ಬಿಡಿಎ ಸೈಟು ಆರೋಪ, ವಿ.ಆರ್.ಸುದರ್ಶನ್ಗೆ ಕ್ಲೀನ್ಚಿಟ್
ಬೆಂಗಳೂರು, ಮಾ. 26 : ಸುಳ್ಳು ಪ್ರಮಾಣ ಪತ್ರ ಸಲ್ಲಿಸಿ ವಿ.ಆರ್.ಸುದರ್ಶನ್ ಅವರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಪಡೆದಿಲ್ಲ ಎಂಬುದು ಲೋಕಾಯುಕ್ತ ತನಿಖೆಯಿಂದ ಸಾಬೀತಾಗಿದೆ. ಟಿ.ಜೆ.ಅಬ್ರಾಹಂ ಸಲ್ಲಿಸಿದ್ದ ದೂರಿನ ತನಿಖೆ ನಡೆಸಿದ ಲೋಕಾಯುಕ್ತರು ಸುದರ್ಶನ್ ಅವರಿಗೆ ಕ್ಲೀನ್ಚಿಟ್ ನೀಡಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಅವರು 2015ರ ಜನವರಿಯಲ್ಲಿ ವಿ.ಆರ್.ಸುದರ್ಶನ್ ಸುಳ್ಳು ಪ್ರಮಾಣ ಪತ್ರ ಗಳನ್ನು ನೀಡಿ ಬಿಡಿಎ ಸೈಟು ಪಡೆದಿದ್ದಾರೆ. ಅವರಿಗೆ ನೀಡಿರುವ ನಿವೇಶನವನ್ನು ವಾಪಸ್ ಪಡೆಯಬೇಕು ಎಂದು ಲೋಕಾಯುಕ್ತರಿಗೆ ದೂರು ನೀಡಿದ್ದರು. [ಸುದರ್ಶನ್ ನೇಮಕಕ್ಕೆ ರಾಜ್ಯಪಾಲರ ಒಪ್ಪಿಗೆ ಇಲ್ಲ]

ದೂರಿನ ಅನ್ವಯ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ಸುದರ್ಶನ್ ಅವರು ಸುಳ್ಳು ಪ್ರಮಾಣ ಪತ್ರಗಳನ್ನು ನೀಡಿ ನಿವೇಶನ ಪಡೆದಿರುವುದು ಸಾಬೀತಾಗಿಲ್ಲ ಎಂದು ಕ್ಲೀನ್ಚಿಟ್ ನೀಡಿದ್ದಾರೆ. ನಿಯಮಗಳಿಗೆ ಅನ್ವಯವಾಗಿಯೇ ಅವರಿಗೆ ಸೈಟು ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ದೂರಿನಲ್ಲಿ ಏನಿತ್ತು : 2001ರಲ್ಲಿ ಸುದರ್ಶನ್ ಅವರಿಗೆ ಬಿಡಿಎಯಿಂದ ಜಿ ಕೆಟಗರಿ ನಿವೇಶನ ಮಂಜೂರಾಗಿತ್ತು. ಆಗ ಅವರು ತಮ್ಮ ಹೆಸರಿನಲ್ಲಿ ನಗರದಲ್ಲಿ ನಿವೇಶನವಿಲ್ಲ ಎಂದು ಪ್ರಮಾಣ ಪತ್ರ ಸಲ್ಲಿಸಿದ್ದರು. ಸುದರ್ಶನ್ ಅವರ ಪುತ್ರ ವಿ.ಎಸ್.ಅರ್ಜುನ್ ಅವರಿಗೆ ಎನ್ಐಟಿ ಗೃಹ ನಿರ್ಮಾಣ ಸಂಘದಿಂದ ನಿವೇಶನ ಮಂಜೂರಾಗಿತ್ತು. ಆದ್ದರಿಂದ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಆರೋಪಿಸಲಾಗಿತ್ತು.
ಲೋಕಾಯುಕ್ತ ತನಿಖೆಯಲ್ಲಿ ವಿ.ಎಸ್.ಅರ್ಜುನ್ ಅವರು ಪಡೆದಿರುವ ಸೈಟಿಗೆ ಅವರೇ ಮಾಲೀಕರು ಎಂಬುದು ತಿಳಿದುಬಂದಿದೆ. ಆದ್ದರಿಂದ, ಸುದರ್ಶನ್ ಅವರು ಸುಳ್ಳು ಪ್ರಮಾಣ ಪತ್ರ ಸಲ್ಲಿಸಿಲ್ಲ ಎಂದು ಸಾಬೀತಾಗಿದ್ದು, ಬಿಡಿಎ ನಿಯಮಗಳ ಅನ್ವಯವೇ ನಿವೇಶನ ಹಂಚಿಕೆಯಾಗಿದೆ ಎಂದು ಹೇಳಿರುವ ಪೊಲೀಸರು ಸುದರ್ಶನ್ ಅವರಿಗೆ ಕ್ಲೀನ್ಚಿಟ್ ನೀಡಿದ್ದಾರೆ.
ವಿ.ಆರ್.ಸುದರ್ಶನ್ ಅವರ ಹೆಸರನ್ನು ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಹುದ್ದೆಗೆ ಶಿಫಾರಸು ಮಾಡಲಾಗಿತ್ತು. ಆದರೆ, ಅವರ ವಿರುದ್ಧ ಅಕ್ರಮವಾಗಿ ಸೈಟು ಪಡೆದ ಆರೋಪವಿದೆ ಎಂದು ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿತ್ತು. ರಾಜ್ಯಪಾಲರು ಸುದರ್ಶನ್ ಅವರನ್ನು ಅಧ್ಯಕ್ಷ ಹುದ್ದೆಗೆ ನೇಮಕ ಮಾಡಲು ಒಪ್ಪಿಗೆ ನೀಡಿಲ್ಲ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications