ. ಹೆಣ್ಣು ಮಕ್ಕಳ ಮೇಲೆ ಗೌರವ ಇಲ್ಲ. ಮಕ್ಕಳ ಮೇಲೆ ಕರುಣೆ ಇಲ್ಲ. ಎಲ್ಲೆಡೆ ದೌರ್ಜನ್ಯ ಅನ್ಯಾಯ ಹೆಚ್ಚಾಗುತ್ತಿದೆ. ನಾನು ಯಾವಾಗ ವಿಚಲಿತನಾಗುತ್ತೇನೊ ಆಗ ಭಗವದ್ವೀತೆ ಓದುತ್ತೇನೆ. ಅದರಿಂದ ನನ್ನ ಮನಸಿಗೆ ಶಾಂತಿ ದೊರೆಯುತ್ತದೆ.
ಭಗವದ್ವೀತೆ ಎಲ್ಲ ಕಾಲಕ್ಕೂ ಪರಿಹಾರ ಒದಗಿಸುವ ಕೃತಿಯಾಗಿದೆ. ಮನುಷ್ಯ ಎಲ್ಲ ಪ್ರಾಣಿಗಳಿಗಿಂತ ಶ್ರೇಷ್ಟ ಅಂತ ಹೇಳುತ್ತೇವೆ. ಅದಕ್ಕೆ ಕಾರಣ ಎಲ್ಲ ಪರಿಸ್ಥಿತಿಗೂ ಹೊಂದಿಕೊಳ್ಳುವ ಮನಸ್ಥಿತಿ ಮನುಷ್ಯನಿಗೆ ಇದೆ. ನಮ್ಮ ಪರಿಸರ ನಿರಂತರ ಹಾಳಾಗುತ್ತಿದೆ. ಈ ಬಗ್ಗೆಯೂ ಸಾಕಷ್ಟು ಪುಸ್ತಕಗಳು ಬಂದಿವೆ. ಆದರೆ, ಪರಿಸರದ ನಾಶ ನಿಂತಿಲ್ಲ. ಅದಕ್ಕಾಗಿ ನಾನು ಇಕೊ ಬಜೆಟ್ ಮಾಡಿದ್ದೆ ಎಂದು ಹೇಳಿದರು.
-
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ












Click it and Unblock the Notifications