ಇ.ಡಿ ದಾಳಿ ಹಿಂದೆ ಸಿದ್ದರಾಮಯ್ಯ ಕೈವಾಡ: ಬಿ.ಸಿ ಪಾಟೀಲ್
Recommended Video
ಬೆಂಗಳೂರು, ಅಕ್ಟೋಬರ್ 18: ಅಕ್ರಮ ಆಸ್ತಿಗಳಿಕೆ, ಹಣ ವರ್ಗಾವಣೆ ಮುಂತಾದ ಪ್ರಕರಣಗಳಲ್ಲಿ ರಾಜಕೀಯ ಮುಖಂಡರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿಗಳನ್ನು ನಡೆಸುತ್ತಿದೆ. ದೇಶದಾದ್ಯಂತ ನಡೆಯುತ್ತಿರುವ ಈ ದಾಳಿಗಳು ವಿರೋಧಪಕ್ಷದ ನಾಯಕರನ್ನೇ ಗುರಿಯನ್ನಾಗಿರಿಸಿಕೊಂಡು ನಡೆಯುತ್ತಿವೆ ಎಂದು ವಿವಿಧ ಪಕ್ಷಗಳು ಆರೋಪಿಸಿವೆ. ಆಡಳಿತಾರೂಢ ಬಿಜೆಪಿ ರಾಜಕೀಯ ದ್ವೇಷಕ್ಕಾಗಿ ವಿರೋಧಿಗಳನ್ನು ಹಣಿಯುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿವೆ.
ಈ ನಡುವೆ ರಾಜ್ಯದ ಕೆಲವು ನಾಯಕರು ಕಾಂಗ್ರೆಸ್ ಮುಖಂಡರಡೆಗೇ ಬೊಟ್ಟು ಮಾಡುತ್ತಿದ್ದಾರೆ. ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆ ದಾಳಿಗಳು ಆಯಾ ಪಕ್ಷದವರೇ ನಡೆಸಿರುವ ತಂತ್ರಗಳಾಗಿವೆ ಎಂದು ಪ್ರತಿ ಆರೋಪ ಮಾಡಿದ್ದಾರೆ. ಈ ಸಾಲಿಗೆ ಹಾವೇರಿ ಜಿಲ್ಲೆಯ ಹಿರೇಕೆರೂರು ವಿಧಾನಸಭೆ ಕ್ಷೇತ್ರದ ಅನರ್ಹ ಶಾಸಕ ಕೌರವ ಬಿ.ಸಿ. ಪಾಟೀಲ್ ಕೂಡ ಸೇರಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಹಿರೇಕೆರೂರು ಶಾಸಕರಾಗಿ ಆಯ್ಕೆಯಾಗಿದ್ದ ಬಿಸಿ ಪಾಟೀಲ್, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಲ್ಲಿ ಅನರ್ಹಗೊಂಡ 17 ಶಾಸಕರಲ್ಲಿ ಒಬ್ಬರು. ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯವೆದ್ದು, ಮುಂಬೈಗೆ ತೆರಳಿದ್ದ ಗುಂಪಿನಲ್ಲಿದ್ದ ಬಿಸಿ ಪಾಟೀಲ್, ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಮೇಲೆ ದಾಳಿಗಳು ನಡೆಯಲು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಕಾರಣ ಎಂದು ನೇರವಾಗಿ ಆರೋಪಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

ಧ್ವನಿ ಎತ್ತಿದವರ ಮೇಲೆ ದಾಳಿ
ಸಿದ್ದರಾಮಯ್ಯನವರ ವಿರುದ್ಧ ಧ್ವನಿ ಎತ್ತಿದವರೆಲ್ಲರೂ ಇವತ್ತು ಇಡಿಗೆ ಒಳಗಾಗುತ್ತಿರುವುದನ್ನು ನೋಡಿದರೆ ಇದು ಯಾರ ಕೈವಾಡ? ಭವಿಷ್ಯ ಸಿದ್ದರಾಮಯ್ಯನವರೇ ಇರಬಹುದೇ? ಎಂದು ಬಿಸಿ ಪಾಟೀಲ್ ಪ್ರಶ್ನೆ ಮುಂದಿಟ್ಟಿದ್ದಾರೆ. ಸಿದ್ದರಾಮಯ್ಯ ಅವರ ವಿರುದ್ಧ ಸಿಡಿದೆದ್ದವರೆಲ್ಲರ ಮೇಲೆ ಇಡಿ ದಾಳಿಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ. ಜತೆಗೆ ಸಿದ್ದರಾಮಯ್ಯ ಅವರನ್ನು 'ಭವಿಷ್ಯ ಸಿದ್ದರಾಮಯ್ಯ' ಎಂದು ವ್ಯಂಗ್ಯವಾಡಿದ್ದಾರೆ.

ಕೈಕೊಟ್ಟ ಸಿದ್ದರಾಮಯ್ಯ
ಸಿದ್ದರಾಮಯ್ಯ ವಿರುದ್ಧ ಬಿ.ಸಿ ಪಾಟೀಲ್ ಈ ಹಿಂದೆಯೂ ವಾಗ್ದಾಳಿ ನಡೆಸಿದ್ದರು. ಸಿದ್ದರಾಮಯ್ಯ ಅವರ ಮೇಲೆ ಭರವಸೆ ಇತ್ತು. ಕೊನೆಯ ಗಳಿಗೆಯಲ್ಲಿ ಕೈಕೊಟ್ಟರು. ಮಂತ್ರಿ ಮಾಡುತ್ತೇವೆ ಎಂದು ಕರೆದು ಮೋಸ ಮಾಡಿದರು. ಅನರ್ಹಗೊಂಡ ಶಾಸಕರು ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದವರು. ಅವರ ಸಮಾಜಕ್ಕೆ ಸೇರಿದ ನಾಲ್ವರು ಶಾಸಕರನ್ನೇ ಅವರು ಕೈ ಬಿಟ್ಟಿದ್ದಾರೆ. ಇನ್ನು ನಾನು ಯಾವ ಲೆಕ್ಕ ಎಂದು ಕಿಡಿಕಾರಿದ್ದರು.

ಕುಮಾರಸ್ವಾಮಿ ವಿಶ್ವಾಸದ್ರೋಹಿ
ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕೂಡ ಬಿ.ಸಿ. ಪಾಟೀಲ್ ಆರೋಪ ಮಾಡಿದ್ದರು. ಬಿಜೆಪಿಯವರಿಗಿಂತ ಎರಡು ಪಟ್ಟು ಕೊಡುತ್ತೇವೆ ಎಂದು ಕುಮಾರಸ್ವಾಮಿ ಆಫರ್ ನೀಡಿದ್ದರು. ಮಾತೆತ್ತಿದರೆ ಬ್ರದರ್ ಎನ್ನುವ ಅವರು, ಮೂರು ಬಾರಿ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿ ಮೋಸ ಮಾಡಿದ್ದರು. ಅವರಂತಹ ವಿಶ್ವಾಸದ್ರೋಹಿ ಇನ್ನೊಬ್ಬರಿಲ್ಲ ಎಂದು ಆರೋಪಿಸಿದ್ದರು.

ಡಿಕೆಶಿ ಬಂಧನದಲ್ಲಿ ಕೈವಾಡವಿಲ್ಲ
ಡಿಕೆ ಶಿವಕುಮಾರ್ ಬಂಧನದಲ್ಲಿ ಅನರ್ಹ ಶಾಸಕರ ಕೈವಾಡವಿದೆ ಎಂಬ ಆರೋಪವನ್ನು ಬಿ.ಸಿ. ಪಾಟೀಲ್ ನಿರಾಕರಿಸಿದ್ದರು. ಅನರ್ಹ ಶಾಸಕರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಇದರಿಂದ ಬೇಸರವುಂಟಾಗಿದೆ. ಅವರ ಬಂಧನಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications