ಹೈಕಮಾಂಡ್ ನಾಯಕರ ಭೇಟಿ; ಪತ್ರಿಪಕ್ಷದ ನಾಯಕನ ಆಯ್ಕೆ ಯಾವಾಗ?: ಬಸವರಾಜ ಬೊಮ್ಮಾಯಿ ಹೇಳಿದಿಷ್ಟು?
ಬೆಂಗಳೂರು, ಆಗಸ್ಟ್ 11: ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿ ಮೂರು ತಿಂಗಳು ತಿಂಗಳಾದರೂ ವಿಪಕ್ಷ ನಾಯಕ ಆಯ್ಕೆ ಕಗ್ಗಂಟಾಗಿದೆ. ಈ ಕುರಿತು ಬಿಜೆಪಿ ಹೈಕಮಾಂಡ್ ಚರ್ಚೆ ನಡೆಸಿದ್ದು, ವಿರೋಧ ಪಕ್ಷದ ನಾಯಕನ ಆಯ್ಕೆ ತಡವಾಗುತ್ತಿರುವ ಹಿನ್ನಲೆ ರಾಜ್ಯ ಬಿಜೆಪಿ ಸಾಕಷ್ಟು ಮುಜುಗರವನ್ನ ಅನುಭವಿಸುತ್ತಿದ್ದು, ವಿಪಕ್ಷ ನಾಯಕ ಆಯ್ಕೆ ಇನ್ನೂ ತಡವಾಗಲಿದೆ.
ಹೌದು, ಈ ಕುರಿತು ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಭೇಟಿ ಮಾಡಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ನೀಡಿದ್ದು, ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಹೇಳಿದರು.

ನಾನು ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ, ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಾಗೂ ಪಕ್ಚದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದೇನೆ. ಅಲ್ಲದೇ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಿದ್ದೇನೆ ಎಂದು ಹೇಳಿದರು.
ಇನ್ನೂ ಮುಂದಿನ ಲೋಕಸಭೆ ಚುನಾವಣೆ ಸಿದ್ದತೆ, ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರ ಅಭಿಪ್ರಾಯ, ಸರ್ಕಾರದ ವಿರುದ್ದ ಮುಂದಿನ ಹೋರಾಟದ ಕುರಿತು ಚರ್ಚೆ ಮಾಡಿದ್ದೇವೆ. ಶೀಘ್ರವೇ ರಾಜ್ಯ ಸರ್ಕಾರದ ಎಲ್ಲ ವೈಫಲ್ಯಗಳ ವಿರುದ್ದ ಬೃಹತ್ ಹೋರಾಟ ರೂಪಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಅಲ್ಲದೇ ಆಗಸ್ಟ್ 8 ರಂದು ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದ ಬೊಮ್ಮಾಯಿ, ಪ್ರತಿಪಕ್ಷದ ನಾಯಕನ ಸ್ಥಾನ ನನಗೆ ಕೊಡಿ ಎಂದು ಕೇಳುವುದಕ್ಕಾಗಿ ಬಂದಿಲ್ಲ. ಆದರೆ, ಶೀಘ್ರದಲ್ಲೇ ಪ್ರತಿಪಕ್ಷ ನಾಯಕನನ್ನು ನೇಮಕ ಮಾಡದಿದ್ದರೆ ನಕಾರಾತ್ಮಕ ಅಭಿಪ್ರಾಯ ಮೂಡುತ್ತದೆ ಎಂದು ಹೇಳಿದ್ದರು ಎಂದು ತಿಳಿದು ಬಂದಿದೆ.
ಇನ್ನೂ ವಿರೋಧ ಪಕ್ಷದ ನಾಯಕ ಸ್ಥಾನಕ್ಕಾಗಿ ಬಿಜೆಪಿ ಪಾಳಯದಲ್ಲಿ ಹಲವು ಹಿರಿಯ ನಾಯಕರು ರೇಸ್ ನಲ್ಲಿದ್ದು, ಬಹಿರಂಗವಾಗಿ ವಿಪಕ್ಷ ಸ್ಥಾನದ ಆಯ್ಕೆ ಕುರಿತು ಹೇಳಿಕೆಯನ್ನ ನೀಡಿದ್ದಾರೆ. ಅಲ್ಲದೇ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ , ಆರ್. ಅಶೋಕ್, ಅಶ್ವತ್ಥ ನಾರಾಯಣ, ಸುನೀಲ್ ಕುಮಾರ್ ಹೆಸರು ಕೂಡ ಕೇಳಿ ಬಂದಿದ್ದು,ಬಸವನಗೌಡ ಪಾಟೀಲ್ ಯತ್ನಾಳ್ ಸಹ ವಿಪಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಸದ್ಯ ಯತ್ನಾಳ್ ಹಾಗೂ ಬಸವರಾಜ ಬೊಮ್ಮಾಯಿ ನಡುವೆ ವಿಪಕ್ಷ ಸ್ಥಾನಕ್ಕಾಗಿ ಮುಂಚೂಣಿಯಲ್ಲಿದ್ದಾರೆ.
ಒಟ್ನಲಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಅನುಭವಿಸಿರುವ ಬಿಜೆಪಿಗೆ ಸಮರ್ಥ ವಿರೋಧ ಪಕ್ಷದ ನಾಯಕನ ಆಯ್ಕೆಯೇ ದೊಡ್ಡ ಸವಾಲಾಗಿದ್ದು, ಸುಮಾರು ಮೂರೂವರೆ ತಿಂಗಳಾದರೂ ಬಿಜೆಪಿಯು ಪ್ರತಿಪಕ್ಷ ನಾಯಕನ ನೇಮಕ ಮಾಡಿಲ್ಲ. ವಿಪಕ್ಷ ನಾಯಕನಿಲ್ಲದೇ ಬಜೆಟ್ ಅಧಿವೇಶನವೂ ನಡೆದಿದ್ದು, ಕಾಂಗ್ರೆಸ್ ನಾಯಕರ ಟೀಕೆಯಿಂದಾಗಿ ಬಿಜೆಪಿಯನ್ನು ಮುಜುಗರಕ್ಕೀಡುಮಾಡಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications