Breaking; ಪಿಣರಾಯಿ ವಿಜಯನ್ ಭೇಟಿಯಾದ ಬಸವರಾಜ ಬೊಮ್ಮಾಯಿ
ಬೆಂಗಳೂರು, ಸೆಪ್ಟೆಂಬರ್ 18: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಬಸವರಾಜ ಬೊಮ್ಮಾಯಿ ಭೇಟಿಯಾದರು. ಬೆಂಗಳೂರಿನಲ್ಲಿ ಉಭಯ ನಾಯಕರು ಭೇಟಿಯಾಗಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು.
ಭಾನುವಾರ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ಪಿಣರಾಯಿ ವಿಜಯನ್ ಭೇಟಿ ಮಾಡಿದರು. ಮೈಸೂರು ಪೇಟ ತೊಡಿಸಿ, ಹೂ ಗುಚ್ಛ ನೀಡಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.

ಉಭಯ ರಾಜ್ಯದ ಮುಖ್ಯಮಂತ್ರಿಗಳ ಭೇಟಿ ಸಮಯದಲ್ಲಿ ವಸತಿ ಸಚಿವ ವಿ. ಸೋಮಣ್ಣ, ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಕೆಲವು ದಿನಗಳ ಹಿಂದೆ ತಿರುವನಂತಪುರದಲ್ಲಿ ದಕ್ಷಿಣ ಭಾರತದ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆದಿತ್ತು. ಈ ಸಭೆಯ ಮುಂದುವರೆದ ಭಾಗವಾಗಿ ಬೆಂಗಳೂರಿನಲ್ಲಿ ಇಬ್ಬರು ಮುಖ್ಯಮಂತ್ರಿಗಳು ಇಂದು ಭೇಟಿ ಮಾಡಿದರು.
ಕೇರಳ ಸರ್ಕಾರದ ಪ್ರಸ್ತಾವಿತ ತಿರುವನಂತಪುರ-ಕಾಸರಗೋಡು ಸೆಮಿ ಹೈಸ್ಪೀಡ್ ರೈಲು ಯೋಜನೆಯನ್ನು ಮಂಗಳೂರಿನ ತನಕ ವಿಸ್ತರಣೆ ಮಾಡಲಾಗುತ್ತದೆ ಎಂಬ ಸುದ್ದಿಗಳಿವೆ. ಈ ಕುರಿತು ಉಭಯ ಮುಖ್ಯಮಂತ್ರಿಗಳು ಚರ್ಚೆ ನಡೆಸಲಿದ್ದಾರೆ.
ಮೂರು ಪ್ರಸ್ತಾವನೆಗಳು ತಿರಸ್ಕಾರ; ಕೇರಳ ಮುಖ್ಯಮಂತ್ರಿಗಳ ಭೇಟಿ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಕೇರಳ ಪ್ರಸ್ತಾಪಿಸಿದ ಮೂರು ಯೋಜನೆಗಳನ್ನು ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಗೆ ಬರುವ ಕಾರಣ ತಿರಸ್ಕರಿಸಲಾಗಿದೆ" ಎಂದರು.
"ಎರಡು ಮೂರು ಯೋಜನೆಗಳನ್ನು ಮುಂದಿಟ್ಟುಕೊಂಡು ಅವರು ಚರ್ಚೆ ನಡೆಸಿದರು. ಕನ್ಯೂಯೂರು ರೈಲ್ವೆ ಮಾರ್ಗದಲ್ಲಿ 45 ಕಿ. ಮೀ. ನಷ್ಟು ಸುಳ್ಯ ವ್ಯಾಪ್ತಿಗೆ ಬರುತ್ತದೆ. ಪರಿಸರ ಸೂಕ್ಷ್ಮ ವಲಯದಲ್ಲಿ ಬರುವ ಕಾರಣ ಕೇಂದ್ರ ಸರ್ಕಾರ ಈ ಯೋಜನೆ ತಿರಸ್ಕಾರ ಮಾಡಿದೆ" ಎಂದು ಮುಖ್ಯಮಂತ್ರಿಗಳು ಹೇಳಿದರು.
"ಮೈಸೂರು ರೈಲ್ವೆ ಮಾರ್ಗ, ಸುರಂಗದ ಮೂಲಕ ರೈಲು ಮಾರ್ಗಗಳ ಪ್ರಸ್ತಾವನೆಯನ್ನು ಮುಂದಿಟ್ಟರು. ಆದರೆ ಬಂಡೀಪುರ ಸೂಕ್ಷ್ಮ ವಲಯ ಪರಿಸರ ನಾಶವಾಗಲಿದೆ. ಆದ್ದರಿಂದ ಯೋಜನೆ ತಿರಸ್ಕಾರ ಮಾಡಲಾಗಿದೆ" ಎಂದು ಸ್ಪಷ್ಟಪಡಿಸಿದರು.
-
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ












Click it and Unblock the Notifications