ಸುದೀಪ್-ದರ್ಶನ್ ಫ್ಯಾನ್ಸ್ ವಾರ್: ಕಿಚ್ಚನ ಪರ ಬ್ಯಾಟಿಂಗ್ ಬೀಸಿದ ಮಾಜಿ ಸಿಎಂ
ಕಲಬುರಗಿ: ಸ್ಯಾಂಡಲ್ವುಡ್ನಲ್ಲಿ ಮತ್ತೆ ಯುದ್ಧಕಾಂಡ ಶುರುವಾಗಿದೆ. ಕಿಚ್ಚ ಸುದೀಪ್ ಮತ್ತು ದಾಸ ದರ್ಶನ್ ಅಭಿಮಾನಿಗಳು ನಡುವೆ ಫ್ಯಾನ್ಸ್ ವಾರ್ ಶುರುವಾಗಿದೆ. ಅಷ್ಟಕ್ಕೂ ಈ ಫ್ಯಾನ್ಸ್ ವಾರ್ಗೆ ಕಾರಣ ಆಗಿದ್ದು ಬೇರ್ರಾರೂ ಅಲ್ಲ ಖುದ್ದು ಕಿಚ್ಚ ಸುದೀಪ್ ಮತ್ತು ದರ್ಶನ್ ಪತ್ನಿ ವಿಜಯಲಕ್ಷ್ಮೀ ಆಡಿದ ಈ ಮಾತುಗಳು. ಇನ್ನೂ ಸುದೀಪ್- ದರ್ಶನ್ ನಡುವಿನ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕಿಚ್ಚ ಸುದೀಪ್ ಅವರ ಪರ ಬ್ಯಾಟಿಂಗ್ ಬೀಸಿದ್ದಾರೆ.
ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುದೀಪ್- ದರ್ಶನ್ ನಡುವಿನ ವಿಚಾರ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಸುದೀಪ್ ಸಿನಿಮಾ ಪೈರಸಿ ಬಗ್ಗೆ ಮಾತನಾಡಿದ್ದರೆ, ಪೈರಸಿ ಬಗ್ಗೆ ಆಂಟಿ ಪೈರಸಿ ಕಾನೂನು ಇದೆ. ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಸಿನಿಮಾ ಅಷ್ಟೆ ಅಲ್ಲಾ, ಎಲ್ಲಾ ರಂಗದಲ್ಲೂ ಕೂಡ ಪೈರಸಿ ಇದೆ. ಹಾಗಾಗಿ ಇದರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಅಮೃತಾಂಜನ್, ವಿಕ್ಸ್ ಹಿಡಿದು ಎಲ್ಲವೂ ಡೂಪ್ಲಿಕೆಟ್ ಆಗುತ್ತಿವೆ. ಹಾಗೇ ಸಿನೇಮಾ ಕೂಡ ಪೈರೆಸಿ ತಡೆಗಟ್ಟಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಕಲಬುರಗಿ: ರಾಜ್ಯ ಕಾಂಗ್ರೆಸ್ ನಾಯಕರ ಕುರ್ಚಿ ಕಚ್ಚಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಟಿತವಾಗಿದೆ. ಇದು ನಾವು ಮಾತ್ರವಲ್ಲ ಆಡಳಿತ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಇದರಿಂದ ಆಡಳಿತದ ಮೇಲೆ ದುಷ್ಪರಿಣಾಮ ಆಗುತ್ತಿದೆ ಅಂತ ಕೆಪಿಸಿಸಿ ಉಪಾಧ್ಯಕ್ಷರೇ ಸ್ವತಃ ಪತ್ರ ಬರೆದಿದ್ದಾರೆ. ಯಾವ ಸರಕಾರ ಸ್ಥಿರ ಇರಲ್ಲವೋ ಸಹಜವಾಗಿಯೇ ಅಭಿವೃದ್ದಿ ಕುಂಠಿತವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಾಂಗ್ರೆಸ್ ನಲ್ಲಿ ಹೈ ಇದೆ. ಕಮಾಂಡ್ ಇಲ್ಲವೇ ಇಲ್ಲ ಕಾಂಗ್ರೆಸ್ ನಲ್ಲಿ ಗೊಂದಲ ಇದೆ. ಇದರಲ್ಲಿ ಎರಡು ಮಾತಿಲ್ಲ ಕಾಂಗ್ರೆಸ್ ಹೈಕಮಾಂಡೇ ಎರಡು ಭಾಗ ಆಗಿ ಹೋಗಿದೆ. ರಾಜ್ಯದಲ್ಲಿ ಉಂಟಾಗಿರುವ ಗೊಂದಲದಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಪಾತ್ರ ಬಹಳ ದೊಡ್ಡದು ಇದೆ. ಕರ್ನಾಟಕ ಕಾಂಗ್ರೆಸ್ ನಾಯಕರು ಪರಿಣಿತರಿದ್ದಾರೆ. ಆದರೆ ಎಲ್ಲವೂ ಇಲ್ಲಿಂದಲೇ ಹೋಗುವಾಗ ಹೈಕಮಾಂಡ್ ಮಾತು ಯಾಕೆ ಇವರು ಕೇಳುತ್ತಾರೆ ಎಂದು ಪ್ರಶ್ನಿಸಿದರು.
