'ಸಿದ್ದರಾಮಯ್ಯ ಸಿಎಂ ದಾಖಲೆಯ ಅವಧಿ ನನಪಿಗಾಗಿ ಈ ಜಿಲ್ಲೆಗೆ 'ಸೂಪರ್ ಸ್ಪೆಷಾಲಿಟಿ ಆಸತ್ರೆ ಘೋಷಿಸಿ'
ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಸುದೀರ್ಘ ಅವಧಿಯ ಮುಖ್ಯಮಂತ್ರಿಗಳಾಗಿ ದಾಖಲೆ ಮಾಡಿದ್ದಾರೆ. ಅದರ ನೆನಪಿನಲ್ಲಿ ಅವರು ಹಾವೇರಿ ಜಿಲ್ಲೆಗೊಂದು 'ಸೂಪರ್ ಸ್ಪೆಷಾಲಿಟಿ ಆಸತ್ರೆ' ಸ್ಥಾಪನೆಗೆ ಘೋಷಿಸಬೇಕು. ಜಿಲ್ಲೆ ಜನರಿಗೆ ಇಂಥದ್ದೊಂದು ಕೊಡುಗೆ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು.
ಜಿಲ್ಲೆಯ ದೇವಗಿರಿ - ಯಲ್ಲಾಪುರ ಬಳಿ ನೂತನವಾಗಿ ನಿರ್ಮಿಸಲಾದ ಹಾವೇರಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಈ ವೇಳೆ ವೇದಿಕೆ ಮೇಲೆ ಸಿದ್ದರಾಮಯ್ಯನವರು, ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ, ಸಚಿವರುಗಳಾದ ಶಿವಾನಂದ ಪಾಟೀಲ್, ಡಾ.ಶರಣಪ್ರಕಾಶ ಪಾಟೀಲ್ ಸಹ ಪಾಲ್ಗೊಂಡಿದ್ದರು. ಅವರ ಸಮ್ಮುಖದಲ್ಲಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕು ಎಂದು ಕೋರಿದರು. ಜಿಲ್ಲೆಯ ಜನರ ಬಹುಬೇಡಿಕೆಯ ವೈದ್ಯಕೀಯ ಕಾಲೇಜು ಉದ್ಘಾಟನೆ ಇಂದು ಆಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

2017 ರಲ್ಲಿ ಜಿಲ್ಲೆಗೆ ವೈದ್ಯಕೀಯ ಕಾಲೇಜು ಘೋಷಣೆ ಆದರೂ ಚುನಾವಣೆ ಎದುರಾದ ಹಿನ್ನೆಲೆಯಲ್ಲಿ ನಂತರ ಸರ್ಕಾರಗಳು ಇದಕ್ಕೆ ಮುತುವರ್ಜಿ ವಹಿಸಲಿಲ್ಲ. ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎಲ್ಲೆಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಇಲ್ಲ ಅಲ್ಲಿ ಮೆಡಿಕಲ್ ಕಾಲೇಜು ಮಾಡಬೇಕೆಂದು ನಿರ್ಧರಿಸಿತು. ಅದರನ್ವಯ ಕಳೆದ 11 ವರ್ಷದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 60/40 ಅನುಪಾತದಲ್ಲಿ ರಾಜ್ಯದ ಹಾವೇರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಸೇರಿ ನಾಲ್ಕು ಮೆಡಿಕಲ್ ಕಾಲೇಜು ಕೊಟ್ಟಿವೆ.
ಕಾಲೇಜು ಸ್ಥಾಪನೆಗಾಗಿ ಕೇಂದ್ರ ಸರ್ಕಾರ 194 ಕೋಟಿ ರೂ. ಒದಗಿಸಿದೆ. ಅಲ್ಲದೇ ಕ್ರಿಟಿಕಲ್ ಕೇರ್ ಸೆಂಟರ್ ಗೆ 50 ಕೋಟಿ ರೂ.ನೀಡಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಲ್ಲಿ ಕಟ್ಟಡ ಉದ್ಘಾಟನೆ ಆಗಿದೆ. 2023 ರಲ್ಲಿಯೇ ಕಾಲೇಜು ಆರಂಭವಾಗಿದೆ. ಈಗಾಗಲೇ ಮೂರು ವರ್ಷ ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡಿದ್ದಾರೆ. ನಮ್ಮ ಭಾಗದಲ್ಲಿ ಈ ಕೆಲಸ ಆಗಬೇಕಾದರೆ ನಾವೆಲ್ಲರೂ ಕೂಡ ಜನರ ಕೇಂದ್ರ ಬಿಂದುವಾಗಿ ನಮ್ಮ ಕೆಲಸ ಮಾಡಿದಾಗ ಸಾಧ್ಯ ಎನ್ನುವುದಕ್ಕೆ ಇದು ಸಾಕ್ಷಿ ಎಂದರು.
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ವ್ಯವಸ್ಥೆ ಸರಿ ಇಲ್ಲ
ಮೆಡಿಕಲ್ ಕಾಲೇಜನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ಜೋಡಿಸಿದ್ದೇವೆ. ಅದರ ವ್ಯವಸ್ಥೆ ಸರಿ ಇಲ್ಲ. ಒಂದು ಸೂಪರ್ ಸ್ಪೆಷಾಲಿಟಿ ಆಸತ್ರೆಯನ್ನು ಘೋಷಣೆ ಮಾಡಬೇಕು ಎಂದು ಕೇಳಿಕೊಳ್ಳುತ್ತೇನೆ. ಅದು ಬಹಳ ಅವಶ್ಯಕತೆ ಇದೆ. ನಮಗೆ ಏನಾದರೂ ತೊಂದರೆ ಆದರೆ ಹುಬ್ಬಳ್ಳಿ ಅಥವಾ ದಾವಣಗೆರೆಗೆ ಹೋಗಬೇಕಿದೆ ಎಂದು ಜಿಲ್ಲೆಯ ವೈದ್ಯಕೀಯ ಪರಿಸ್ಥಿತಿಯನ್ನು ಅವರು ವಿವರಸಿದರು.

ಸಿದ್ದರಾಮಯ್ಯ ಅವರು ಸಿಎಂ ಆಗಿ ಹೆಚ್ಚು ದಿನ ಅಧಿಕಾರ ಮಾಡಿದ್ದಕ್ಕಾಗಿ ನಮಗೆ ಸಂತೋಷವಾಗಿದೆ. ಇವತ್ತು ಅವರ ದಾಖಲೆಯ ದಿನ ಇದು ಚಿರಸ್ಮರಣೀಯ ಆಗಬೇಕು. ಸಿದ್ದರಾಮಯ್ಯ ದಾಖಲೆ ಮಾಡಿದ ದಿನ ನಮ್ಮ ಹಾವೇರಿಗೆ ಕೊಡುಗೆ ಕೊಟ್ಟಿದ್ದಾರೆ ಎಂದು ನೆನಪು ಉಳಿಯಲು ಸೂಪರ್ ಸಷಾಲಿಟಿ ಆಸತ್ರೆ ಘೋಷಣೆ ಮಾಡುವಂತೆ ಅವರು ಪುನರುಚ್ಚರಿಸಿದರು.
ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣದ ಅವಶ್ಯಕತೆ ಇಲ್ಲ. ಪೈಪೋಟಿ ಇರಲಿ ನಮ್ಮ ಆಯ್ಕೆ ಪೀಪಲ್ ಓರಿಯಂಟಲ್ ಪೊಲಿಟಿಕ್ಸ್, ಸಿದ್ದರಾಮಯ್ಯ ಅವರ ದಾಖಲೆಯನ್ನು ಮುರಿದಿದ್ದಾರೆ. ದೇವರಾಜ ಅರಸು ಅವರ ದಾಖಲೆ ಇನ್ನೂ ನೆನಪಿದೆ. ಅದನ್ನು ಸಿಎಂ ಅವರಿಂದ ನಾವು ಬಯಸುತ್ತೇವೆ ಎಂದು ಹೇಳಿದರು.
ಬೆಡ್ತಿ-ವರದಾ ನದಿ ಜೋಡಣೆ ಸಾಕಾರಗೊಳ್ಳಲಿ
ಉಪ ಮುಖ್ಯಮಂತಿಗಳು ಬೆಡ್ತಿ ವರದಾ ಯೋಜನೆಗೆ ಚಾಲನೆ ಕೊಟ್ಟಿದ್ದಾರೆ. ಇದರಿಂದ ಬರಗಾಲದ ಜಿಲ್ಲೆಗಳ ಜನರಿಗೆ ಅನುಕೂಲವಾಗುತ್ತದೆ. ವರದಾ ನದಿ ಮಳೆಗಾಲದಲ್ಲಿ ಮಾತ್ರ ಹರಿಯುತ್ತದೆ. ಬೆಡ್ತಿಯಿಂದ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ಕೇವಲ ಶೇಕಡಾ 8 ರಿಂದ 10 ರಷ್ಟು ನೀರನ್ನು ತುಂಗಭದ್ರಾ ನದಿಗೆ ಜೋಡಿಸಿದರೆ ಗದಗ, ಹಾವೇರಿ ಜಿಲ್ಲೆಗೆ ಅನುಕೂಲವಾಗುತ್ತದೆ. ಇದು 1994 ರಿಂದ ಇರುವ ಯೋಜನೆ ಕೇಂದ್ರದ ಮೂರು ನದಿ ಜೋಡಣೆ ಯೋಜನೆಗಳಲ್ಲಿ ಇದು ಒಂದು. ಕೇಂದ್ರ ಸರ್ಕಾರ ಕೈಗೆತ್ತಿಕೊಳ್ಳುತ್ತಿದೆ. ರಾಜ್ಯ ಸರ್ಕಾರ ಡಿಪಿಆರ್ ಮಾಡಲು ಒಪ್ಪಿಕೊಂಡಿದೆ. ಯೋಜನೆ ಸಾಕಾರಕ್ಕೆ ಈ ಭಾಗದಲ್ಲಿ ಹಸಿರು ಕ್ರಾಂತಿಯಾಗುತ್ತದೆ. ಒಳ್ಳೆಯ ದಿನ ಶುಭಾರಂಭವಾಗಿದ್ದು, ಜಿಲ್ಲೆ ಭವಿಷ್ಯದಲ್ಲಿ ನ್ನಷ್ಟು ಅಭಿವೃದ್ಧಿ ಆಗಲಿದೆ ಎಂದು ತಿಳಿಸಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಆರೋಗ್ಯ ವಿಮಾ ಕ್ಷೇತ್ರದಲ್ಲಿ ಭರ್ಜರಿ ಪ್ರಗತಿ: 1.2 ಲಕ್ಷ ಕೋಟಿ ರೂ ದಾಟಿದ ಪ್ರೀಮಿಯಂ ಸಂಗ್ರಹ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications