ಬಂಡೀಪುರದಲ್ಲಿ ತಲೈವಾ: ಫೋಟೊ ಹಂಚಿಕೊಂಡ ಬಿಯರ್ ಗ್ರಿಲ್ಸ್
ಬೆಂಗಳೂರು, ಜನವರಿ 29: ಕರ್ನಾಟಕದ ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ತಲೈವಾ ರಜನಿಕಾಂತ್ ಜತೆಗೆ 'ಮ್ಯಾನ್ ವರ್ಸಸ್ ವೈಲ್ಡ್' ಕಾರ್ಯಕ್ರಮದ ಚಿತ್ರೀಕರಣ ಮುಗಿಸಿದ ಬಳಿಕ ಬಿಯರ್ ಗ್ರಿಲ್ಸ್, ಅವರೊಂದಿಗಿನ ಚಿತ್ರವನ್ನು ಹಂಚಿಕೊಂಡಿದ್ದಾರೆ.
'ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾಡಿದ ನಮ್ಮ ಕಾರ್ಯಕ್ರಮ ಭಾರಿ ಜನಪ್ರಿಯತೆ ಗಳಿಸಿತ್ತು (3.6 ಬಿಲಿಯನ್ ವೀಕ್ಷಣೆ). ಮುಂದೆ ನನ್ನನ್ನು ಸೂಪರ್ಸ್ಟಾರ್ ರಜನಿಕಾಂತ್ ಸೇರಿಕೊಂಡಿದ್ದಾರೆ. ನಮ್ಮ ಮುಂದಿನ ಕಾರ್ಯಕ್ರಮದಲ್ಲಿ ಅವರು ತಮ್ಮ ಟೆಲಿವಿಷನ್ ಪಾದಾರ್ಪಣೆ ಮಾಡಲಿದ್ದಾರೆ' ಎಂದು ಬಿಯರ್ ಗ್ರಿಲ್ಸ್ ಟ್ವೀಟ್ ಮಾಡಿದ್ದಾರೆ.
ಮೊದಲು ಟ್ವೀಟ್ ಮಾಡಿದ್ದ ಬಿಯರ್ ಗ್ರಿಲ್ಸ್, ರಜನಿಕಾಂತ್ ಅವರನ್ನು ಬಾಲಿವುಡ್ ಸೂಪರ್ ಸ್ಟಾರ್ ಎಂದು ಕರೆದಿದ್ದರು. ಅವರು ಬಾಲಿವುಡ್ ನಟ ಅಲ್ಲ ಎಂಬ ಪ್ರತಿಕ್ರಿಯೆಗಳು ಬಂದಿದ್ದರಿಂದ ಹಳೆಯ ಟ್ವೀಟ್ ಅಳಿಸಿ, ಬಾಲಿವುಡ್ ಪದ ತೆಗೆದುಹಾಕಿ ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಅಕ್ಷಯ್ ಕುಮಾರ್ ಚಿತ್ರೀಕರಣ ಗುರುವಾರ
ರಜನಿಕಾಂತ್ ಅವರಲ್ಲದೆ, ಬಾಲಿವುಡ್ ನಟ ಅಕ್ಷಯ್ ಕುಮಾರ್ ಕೂಡ 'ಮ್ಯಾನ್ ವರ್ಸಸ್ ವೈಲ್ಡ್' ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಅರಣ್ಯ ಇಲಾಖೆಯು ಜ.28 ರಿಂದ ಜ. 30ರವರೆಗೆ ದಿನಕ್ಕೆ ಆರು ಗಂಟೆಗಳ ಚಿತ್ರೀಕರಣಕ್ಕೆ ಮಾತ್ರ ಅನುಮತಿ ನೀಡಿದೆ. ಗುರುವಾರ ರಜನಿಕಾಂತ್ ಅವರೊಂದಿಗೆ ಚಿತ್ರೀಕರಣ ನಡೆಸಲಾಗಿದೆ. ಜ. 30ರಂದು ಬಾಲಿವುಡ್ ನಟ ಅಕ್ಷಯ್ ಕುಮಾರ್ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ ಎಂದು ಅರಣ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೀಮಿತ ಸ್ಥಳಗಳಲ್ಲಿ ಅನುಮತಿ
'ಸುಲ್ತಾನ್ ಬತ್ತೇರಿ ಹೆದ್ದಾರಿ ಮತ್ತು ಮುಳ್ಳೆಹೊಳೆ, ಮದ್ದೂರು ಮತ್ತು ಕಲ್ಕೆರೆ ಅರಣ್ಯ ವ್ಯಾಪ್ತಿಯಲ್ಲಿ ಚಿತ್ರೀಕರಣ ನಡೆಸಲು ಅನುಮತಿ ನೀಡಲಾಗಿದೆ. ಅವರು ಪ್ರವಾಸೋದ್ಯಮ ವಲಯವಲ್ಲದ ಸ್ಥಳದಲ್ಲಿ ಚಿತ್ರೀಕರಿಸಲಿದ್ದಾರೆ. ವೈಲ್ಡ್ ಕರ್ನಾಟಕ ಸಾಕ್ಷ್ಯ ಚಿತ್ರಕ್ಕೆ ಅವಕಾಶ ನೀಡಿದ್ದರಿಂದ ಈ ಚಿತ್ರೀಕರಣಕ್ಕೆ ಸಹ ಅವಕಾಶ ನೀಡಬೇಕಿತ್ತು. ಇದರಿಂದ ಪ್ರವಾಸೋದ್ಯಮ, ದೈನಂದಿನ ಅರಣ್ಯ ಗಸ್ತು ಮತ್ತು ಕಾಳ್ಗಿಚ್ಚು ಹಾದಿ ನಿರ್ಮಾಣ ಕಾರ್ಯಕ್ಕೆ ಇದರಿಂದ ಅಡ್ಡಿಯಾಗುವುದಿಲ್ಲ' ಎಂದು ಅವರು ಹೇಳಿದ್ದಾರೆ.

ತಲೈವಾ ಹೇಳಿದ್ದೇನು?
ಬಿಯರ್ ಗ್ರಿಲ್ಸ್ ನಡೆಸಿಕೊಡುತ್ತಿರುವ ಕಾರ್ಯಕ್ರಮದಲ್ಲಿ 'ನೀರಿನ ಸಂರಕ್ಷಣೆ' ಕುರಿತು ಈ ಸರಣಿ ಪ್ರಸಾರವಾಗಲಿದೆ. 'ನೀರಿನ ಸಂರಕ್ಷಣೆಗೆ ಪ್ರತಿಯೊಬ್ಬ ಭಾರತೀಯರೂ ಮುಂದೆ ಬಂದು ತಮ್ಮ ಕೊಡುಗೆ ನೀಡಬೇಕಿದೆ. ಸರ್ಕಾರ, ಸಮುದಾಯ ಮತ್ತು ವೈಯಕ್ತಿಕ ಮುಂದಾಳತ್ವ ಸೇರಿದಂತೆ ಎಲ್ಲ ಮಟ್ಟಗಳಲ್ಲಿಯೂ ಈ ಸಮರ ನಡೆಯಬೇಕಿದೆ. ದೇಶದಾದ್ಯಂತ ಪ್ರತಿ ಮನೆಯಲ್ಲಿಯೂ ನೀರಿನ ಸಂರಕ್ಷಣೆಯ ಸಂದೇಶ ರವಾನಿಸಲು ಡಿಸ್ಕವರಿ ಚಾನೆಲ್ನ ಈ ಕಾರ್ಯಕ್ರಮ ಸೂಕ್ತ ವೇದಿಕೆ ಎಂಬುದಾಗಿ ನಾನು ಭಾವಿಸಿದ್ದೇನೆ' ಎಂದು ನಟ ರಜನಿಕಾಂತ್ ಹೇಳಿದ್ದಾರೆ.

ಡಿಸ್ಕವರಿಯಲ್ಲಿ ತಲೈವಾ
'ನರೇಂದ್ರ ಮೋದಿ ಅವರ ಬಳಿಕ ಭಾರತದ ಮಾದರಿ ವ್ಯಕ್ತಿಗಳಿಗೆ ಆತಿಥ್ಯ ವಹಿಸುವುದನ್ನು ಮುಂದುವರಿಸುತ್ತಿದ್ದೇವೆ. ರಜನಿಕಾಂತ್ ಅವರು ತಮ್ಮ ಟೆಲಿವಿಷನ್ ಪಾದಾರ್ಪಣೆ ಮೂಲಕ ಬಿಯರ್ ಗ್ರಿಲ್ಸ್ ಅವರನ್ನು ಸೇರಿಕೊಂಡಿರುವುದು ಮತ್ತು ನೀರಿನ ಸಂರಕ್ಷಣೆ ಬಗ್ಗೆ ಸಂದೇಶ ನೀಡುತ್ತಿರುವುದು ಹರ್ಷದಾಯಕ. ಡಿಸ್ಕವರಿಯಲ್ಲಿ ತಲೈವಾ' ಎಂದು ಡಿಸ್ಕವರಿ ವಾಹಿನಿ ಟ್ವೀಟ್ ಮಾಡಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications