ಬೆಂಗಳೂರಿನ ಕಸದಿಂದ ರೈತರ ಮನೆಗೆ ಸಾವಯವ ಗೊಬ್ಬರ: ಕೃಷ್ಣಬೈರೇಗೌಡ
ಬೆಂಗಳೂರು ಮಹಾ ನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಹಸಿ ಕಸದಿಂದ ತಯಾರಿಸಲಾಗುವ ಗೊಬ್ಬರವನ್ನು ಸದುಪಯೋಗ ಪಡಿಸಿಕೊಳ್ಳಲು ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು ಯೋಜನೆ ಹಾಕಿಕೊಂಡಿದ್ದಾರೆ.
ಬೆಂಗಳೂರು, ಫೆಬ್ರವರಿ 22: ಬೆಂಗಳೂರು ಮಹಾ ನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಹಸಿ ಕಸದಿಂದ ತಯಾರಿಸಲಾಗುವ ಗೊಬ್ಬರವನ್ನು ಸದುಪಯೋಗ ಪಡಿಸಿಕೊಳ್ಳಲು ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು ಯೋಜನೆ ಹಾಕಿಕೊಂಡಿದ್ದಾರೆ.
ವನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರಿಗೆ ಶೇ.50ರ ರಿಯಾಯಿತಿ ದರದಲ್ಲಿ ಒದಗಿಸುವ ಯೋಜನೆ ರೂಪಿಸಲಾಗಿದೆ, ಆಸಕ್ತ ರೈತರು ಮುಂಗಡ ಪಾವತಿಸಿ ರೈತ ಸಂಪರ್ಕ ಕೇಂದ್ರದಲ್ಲಿ ತಮ್ಮ ಬೇಡಿಕೆಯನ್ನು ನೋಂದಾಯಿಸಿಕೊಳ್ಳಬಹುದು ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸುಮಾರು 5 ಸಾವಿರ ಟನ್ ಸಾವಯವ ಗೊಬ್ಬರದ ದಾಸ್ತಾನು ಇದ್ದು ಇದನ್ನು ರೈತರ ಹೊಲಗಳಿಗೆ ನೇರವಾಗಿ ಪ್ರತಿ ಟನ್ನಿಗೆ ಶೇ 50 ರಷ್ಟು ಸಬ್ಸಿಡಿ ದರದಲ್ಲಿ ನೀಡಲಾಗುತ್ತದೆ. ಈ ಯೋಜನೆಯಡಿ ರೈತರು ಪ್ರತಿ ಟನ್ನಿಗೆ 800 ರೂ ಹಣವನ್ನು ಪಾವತಿ ಮಾಡಿದಲ್ಲಿ ಕೃಷಿ ಇಲಾಖೆಯೇ ರೈತರ ಹೊಲಕ್ಕೆ ಗೊಬ್ಬರ ಸರಬರಾಜು ಮಾಡುವುದು ಎಂದರು.

ಕೃಷಿ ಹೊಂಡ ನಿರ್ಮಾಣ: ರಾಜ್ಯ ಸರ್ಕಾರದ ಮಹಾತ್ವಾಂಕ್ಷಿ ಯೋಜನೆಯಾದ "ಕೃಷಿಭಾಗ್ಯ" ಯೋಜನೆಯಡಿ ಕೃಷಿ ಹೊಂಡಕ್ಕೆ ರೈತರಿಂದ ಬೇಡಿಕೆ ಹೆಚ್ಚಾಗಿ ಬರುತ್ತಿರುವ ಹಿನ್ನೆಲೆಯಲ್ಲಿ, ಈ ವರ್ಷದ ಮಳೆಗಾಲದ ಆರಂಭದ ಒಳಗಾಗಿ ಇನ್ನೂ 50 ಸಾವಿರ ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಲು ಮುಖ್ಯಮಂತ್ರಿ ಅವರು ಒಪ್ಪಿಗೆ ನೀಡಿದ್ದು, ಇದಕ್ಕೆ ತಗಲುವ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಲು ಸಮ್ಮತಿಸಿದ್ದಾರೆ ಎಂದು ಸಚಿವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವರು ಮಾರ್ಚ್ ಅಂತ್ಯದ ಒಳಗಾಗಿ ಇನ್ನೂ 30 ಸಾವಿರ ಕೃಷಿ ಹೊಂಡಗಳನ್ನು ರೈತರ ಜಮೀನಿನಲ್ಲಿ ನಿರ್ಮಾಣ ಮಾಡಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದರು.
ಆಸಕ್ತಿಯುಳ್ಳ ರೈತರು ಸ್ಥಳೀಯ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ರೈತ ಸಮುದಾಯಕ್ಕೆ ಸಚಿವರು ಮನವಿ ಮಾಡಿದರು.
ರಾಜ್ಯದಲ್ಲಿ ಮಳೆ ಕೊರತೆಯಿಂದ ಅತಿಹೆಚ್ಚು ರೈತರು ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಿ ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಂಡಿರುವ ಬಗ್ಗೆ ಕೆಲವು ಕೃಷಿ ವಿಶ್ವವಿದ್ಯಾಲಯಗಳು ಸಮೀಕ್ಷೆ ಮಾಡಿ ವರದಿ ಮಾಡಿದೆ ಎಂದು ಕೃಷಿ ಸಚಿವ ಬೈರೇಗೌಡ ಹೇಳಿದರು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications