ಸಿಎಂ ಸಿದ್ದರಾಮಯ್ಯರ 15ನೇ ಬಜೆಟ್ ಮಂಡನೆ: ಬೊಮ್ಮಾಯಿ ಹೇಳಿದ್ದೇನು?

ಬೆಂಗಳೂರು, ಫೆಬ್ರವರಿ 16: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 15ನೇ ಬಾರಿ ಬಜೆಟ್ ಮಂಡಿಸಿ 1.5 ಲಕ್ಷ ಕೋಟಿ ಸಾಲ ಮಾಡಿರುವ ದಾಖಲೆ ಸೃಷ್ಟಿಸುವ ಮೂಲಕ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳಿನ ಕಂತೆಯ ರಾಜಕೀಯ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಕರ್ನಾಟಕ ಬಜೆಟ್ 2024 ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರವನ್ನು ವಿರೋಧಿಸಲು ಬಜೆಟ್‌ ಅನ್ನು ಬಳಸಿಕೊಂಡಿದ್ದಾರೆ. ಬಜೆಟ್ ನ ಪಾವಿತ್ರ್ಯತೆಯನ್ನು ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಕೇಂದ್ರ ಸರ್ಕಾರದ ಅನುದಾನ‌ ಪಡೆಯಲು ಅನೇಕ ವೇದಿಕೆಗಳಿವೆ. ಜಿಎಸ್ ಟಿ ಕೌನ್ಸಿಲ್ ಇದೆ. ನೀತಿ ಆಯೋಗ ಇದೆ.

Basavaraj Bommais First Reaction After the Karnataka Budget 2024 Announcement by CM Siddaramaiah

ಒಂದು ಬಾರಿಯೂ ನೀತಿ ಆಯೋಗದ ಸಭೆಗೆ ಹಾಜರಾಗದೇ ಆ ಸಂದರ್ಭದಲ್ಲಿ ಮಾತನಾಡದೇ ಬಜೆಟ್ ನಲ್ಲಿ ಕೇಂದ್ರ ಸರ್ಕಾರವನ್ನು ವಿರೋಧಿಸುತ್ತಿರುವುದು ರಾಜಕೀಯ ಕಾರಣಕ್ಕೆ. ರಾಜಕೀಯಕ್ಕಾಗಿ ಬಜೆಟ್ ಬಳಸಿಕೊಂಡಿರುವುದು ಖಂಡನೀಯ ಎಂದು ಹೇಳಿದರು.

ಸಾಲ ಅಧಿಕ, ಅದರ ಬಳಕೆ ಅತೀ ಕಡಿಮೆ

ಕಳೆದ ವರ್ಷಕ್ಕಿಂತ ಸುಮಾರು 25 ಸಾವಿರ ಕೋಟಿ‌ ರೂ. ಸಾಲ ಮಾಡಿ ಅದರಲ್ಲಿ ಅಭಿವೃದ್ಧಿಗೆ ಕೇವಲ ಒಂದು ಸಾವಿರ‌ ಕೋಟಿ ಮಾತ್ರ ಬಳಕೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ಕಳೆದ ವರ್ಷ ಬಂಡವಾಳ ವೆಚ್ಚ 54 ಸಾವಿರ ಕೋಟಿ ಇತ್ತು ಈ ವರ್ಷ ಕೇವಲ 55 ಸಾವಿರ ಕೋಟಿಗೆ ಹೆಚ್ಚಳ ಮಾಡಿದ್ದಾರೆ.

ಅತಿ ಹೆಚ್ಚಿನ ದರದಲ್ಲಿ ಬಡ್ಡಿ ಸಾಲ ತಂದು ಅನುತ್ಪಾದಕ ವೆಚ್ಚಗಳಿಗೆ ಬಜೆಟ್ ಹಣ ವೆಚ್ಚ ಮಾಡುತ್ತಿದ್ದಾರೆ. ರಾಜ್ಯದ ಹಣಕಾಸು ಸ್ಥಿತಿ ಹದಗೆಟ್ಟಿರುವುದು ಈ ಬಜೆಟ್ ನಲ್ಲಿ ಸ್ಪಷ್ಟವಾಗಿದೆ ಎಂದು ವಾಗ್ದಾಳಿ ನಡೆಸಿದರು.

Basavaraj Bommais First Reaction After the Karnataka Budget 2024 Announcement by CM Siddaramaiah

ತೆರಿಗೆ ಸಂಗ್ರಹದಲ್ಲಿಯೂ 14 ಸಾವಿರ ಕೋಟಿ ರೂ. ಕೊರತೆಯಾಗಿದೆ. ಅವರೇ ಹೇಳಿರುವಂತೆ 1.75 ಲಕ್ಷ ಕೋಟಿ ತೆರಿಗೆ ಸಂಗ್ರಹ ಮಾಡುವ ಗುರಿ ಇಟ್ಟುಕೊಂಡಿದ್ದರು. ಆದರೆ ಕೇವಲ 1.61 ಲಕ್ಷ ಕೋಟಿ ಮಾತ್ರ ತೆರಿಗೆ ಸಂಗ್ರಹವಾಗಿದೆ. ಹೀಗಾಗಿ 14 ಕೋಟಿ ರೂ. ತೆರಿಗೆ ಸಂಗ್ರಹ ಕಡಿಮೆಯಾಗಿದೆ.

ಕೇಂದ್ರದಿಂದ ಪೂರ್ಣ ಅನುದಾನ

ಕೇಂದ್ರ ಸರ್ಕಾರದಿಂದ ಬರುವ ಅನುದಾನ ಸಂಪೂರ್ಣ ಬಂದಿದೆ. ಇವರ ತೆರಿಗೆ ಸಂಗ್ರಹದಲ್ಲಿ ಕೊರತೆಯಾಗಿದೆ. ಅದನ್ಮು ಮುಚ್ಚಿಡಲು ಸುಳ್ಳಿನ ಕಂತೆಯ ಬಜೆಟ್ ಮಂಡನೆ ಮಾಡಿದ್ದಾರೆ. ಎಸ್ಸಿಪಿ ಟಿಎಸ್ಬಿಗೆ ಹಣ ನೀಡಿಲ್ಲ, ಶಿಕ್ಷಣಕ್ಕೆಣ ನೀರಾವರಿಗೆ ಹಣ ಇಟ್ಟಿಲ್ಲ. ರಾಜ್ಯವನ್ನು ದಿವಾಳಿ ಮಾಡಿದ್ದಾರೆ ಎಂದು ಆರೋಪಿಸಿದರು.

ಚುನಾವಣೆಗೋಸ್ಕರ ಕೇಂದ್ರ ಸರ್ಕಾರದ ವಿರುದ್ದ ಆರೋಪ ಮಾಡುತ್ತಿದ್ದಾರೆ. ಕೃಷ್ಣಾ, ಭದ್ರಾ, ಮಹಾದಾಯಿ ಯೋಜನೆಗಳಿಗೆ ಯಾವುದೇ ಹಣ ನೀಡಿಲ್ಲ. ನೀರಾವರಿಗೆ ಸಂಪೂರ್ಣ ಅನ್ಯಾಯ ಮಾಡಿದ್ದಾರೆ. ಎಸ್ಸಿ ಎಸ್ಟಿಗಳಿಗೆ ಮೋಸದ ಬಜೆಟ್, ವಿದ್ಯಾರ್ಥಿಗಳಿಗೆ, ರೈತರಿಗೆ, ಮಹಿಳೆಯರಿಗೆ ಶೂನ್ಯ ಬಜೆಟ್ ಆಗಿದೆ. ರಾಜ್ಯದ ಇತಿಹಾಸದಲ್ಲಿ ಪ್ರತಿಪಕ್ಷ ಸಭಾತ್ಯಾಗ ಮಾಡುವ ಪರಿಸ್ಥಿತಿಗೆ ರಾಜ್ಯ ಸರ್ಕಾರ ಬಂದಿದೆ. ಸರ್ಕಾರದ ಈ ಜನವಿರೋಧಿ ನೀತಿಯನ್ನು ಜನರಿಗೆ ತಲುಪಿಸುತ್ತೇವೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+