ಇಟಲಿ ಹಾಗೂ ಕರ್ನಾಟಕದ ನಡುವಿನ ಬಾಂಧವ್ಯ ವೃದ್ದಿಗೆ ಸಹಕಾರ
ಬೆಂಗಳೂರು, ಮೇ 05: ಇಟಲಿ ಹಾಗೂ ಕರ್ನಾಟಕದ ನಡುವಿನ ಬಾಂಧವ್ಯ ವೃದ್ದಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಗುರುವಾರ ಬೆಂಗಳೂರಿನಲ್ಲಿ ಇಟಲಿಯ ವಿದೇಶಾಂಗ ವ್ಯವಹಾರಗಳ ಸಚಿವ ಲುಯಿಗಿ ಡಿ. ಮಾಯೊ ನೇತೃತ್ವದ ನಿಯೋಗ ಬಸವರಾಜ ಬೊಮ್ಮಾಯಿಯನ್ನು ಭೇಟಿ ಮಾಡಿತು. ಭಾರತ ಮತ್ತು ಇಟಲಿಯ ಸಾಂಸ್ಕೃತಿ ಮತ್ತು ವ್ಯವಹಾರಿಕ ಸಂಬಂಧ ಬಹಳ ಹಿಂದಿನಿಂದಲೂ ಇದೆ. ಈ ವ್ಯವಹಾರಿಕ ಸಂಬಂಧವನ್ನು ಮತ್ತಷ್ಟು ವೃದ್ಧಿಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಇಟಲಿಯ ವಿದೇಶಾಂಗ ವ್ಯವಹಾರಗಳ ಸಚಿವರು ಕರ್ನಾಟಕದೊಂದಿಗೆ ಇಟಲಿ ಅತ್ಯುತ್ತಮ ಬಾಂಧವ್ಯವನ್ನು ಹೊಂದಲು ಇಚ್ಚಿಸಿದ್ದು, ಇಟಲಿಗೆ ಭೇಟಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದರು. ನಿಯೋಗವು ದೇಶದಲ್ಲಿ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ ಹಾಗೂ ಬೆಂಗಳೂರಿನ ಮಹತ್ವವನ್ನು ಅರಿತುಕೊಂಡಿದೆ. ಬೆಂಗಳೂರು ಮತ್ತು ಇಟಲಿಯ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ ಆಸಕ್ತಿ ವ್ಯಕ್ತಪಡಿಸಿದೆ.

ಮಾರ್ಬಲ್, ಗ್ರ್ಯಾನೈಟ್, ಟಯರ್ ಉತ್ಪಾದನಾ ಘಟಕಗಳು ಕಳೆದ 40 ವರ್ಷಗಳಿಂದ ಬೆಂಗಳೂರಿನಲ್ಲಿವೆ. ಬೆಂಗಳೂರಿನ ಸುತ್ತಮುತ್ತ ಆಧುನಿಕ ಟೈಲ್ಸ್ ಉತ್ಪಾದಕ ಘಟಕಗಳಿವೆ. ಇವುಗಳಲ್ಲಿ ಶೇ.99% ರಷ್ಟು ಘಟಕಗಳಲ್ಲಿ ಇಟಲಿಯ ಯಂತ್ರಗಳು ಬಳಕೆಯಾಗುತ್ತಿವೆ.

ಬೆಂಗಳೂರು ವಿಜ್ಞಾನ ನಗರಿ; ವಿಜ್ಞಾನ ಕ್ಷೇತ್ರದಲ್ಲಿ ಇಟಲಿ ನಿಯೋಗ ವ್ಯಕ್ತಪಡಿಸಿದ ಆಸಕ್ತಿಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ, "ಕರ್ನಾಟಕದಲ್ಲಿ ಜನಸಾಮಾನ್ಯರೂ ತಮ್ಮ ದಿನನಿತ್ಯದ ಬದುಕಿನಲ್ಲಿ ವಿಜ್ಞಾನವನ್ನು ಬಳಸುತ್ತಾರೆ. ಬೆಂಗಳೂರು ವಿಜ್ಞಾನ ನಗರ. ಇಲ್ಲಿನ ಶಿಕ್ಷಣ ಹಾಗೂ ಆಲೋಚನೆಗಳು ವೈಜ್ಞಾನಿಕವಾಗಿದೆ. ಸಂಶೋಧನೆ, ತಂತ್ರಜ್ಞಾನ, ಸ್ಟಾರ್ಟ್ ಆಪ್ ಹಾಗೂ ಯೂನಿಕಾರ್ನ್, ಐಟಿ-ಬಿಟಿ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ" ಎಂದರು.
"ಇವೆಲ್ಲವುಗಳ ಬೆಳವಣಿಗೆಗೆ 150 ವರ್ಷಗಳ ಹಿಂದೆಯೇ ಮೈಸೂರು ಮಹಾರಾಜರು ಬುನಾದಿಯನ್ನು ಹಾಕಿದ್ದರು. ಎಚ್ಎಂಟಿ, ಬಿಐಎಲ್, ಎಚ್ಎಎಲ್ ಹೀಗೆ ಅನೇಕ ಮುಂತಾದ ಉತ್ಪಾದನಾ ಕೇಂದ್ರಿತ ಕಾರ್ಖಾನೆಗಳು, ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ಪೂರಕವಾದ ವಾತಾವರಣ ನಿರ್ಮಿಸಿದ್ದಾರೆ" ಎಂದು ಹೇಳಿದ ಮುಖ್ಯಮಂತ್ರಿಗಳು ಮೈಸೂರು ಸಂಸ್ಥಾನದ ಕೊಡುಗೆ ನೆನಪಿಸಿಕೊಂಡರು.

"ನಮ್ಮ ಸರ್ಕಾರ ಸ್ಟಾರ್ಟ್ ಆಪ್ಗಳು ಹಾಗೂ ಯೂನಿಕಾರ್ನ್ಗಳ ಸ್ಥಾಪನೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಬೆಂಗಳೂರು ದೇಶದ ವಿಜ್ಞಾನ ಹಾಗೂ ಆರ್ಥಿಕ ರಾಜಧಾನಿ ಹಾಗೂ ದೇಶದ ಭವಿಷ್ಯವಾಗಿರುತ್ತದೆ" ಎಂದು ತಿಳಿಸಿದರು.
-
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ











Click it and Unblock the Notifications