ದ್ವೇಷ ಭಾಷಣ ವಿರುದ್ಧದ ವಿಧೆಯಕದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಧ್ವೇಷ ಭಾಷಣ ಕಾಯ್ದೆ ಇದೊಂದು ದಮನಕಾರಿ ಕಾನೂನು. ದ್ವೇಷ ಭಾಷಣ ಅಂದರೆ ಏನು ಎನ್ನುವ ವ್ಯಾಖ್ಯಾನ ದೊಡ್ಡ ಪ್ರಮಾಣದಲ್ಲಿ ಮಾಡಿದ್ದಾರೆ. ಯಾರನ್ನು ಯಾವಾಗ ಬೇಕಾದರೂ ಒಳಗೆ ಹಾಕುವ ರೀತಿ ಮಾಡಿದ್ದಾರೆ. ರಾಜ್ಯ ಸರಕಾರ ಎಲ್ಲಾ ರಂಗದಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಅಭಿವೃದ್ದಿ ಶೂನ್ಯವಾಗಿದೆ. ಸರಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಯಾರೂ ಇದನ್ನು ಪ್ರಶ್ನೆ ಮಾಡಬಾರದು ಅಂತ ಈ ಕಾಯ್ದೆ ಜಾರಿಗೆ ತರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಪ್ರಚೋದನಕಾರಿಯಾಗಿ ಮಾತನಾಡಿದರೆ ಕ್ರಮಕ್ಕೆ ಈಗಾಗಲೇ ಬಿಎನ್ ಎಸ್ ಕಾಯಿದೆಯಲ್ಲಿ ಇದೆ. ಮತ್ತೆ ವಿಶೇಷ ಕಾನೂನು ತರುವ ಅಗತ್ಯ ಏನಿದೆ ? ವಿರೋಧ ಪಕ್ಷಗಳು ಸಣ್ಣ ಪುಟ್ಟ ಮಾತನಾಡಿದರೂ ಒಳಗೆ ಹಾಕಬಹುದು ಅಂತ ಈ ಕಾನೂನು ತರುತ್ತಿದ್ದಾರೆ. ತುರ್ತು ಪರಿಸ್ಥಿತಿಯ ಅವಧಿಯಲ್ಲೂ ಹೀಗೆ ಇರಲಿಲ್ಲ. ಇದು ಅಘೋಷಿತ ಅಲ್ಲ ಘೋಷಿತ ಎಮರ್ಜನ್ಸಿ, ನಾನೂ ರಾಜ್ಯಪಾಲರನ್ನು ಭೇಟಿ ಮಾಡುವೆ. ಅಗತ್ಯ ಬಿದ್ದರೆ ಕಾನೂನು ಹೋರಾಟ ಸಹ ಮಾಡುತ್ತೇವೆ. ಕಾನೂನು ಯಾರ ಕೈಯಲ್ಲಿ ಇದೆ ಎನ್ನುವುದು ಮುಖ್ಯ. ಧ್ವೇಷ ರಾಜಕಾರಣ ಮಾಡುತ್ತಿರುವವರ ಕೈಯಲ್ಲಿ ಸದ್ಯ ಅಧಿಕಾರ ಇದೆ. ಹಾಗಾಗಿ ಹೊಸ ಕಾನೂನು ಆತಂಕಕಾರಿ ಎನ್ನುತ್ತಿದ್ದೇವೆ ಎಂದು ಹೇಳಿದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications