Get Updates
Get notified of breaking news, exclusive insights, and must-see stories!

ಯತ್ನಾಳ್ ಮೇಲೆ ಯಾಕೆ ಶಿಸ್ತು ಕ್ರಮವಿಲ್ಲ? ರಹಸ್ಯ ಬಯಲು ಮಾಡಿದ ಜೆಡಿಎಸ್ ನಾಯಕ!

ಬೆಂಗಳೂರು, ಅ. 24: ಉಪ ಚುನಾವಣೆ ಎರಡೂ ರಾಷ್ಟ್ರೀಯ ಪಕ್ಷಗಳ ನಾಯಕರಿಗೆ ಸಂಕಷ್ಟ ತಂದಿಟ್ಟಿದೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆದಿದ್ದರೆ, ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಸಿಎಂ ಯಾರು ಎಂಬ ಚರ್ಚೆ ಈಗಲೇ ಶುರುವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಬೆಂಬಲಿಗರು ನಮ್ಮ ನಾಯಕ ಮುಂದಿನ ಸಿಎಂ, ನಮ್ಮ ನಾಯಕ ಮುಂದಿನ ಸಿಎಂ ಎಂದು ಹೇಳಿಕೆ ಕೊಡುತ್ತಿದ್ದಾರೆ.

ಮತ್ತೊಂದೆಡೆ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಮಾತು ಜೋರಾಗಿಯೇ ಕೇಳಿ ಬರುತ್ತಿದೆ. ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಇದೀಗ ಉತ್ತರ ಕರ್ನಾಟಕ ಭಾಗದ ಪ್ರಭಾವಿ ಜೆಡಿಎಸ್ ನಾಯಕರೊಬ್ಬರು ಸ್ಪೋಟಕ ಮಾಹಿತಿ ಹಂಚಿಕೊಂಡಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಯಡಿಯೂರಪ್ಪ ಬದಲಾವಣೆ ಹೇಳಿಕೆ ಹಿಂದಿನ ರಹಸ್ಯವನ್ನು ಬಹಿರಂಗಗೊಳಿಸಿದ್ದಾರೆ. ಆ ರಹಸ್ಯವಾದರೂ ಏನು?

ಯತ್ನಾಳ್ ಮೇಲೆ ಯಾಕೆ ಶಿಸ್ತು ಕ್ರಮವಿಲ್ಲ?

ಯತ್ನಾಳ್ ಮೇಲೆ ಯಾಕೆ ಶಿಸ್ತು ಕ್ರಮವಿಲ್ಲ?

ಸಿಎಂ ಬದಲಾವಣೆ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಕರಿತಂತೆ ಕೋಲಾರದಲ್ಲಿ ಜೆಡಿಎಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಮಾತನಾಡಿದ್ದಾರೆ. ಯಡಿಯೂರಪ್ಪ ಬದಲಾವನೆ ಕುರಿತು ಯತ್ನಾಳ್ ಅವರ ಮಾತಿನ ಹಿಂದಿನ ರಹಸ್ಯವನ್ನು ಬಹೊರಂಗೊಳಿಸಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಲಾಟೀಲ್ ಯತ್ನಾಳ್ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಬಿಜೆಪಿಯಲ್ಲಿ ಯಾರಿಗೂ ಧಮ್ ಇಲ್ಲ ಎಂದಿದ್ದಾರೆ. ಅದಕ್ಕೆ ಕಾರಣವನ್ನೂ ಹೊರಟ್ಟಿ ಅವರು ಕೊಟ್ಟಿದ್ದಾರೆ.

ಯತ್ನಾಳ್‌ಗೆ ಬೆಂಬಲವಿದೆ!

ಯತ್ನಾಳ್‌ಗೆ ಬೆಂಬಲವಿದೆ!

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಈ ದಿ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕಾಲದಲ್ಲಿಯೇ ಕೇಂದ್ರ ಸಚಿವರಾಗಿದ್ದವರು. ಅವರಿಗೆ ಕೇಂದ್ರ ಬಿಜೆಪಿ ನಾಯಕರ ಬೆಂಬಲವಿದೆ. ಹೀಗಾಗಿಯೇ ಸಿಎಂ ಯಡಿಯೂರಪ್ಪ ಅವರ ಮೇಲೆ ಗದಪ್ರಹಾರ ನಡೀತಿದೆ. ಹೀಗಾಗಿ ಬಿಜೆಪಿ ಸರ್ಕಾರ ಮುಂದುವರೆಯುವ ಲಕ್ಷಣ ಕಾಣಿಸುತ್ತಿಲ್ಲ ಎಂದು ಕುತೂಹಲದ ಹೇಳಿಕೆ ನೀಡಿದ್ದಾರೆ.

ಯಡಿಯೂರಪ್ಪ ಜೊತೆ ಹೊಂದಾಣಿಕೆ

ಯಡಿಯೂರಪ್ಪ ಜೊತೆ ಹೊಂದಾಣಿಕೆ

ಬಿಜೆಪಿ ಸರ್ಕಾರದಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಸಂಪುಟದ ಇತರ ಸಚಿವರೊಂದಿಗೆ ಹೊಂದಾಣಿಕೆ ಇಲ್ಲ. ಹೀಗಾಗಿ ಈ ಎಲ್ಲ ಬೆಳವಣಿಗೆಗಳು ಆಗುತ್ತಿವೆ. ಸಿಎಂ ಯಡಿಯೂರಪ್ಪ ಬದಲಾವಣೆ ಆಗಬಹುದು ಎಂದು ಹೊರಟ್ಟಿ ಹೇಳಿದರು.

Recommended Video

    Corona ಓಡಿಸೋ ಸಮಯ ದೂರ ಇಲ್ಲಾ | Corona Vaccine | Oneindia Kannada
    ಯಡಿಯೂರಪ್ಪ ಮೇಲೆ ಮೃದು ಧೋರಣೆಯಿಲ್ಲ

    ಯಡಿಯೂರಪ್ಪ ಮೇಲೆ ಮೃದು ಧೋರಣೆಯಿಲ್ಲ

    ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮೃದುಧೋರಣೆ ಹೊಂದಿಲ್ಲ ಎಂದು ಇದೇ ಸಂದರ್ಭದಲ್ಲಿ ಬಸವರಾಜ್ ಹೊರಟ್ಟಿ ಅವರು ಸ್ಪಷ್ಟಪಡಿಸಿದರು. ಕುಮಾರಸ್ವಾಮಿ ಯಾರ ಬಗ್ಗೆಯೂ ಸಾಫ್ಟ್‌ ಕಾರ್ನರ್ ಹೊಂದಿಲ್ಲ, ಎಲ್ಲರನ್ನೂ ಟೀಕೆ ಮಾಡುತ್ತಿದ್ದಾರೆ. ಶಿರಾ ಮತ್ತು ಆರ್ ಆರ್ ನಗರ ಎರಡೂ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಗೆಲುವು ಸಾಧಿಸಲಿದೆ ಎಂದರು.

    More From
    Prev
    Next
    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+