ಪರಿಸರ ಸ್ನೇಹಿ ದೀಪಾವಳಿ: ಗೋಮಯ ಹಣತೆ!
ಬೆಂಗಳೂರು, ಅ. 24: ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ದೀಪಾವಳಿಯನ್ನಾಗಿ ಆಚರಿಸಲು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಮನವಿ ಮಾಡಿದ್ದಾರೆ. ಹೀಗಾಗಿ ಈ ಬಾರಿಯ ದೀಪಾವಳಿಯನ್ನು ಕಾಮಧೇನು(ಗೋಮಯ) ದೀಪಾವಳಿಯನ್ನಾಗಿಸಲು ವಿನಂತಿಸಿದ್ದಾರೆ. ರಾಸಾಯನಿಕಮುಕ್ತ ಹಣತೆ, ಅಪಾಯಕಾರಿ ಪಟಾಕಿಗಳನ್ನು ಬಳಸುವುದನ್ನು ಬಿಟ್ಟು ಮನಸಿಗೆ ಮುದ ನೀಡುವ ಹಾನಿಕಾರಕವಲ್ಲದ ಗೋಮಯ ದೀಪಗಳನ್ನು ಬಳಸಲು ಕರೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ರೈತ ಸ್ವಾವಲಂಬನೆ ಹಾಗೂ ಆದಾಯ ದ್ವಿಗುಣ ಕಾರ್ಯಯೋಜನೆಯನ್ನು ಆತ್ಮ ನಿರ್ಭರ್ ಭಾರತದ ಸಂಕಲ್ಪವನ್ನು ಸಾಕಾರ ಗೊಳಿಸಲು ಕೇಂದ್ರ ಪಶು ಸಂಗೋಪನಾ ಸಚಿವಾಲಯದ ರಾಷ್ಟ್ರೀಯ ಕಾಮಧೇನು ಆಯೋಗದಿಂದ ಪ್ರಾಯೋಜಿತವಾದ ಸಗಣಿಯಿಂದ ತಯಾರಿಸಿದ ಗೋಮಯ ಹಣತೆಯನ್ನು ಈ ದೀಪಾವಳಿಯ ಸಂದರ್ಭದಲ್ಲಿ ದೇಶದಾದ್ಯಂತ ಉರಿಸುವ ಯೋಜನೆ ರೂಪಿಸಿದೆ.

ಈ ನಿಟ್ಟಿನಲ್ಲಿ ರಾಷ್ಟ್ರೀಯ ಕಾಮಧೇನು ಆಯೋಗ,ರಾಷ್ಟ್ರೋತ್ಥಾನ ಗೋಶಾಲೆ, ಗೋಸೇವಾ ಗತಿವಿಧಿ ಹಾಗೂ ಪ್ರಾಣಿ ಕಲ್ಯಾಣ ಮಂಡಳಿ ಈ ಬಾರಿಯ ದೀಪಾವಳಿಯನ್ನು ಪರಿಸರ ಸ್ನೇಹಿ ಗೋಮಯ ದೀಪಗಳಿಂದ ಆಚರಿಸಬೇಕೆಂದು ಯೋಜನೆ ರೂಪಿಸಿದ್ದು, ದೇಶದಲ್ಲಿ 33 ಕೋಟಿ ದೀಪಗಳನ್ನು ರಾಜ್ಯದಲ್ಲಿ 3 ಕೋಟಿ ಗೋಮಯ ದೀಪಗಳನ್ನು ಬಳಸುವ ಉದ್ದೇಶ ಹೊಂದಲಾಗಿದೆ.
Recommended Video

ಈ ಗೋಮಯ ದೀಪಗಳನ್ನು ಬಳಸುವುದರಿಂದ ರೈತರ ಬೆನ್ನೆಲುಬಾದ ಭಾರತೀಯ ದೇಶಿ ಗೋತಳಿಯ ಉಳಿವಿಗೆ ಪ್ರಯತ್ನ ಮಾಡುವುದರ ಜೊತೆಗೆ ಆರೋಗ್ಯದ ಹಿತದೃಷ್ಟಿಯಿಂದಲೂ ಉತ್ತಮವಾಗಿದೆ. ಜೊತೆಗೆ ಇದರಿಂದ ದೇಶೀಯ ದೀಪಗಳಿಗೆ ಉತ್ತೇಜನ ತಯಾರಿಕರಿಗೆ ಪ್ರೋತ್ಸಾಹ ದೊರೆಯುವಂತಾಗುತ್ತದೆ ಎಂದು ಬಿ.ಸಿ. ಪಾಟೀಲ್ ಹೇಳಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications