ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೊರಟ್ಟಿ ಅವರದ್ದು ಪ್ರಮುಖ ಪಾತ್ರ: ಬಸವರಾಜ ಬೊಮ್ಮಾಯಿ
ಬೆಳಗಾವಿ, ಡಿಸೆಂಬರ್ 21 : ಸ್ವಾತಂತ್ರ್ಯ ನಂತರ ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದ ಅಪಾರ ಅಭಿವೃದ್ಧಿಯಲ್ಲಿ ಬಸವರಾಜ ಹೊರಟ್ಟಿಯವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬುಧವಾರ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾಗಿ ಅವಿರೋಧ ಆಯ್ಕೆಯಾದ ಬಸವರಾಜ ಹೊರಟ್ಟಿಯವರನ್ನು ಅಭಿನಂದಿಸಿ ವಿಧಾನ ಪರಿಷತ್ ನಲ್ಲಿ ಮಾತನಾಡಿದ ಅವರು, ಬಸವರಾಜ ಹೊರಟ್ಟಿಯವರು ಶಿಕ್ಷಣ ಸಚಿವರಾಗಿ ತಂದಿರುವ ಬದಲಾವಣೆ, ಶಿಕ್ಷಣ ಕ್ಷೇತ್ರಕ್ಕೆ ಸ್ಥಿರತೆಯನ್ನು ಕೊಟ್ಟಿದೆ. ಶಿಕ್ಷಕರ ಪ್ರತಿನಿಧಿಯಾಗಿದ್ದರೂ ಒಬ್ಬ ಆಡಳಿತಗಾರರಾಗಿ ಕಠಿಣ ನಿರ್ಣಗಳನ್ನು ತೆಗೆದುಕೊಂಡಿರುವ ಕಾರಣ, ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗಿದೆ. ಶಿಕ್ಷಕರ ವರ್ಗಾವಣೆ, ಶಿಕ್ಷಕರ ಸವಲತ್ತು, ಹೈಸ್ಕೂಲ್ ಹಾಗೂ ಕಾಲೇಜು ನಿರ್ಮಾಣ ಸೇರಿದಂತೆ ಹಲವು ದಾಖಲಾರ್ಹ ಕೆಲಸಗಳನ್ನು ಮಾಡಿದ್ದಾರೆ. ಶಿಕ್ಷಕರ ಕೆಲಸಗಳನ್ನು ಅತ್ಯಂತ ದಕ್ಷತೆಯಿಂದ ನಿರ್ವಹಿಸಿದ್ದಾರೆ ಎಂದರು.
ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸನ್ಮಾನ್ಯ ಬಸವರಾಜ ಹೊರಟ್ಟಿಯವರು ಸರ್ವಾನುಮತದಿಂದ ಆಯ್ಕೆಆಗಿರುವುದು ನಮಗೆಲ್ಲರಿಗೂ ಸಂತೋಷ ತಂದಿದೆ. ತಮ್ಮ ಹಿರಿತನಕ್ಕೆ, ತಮ್ಮ ಅನುಭವಕ್ಕೆ ಇಡೀ ಸದನ ಮನ್ನಣೆಯನ್ನುಕೊಟ್ಟಿದೆ. ಸಾಮಾನ್ಯವಾಗಿ ಸಭಾಪತಿ ಸ್ಥಾನಕ್ಕೆ ಒಮ್ಮತದ ಆಯ್ಕೆಯಾಗುವುದು ಈ ಸದನದ ಗೌರವವನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ. ಸದನದ ಹಿರಿಯ ಸದಸ್ಯರಾಗಿ ತಾವು ಹತ್ತುಹಲವು ಜವಾಬ್ದಾರಿಗಳನ್ನು ನಿಭಾಯಿಸಿ, ಎಲ್ಲರ ಸ್ನೇಹ ಮತ್ತು ವಿಶ್ವಾಸವನ್ನು ಗಳಿಸಿರುವ ಹಿನ್ನೆಲೆಯಲ್ಲಿ ಪಕ್ಷಾತೀತವಾಗಿ ತಮ್ಮನ್ನು ಆಯ್ಕೆ ಮಾಡಿರುವುದು ವಿಧಾನಪರಿಷತ್ತಿನ ಸರ್ವ ಸದಸ್ಯರಿಗೆ ಅಬಭಿನಂದನೆಗಳನ್ನು ಸಲ್ಲಿಸುತ್ತೇನೆ. ಹಿರಿಯನ ಸದನ ಎಂದು ಕರೆಯಲ್ಪಡುವ ವಿಧಾನಪರಿಷತ್ತಿನ ಕೀರ್ತಿಯಂತೆ ಎಲ್ಲರೂ ನಡೆದುಕೊಂಡಿರುವುದಕ್ಕೆ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ಸಲ್ಲಿಸಿದರು.

ಮತದಾರರ ಹಿತಚಿಂತನೆಯನ್ನು ಉಸಿರಾಗಿಸಿಕೊಂಡವರು
ನಾನು ತಮ್ಮ ಮೊದಲ ಚುನಾವನೆಯಿಂದ ಬಲ್ಲೆ. ಸಾರ್ವಜನಿಕ ಜೀವನವನ್ನು ಪ್ರಾರಂಭ ಮಾಡಿದರು. ಅದರ ಪೂರ್ವದಲ್ಲಿ ಶಿಕ್ಷಕರಾಗಿ, ಶಿಕ್ಷಕರ ಸಂಘಟನೆಯಲ್ಲಿ ಒಳ್ಳೆಯ ಕೆಲಸವನ್ನು ಮಾಡಿ, ಎಲ್ಲ ಶಿಕ್ಷಕರ ಪ್ರೀತಿಗೆ ಪಾತ್ರರಾಗಿದ್ದೀರಿ. ಸಾರ್ವಜನಿಕ ಜೀವನಕ್ಕೆ ಕಾಲಿಟ್ಟ ಮೇಲೆ ಮೊದಲನೇ ಚುನಾವಣೆ ಬಹಳ ಪ್ರಮುಖವಾಗಿತ್ತು. ತಮ್ಮ ಸ್ವಂತ ಶಕ್ತಿಯ ಮೇಲೆ ಗೆದ್ದುಬಂದರು.ತಾವೆಂದೂ ಹಿಂದುರುಗಿ ನೋಡಿಲ್ಲ. ಪ್ರತಿಬಾರಿ ಚುನಾವಣೆಯಲ್ಲಿ ಯಶಸ್ವಿಯಾಗುವು ಅಷ್ಟೇ ಅಲ್ಲ. ತಮ್ಮ ಕಾರ್ಯಪ್ರವೃತ್ತಿ ಕರ್ತವ್ಯ ಪ್ರಜ್ಞೆಯಿಂದ ತಮ್ಮ ವ್ಯಕ್ತಿತ್ವವನ್ನು ಹೆಚ್ಚಿಸಿಕೊಂಡೇ ಬಂದವರು. ಬಂದರು. 40 ವರ್ಷಕ್ಕಿಂತ ಹೆಚ್ಚು ತಮ್ಮ ಸಾರ್ವಜನಿಕ ಬದುಕು ಆದರ್ಶಪ್ರಾಯವಾಗಿದೆ. ತಮ್ಮ ಕಾರ್ಯಶೈಲಿ, ಮತದಾರರ ಹಿತಚಿಂತನೆಯನ್ನು ಉಸಿರಾಗಿಸಿಕೊಂಡು ಜನರ ಪ್ರೀತಿಯನ್ನು ಗಳಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಬಸವರಾಜ ಹೊರಟ್ಟಿಯವರು ನೇರಮಾತು ಮತ್ತು ನಿಷ್ಟುರವಾಗಿ ಕೆಲವು ಮಾತುಗನ್ನಾಡುವ ಸ್ವಭಾವದವರು. ಯಾರ ಬಗ್ಗೆಯೂ ಸಣ್ಣ ಕಲ್ಮಷವಿಲ್ಲದಂತೆ ನಡೆದುಕೊಂಡಿಕೊಂಡಿದ್ದು, ಬಹಳ ಮಿತ್ರರನ್ನು ಸಂಪಾದಿಸಿದ್ದಾರೆ. ಎಲ್ಲ ಮುಖ್ಯಮಂತ್ರಿಗಳ ಜೊತೆಗೆ ಆತ್ಮೀಯರಾಗಿದ್ದಾರೆ. ಶ್ರೀಯುತರು ಯಾವುದೇ ಪಕ್ಷದಲ್ಲಿದ್ದರೂ ಅವರ ಕೆಲಸ ನಡೆಯುತ್ತದೆ. ಬಾಗಲಕೋಟೆ ಜಿಲ್ಲೆಯವರಾದರೂ ಹೆಚ್ಚಿನ ಸಮಯ ಹುಬ್ಬಳ್ಳಿಯಲ್ಲಿ ಕಳೆದಿದ್ದು, ಹುಬ್ಬಳ್ಳಿಯ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಸ್ನೇಹಪರವಾಗಿದ್ದು , ಮಹತ್ವಪೂರ್ಣ ಕೆಲಸವನ್ನು ಮಾಡಿದ್ದಾರೆ. ಉತ್ತರ ಕರ್ನಾಟಕ ಧ್ವನಿಯಾಗಿ ಕೆಲಸ ಮಾಡಿದ್ದಾರೆ. ಹುಬ್ಬಳ್ಳಿಗೆ ಕಾನೂನು ವಿಶ್ವವಿದ್ಯಾಲಯ ಸ್ಥಾಪನೆಯಲ್ಲಿ ಹೊರಟ್ಟಿಯವರು ಪ್ರಮುಖ ಪಾತ್ರ ವಹಿಸಿದ್ದರು. ಧಾರವಾಡಕ್ಕೆ ವಿಜ್ಞಾನ ನಗರ ತರಲು ಯಶಸ್ವಿಯಾಗಿದ್ದರು. ಆ ಭಾಗದ ಜ್ವಲಂತ ಸಮಸ್ಯೆಗಳ ಧ್ವನಿಯಾಗಿ ಕೆಲಸ ಮಾಡಿದ್ದಾರೆ ಎಂದರು.

ಸಭಾಪತಿಗಳ ನೇತೃತ್ವದಲ್ಲಿ ಜನಸ್ಪಂದನೆಯ ನಿರ್ಣಯಗಳಾಗಲಿ
ಬಸವರಾಜ ಹೊರಟ್ಟಿಯವರು ಪಕ್ಷವನ್ನು ಮೀರಿ ನಿಲುವನ್ನು ತೆಗೆದುಕೊಂಡು , ಜನರಿಗೆ ನ್ಯಾಯ ಒದಗಿಸಿದ್ದಾರೆ. ವಿಧಾನಸಭೆಯ ಅವರ ಅಪಾರ ಅನುಭವವಿದೆ. ಬೆಳಗಾವಿ ಅಧಿವೇಶನದಲ್ಲಿ ಉತ್ತರಕರ್ನಾಟಕದವರು ಸಭಾಪತಿಗಳಾಗಿರುವುದು ನಮಗೆಲ್ಲಾ ಸಂತೋಷ ತಂದಿದೆ. ತಮ್ಮ ಸ್ಥಾನದಿಂದ ಈ ಸದನದಲ್ಲಿ ಅರ್ಥಪೂರ್ಣ ಚರ್ಚೆಯಾಗಿ, ಜನಸ್ಪಂದನೆಯ ನಿರ್ಣಯಗಳಾಗಿ, ಜನರ ಹತ್ತುಹಲವಾರು ಸಮಸ್ಯೆಗಳಿಗೆ ಪರಿಹಾರ ದೊರೆತು, ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಭದ್ರ ಅಡಿಪಾಯ ಹಾಕುವ ಕೆಲಸ ತಮ್ಮ ನೇತೃತ್ವದಲ್ಲಿ ನಡೆಯಲಿ. ನ್ಯಾಯಸಮ್ಮತವಾದ ವಿಚಾರ, ಕಲಾಪಗಳು ಎಲ್ಲರಿಗೂ ಮಾದರಿಯಾಗಲಿ. ಸದನ ಹಿರಿಯರ ಮನೆಯಾಗಿದ್ದು, ಆ ಹಿರಿತನವನ್ನು ಉಳಿಸಿಕೊಂಡು, ಇದಕ್ಕೆ ಮೆರಗು ಬರುವಂತೆ ಇಲ್ಲಿನ ಕಲಾಪಗಳು ತಮ್ಮ ನೇತರತ್ವದಲ್ಲಿ ಆಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications