ವಿಧಾನಸಭೆ ಚರ್ಚೆಯಲ್ಲಿ ಪದಬಳಕೆ ಬಗ್ಗೆ ಎಚ್ಚರಿಕೆ ಇರಲಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಮೇ 24: ಈ ಬಾರಿಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಅನೇಕ ಮಂದಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಹಿನ್ನೆಲೆ ಕರ್ನಾಟಕ ವಿಧಾನಸಭೆಯಲ್ಲಿ ಭಾಗವಹಿಸುವವರಿಗೆ ಪದ ಬಳಕೆ ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿವಿಮಾತು ಹೇಳಿದ್ದಾರೆ.
ನೂತನ ಸ್ಪೀಕರ್ ಆಗಿ ಯುಟಿ ಖಾದರ್ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಶುಭಾಶಯ ತಿಳಿಸಿದ ಸಿದ್ದರಾಮಯ್ಯ, ವಿಧಾನಸಭೆಯಲ್ಲಿ ಆರೋಗ್ಯಪೂರ್ಣ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಕೂಡಿದ ಚರ್ಚೆಗಳಾಗುವ ಮೇಲ್ಪಂಕ್ತಿಯನ್ನು ಎತ್ತಿಹಿಡಿದುವ ಜವಾಬ್ದಾರಿ ಸಭಾಧ್ಯಕ್ಷರ ಮೇಲಿದೆ. ಸದನದ ಘನತೆ, ಗಾಂಭೀರ್ಯ, ಗೌರವವನ್ನು ಸ್ಪೀಕರ್ ಎತ್ತಿಹಿಡಿಯಬೇಕು. ಖಾದರ್ ಅವರ ಮುಂದಾಳ್ವತ್ವದಲ್ಲಿ ಸದನದ ಚರ್ಚೆ ಮೇಲ್ಮಟ್ಟಕ್ಕೇರಲಿ ಎಂದು ಆಶಿಸುತ್ತೇನೆ ಎಂದರು.

ಖಾದರ್ ಅವರು ಸಭಾದ್ಯಕ್ಷರ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುವ ನಂಬಿಕೆ, ವಿಶ್ವಾಸವಿದೆ. ಅವರು ಬಹಳ ತಾಳ್ಮೆ ಇರುವ ವ್ಯಕ್ತಿ. ಅದು ಈ ಹುದ್ದೆಗೆ ಅಗತ್ಯವಾದ ಗುಣ. ಸದನದಲ್ಲಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಚರ್ಚೆಗಳಾಗಲಿ. ಹೊಸದಾಗಿ ಆರಿಸಿ ಬಂದ ಸದಸ್ಯರಿಗೆ ಅಭಿನಂದನೆಗಳು. ಸರ್ಕಾರವಾಗಿ ತಮಗೆ ನಾವು ಎಲ್ಲ ರೀತಿಯ ಸಹಕಾರವನ್ನು ನೀಡುತ್ತೇವೆ ಎಂದರು.
ರಾಜಕಾರಣದ ಕುಟುಂಬದಿಂದ ಬಂದಿರುವ ಯುಟಿ ಖಾದರ್ ಅವರು ತಮ್ಮ ತಂದೆಯ ನಿಧನದ ನಂತರ ಉಳ್ಳಾಲ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ಅತ್ಯಂತ ಉತ್ಸಾಹಿ, ಸಕ್ರಿಯ ರಾಜಕಾರಣಿಯಾದ ಖಾದರ್ ಅವರು ಶಾಸಕರಾಗಿ ಹಾಗೂ ಸಚಿವರಾಗಿ ಕಾರ್ಯನಿರ್ವಹಿಸಿದ್ದು, 2018 ರಲ್ಲಿ ಅತಿ ಹೆಚ್ಚು ಪ್ರಶ್ನೆಗಳನ್ನು ಕೇಳಿದ್ದಕ್ಕಾಗಿ "ಸದನವೀರ" ಪ್ರಶಸ್ತಿಯೂ ದೊರೆತಿತ್ತು.

ಯು.ಟಿ.ಖಾದರ್ ಅವರು ಮಾದರಿ ಶಾಕಸರಾಗಿ ಕೆಲಸ ಮಾಡಿದ್ದು, ವಿರೋಧ ಪಕ್ಷದಲ್ಲಿದ್ದ ಸಂದರ್ಭದಲ್ಲಿ ವಿರೋಧಪಕ್ಷದ ಉಪನಾಯಕರಾಗಿ ಪರಿಣಾಮಕಾರಿಯಾಗಿ, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಜಾತ್ಯಾತೀತ ಮನೋಭಾವ ಉಳ್ಳವರು ಕೂಡ. ಸಭಾಧ್ಯಕ್ಷರಾದವರು ಪಕ್ಷಾತೀತವಾಗಿ ಕೆಲಸ ಮಾಡಬೇಕೆಂದು ಎಲ್ಲ ಸದಸ್ಯರೂ ಬಯಸುತ್ತಾರೆ. ವಿಧಾನಸಭೆಯಲ್ಲಿ ಈ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತನಾಡಬೇಕು. ಇತ್ತೀಚಿನ ದಿನಗಳಲ್ಲಿ ವಿಧಾನಸಭೆಯ ಗುಣಮಟ್ಟ ಕಡಿಮೆಯಾಗುತ್ತಿದೆ ಎಂಬ ಭಾವನೆ ಅನೇಕರಲ್ಲಿದೆ. ಆ ಭಾವನೆ ಹೋಗಲಾಡಿಸುವ ಕೆಲಸವನ್ನು ಎಲ್ಲರೂ ಮಾಡಬೇಕಿದೆ.
"ವಿಧಾನಸಭೆ ಪ್ರಜಾಪ್ರಭುತ್ವದ ದೇಗುಲ". ಇಲ್ಲಿ ಏಳು ಕೊಟಿ ಕನ್ನಡಿಗರ ಸಮಸ್ಯೆಗಳನ್ನು ಚರ್ಚೆ ಮಾಡಬೇಕು. ಸದನದ ಅಧ್ಯಕ್ಷರಿಗೆ ಪ್ರಜಾಪ್ರಭುತ್ವದಲ್ಲಿ ಮಹತ್ವದ ಸ್ಥಾನವಿದೆ. ಸದನದ ಚರ್ಚೆಯಲ್ಲಿ ಅನೇಕ ವಿಚಾರಗಳು ಬರುತ್ತವೆ. ಚರ್ಚೆಯಲ್ಲಿ ಭಾಗವಹಿಸುವಾಗ ಪದಬಳಕೆಯಲ್ಲಿ ಬಹಳ ಎಚ್ಚರಿಕೆ ವಹಿಸಬೇಕು. ಅಸಂವಿಧಾನಾತ್ಮಕ ಪದಬಳಕೆಗೆ ಅವಕಾಶವಿರಬಾರದು. ರಚನಾತ್ಮಾಕವಾದ ಸಲಹೆಗಳನ್ನು ನೀಡಲು ಎಲ್ಲರಿಗೂ ಅವಕಾಶ ಹಾಗೂ ಹಕ್ಕುಗಳಿವೆ ಎಂದು ಹೇಳಿದರು.
ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಬೆಳವಣಿಗೆ ಒಂದಕ್ಕೊಂದು ಪೂರಕ. ವಿಧಾನಸಭೆಗೆ ಬಂದ ಮೇಲೆ ರಾಜ್ಯದ ಅಭಿವೃದ್ಧಿ, ಜನರ ರಕ್ಷಣೆ, ಕಾನೂನು ಸುವ್ಯವಸ್ಥೆ ಇರಬೇಕು. ಕಾನೂನು ಸುವ್ಯವಸ್ಥೆ ಇಲ್ಲದಿದ್ದರೆ ಬಂಡವಾಳ ಹೂಡಿಕೆಯಾಗುವುದಿಲ್ಲ. ಬಂಡವಾಳ ಹೂಡಿಕೆಯಾಗದಿದ್ದರೆ, ಉದ್ಯೋಗ ಸೃಷ್ಟಿಯಾಗುವುದಿಲ್ಲ. ಉದ್ಯೋಗ ಸೃಷ್ಟಿಯಾಗದಿದ್ದರೆ ನಿರುದ್ಯೋಗದ ಸಮಸ್ಯೆ ಬಗೆಹರಿಸಲು ಆಗುವುದಿಲ್ಲ. ರಾಜ್ಯದ ಅಭಿವೃದ್ಧಿ, ಜಿಡಿಪಿ ಬೆಳವಣಿಗೆಯೂ ಆಗುವುದಿಲ್ಲ. ಆದ್ದರಿಂದ ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಬೆಳವಣಿಗೆ ಒಂದಕ್ಕೊಂದು ಪೂರಕವಾಗಿದೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications