ಸತ್ಯಸಾಯಿಬಾಬಾ ಸಂದೇಶದಿಂದ ನಾನು ಸಸ್ಯಾಹಾರಿಯಾದೆ- ಸಿಎಂ ಬೊಮ್ಮಾಯಿ
ಬೆಂಗಳೂರು, ನವೆಂಬರ್ 03: ಪುಟ್ಟಪರ್ತಿಯ ಸತ್ಯಸಾಯಿಬಾಬಾ ಅವರ ಸಂದೇಶ ನೀಡಿದ ನಾನು ಸಸ್ಯಾಹಾರಿ ಆಗಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಪುಟ್ಟಪರ್ತಿಯ ಪ್ರಶಾಂತಿ ನಿಲಯಂ ವತಿಯಿಂದ ಆಯೋಜಿಸಿದ್ದ ಶ್ರೀಸತ್ಯಸಾಯಿ ಡಿಜಿಟಲ್ ಮ್ಯೂಸಿಯಂ ಉದ್ಘಾಟಿಸಿ ಮಾತನಾಡಿದರು.
ಇಲ್ಲಿಗೆ ಭೇಟಿ ನೀಡಿರುವುದು ನನ್ನ ಬದುಕಿನ ದಿವ್ಯ ಗಳಿಗೆಗಳನ್ನು ಮರುಕಳಿಸಿದೆ. 1998 ರಲ್ಲಿ ಪ್ರಶಾಂತಿ ನಿಲಯಕ್ಕೆ ಭೇಟಿ ನೀಡಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಒಂದು ಆಹಾರ ಪದ್ದತಿಯ ಕುರಿತಾದ ಪುಸ್ತಕದ ನೂರು ಪುಟಗಳನ್ನು ಓದಿದ್ದೆ ಎಂದರು. ನಾನು ಹೇಳಬೇಕಾಗಿದ್ದು ಪುಸ್ತಕದಲ್ಲಿದೆ, ಅದೇ ನನ್ನ ಸಂದೇಶ ಎಂದು ಬಾಬಾ ಮಾತನಾಡದೆಯೇ ತಿಳಿಸಿದ್ದರು ಎಂದರು. ಅಂದಿನಿಂದ ತಾವು ಸಸ್ಯಾಹಾರಿಗಳಾಗಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಸ್ಫೂರ್ತಿ ಮತ್ತು ದೈವತ್ವದ ಅನುಭೂತಿ ಈ ಸ್ಥಳ ನೀಡಿದೆ ಎಂದರು.
ಸಂಸಾರದ ಕಟ್ಟುಪಾಡುಗಳಿಂದ ದೂರಾಗಿ ಸತ್ಯಸಾಯಿಬಾಬಾ ಮಾನವ ಕಲ್ಯಾಣಕ್ಕಾಗಿ ತಮ್ಮ ಬದುಕನ್ನೇ ಗಂಧದ ಕೊರಡಿನಂತೆ ತೇಯ್ದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ದೈವೀಪುರುಷ
ಇಲ್ಲಿಗೆ ಭೇಟಿ ನೀಡಿ ನನ್ನಲ್ಲಿ ಪುನೀತ ಭಾವ ಮೂಡಿದೆ. ಸಾಯಿಬಾಬಾ ಅವರ ಸಂಪೂರ್ಣ ದರ್ಶನವಾಗುವ ಮ್ಯೂಸಿಯಂ ಉದ್ಘಾಟನೆ ಮಾಡಿದ್ದೇನೆ. ಸತ್ಯಸಾಯಿಬಾಬಾ ಸಾಮಾನ್ಯ ಜನರಲ್ಲಿ ಅವತಾರ ಪುರುಷರು ಎಂದು ಕರೆಯುತ್ತಾರೆ. ನಿಜವಾದ ಬಾಬಾ ಅವರನ್ನು ಅರಿಯಲು ನಮ್ಮ ಮನದಾಳದಲ್ಲಿ ದೈವತ್ವ ಬೇಕು. ಅವರು ದೈವತ್ವದ ಪ್ರತಿರೂಪ. ಇತರರಿಗೆ ದೈವತ್ವದ ಪರಿಮಳವನ್ನು ಬಿಟ್ಟುಹೋಗಿರುವ ದೈವೀಪುರುಷ. ಯುಗಪುರುಷರು ಮನುಷ್ಯರಾಗಿ ಹುಟ್ಟಿ ದೇವಮಾನವರಾಗುತ್ತಾರೆ. ಸಾಯಿಬಾಬಾ ಅವರು ಭೂಮಿಯಲ್ಲಿ ಪ್ರೀತಿ, ವಿಶ್ವಾಸ, ವಾತ್ಸಲ್ಯವನ್ನು ಬಿಟ್ಟುಹೋಗಿದ್ದಾರೆ. ಅವರ ಬೋಧನೆಗಳಲ್ಲಿ ಪರಮಾತ್ಮನಲ್ಲಿ ಲೀನನಾಗುವ ದಾರಿಯನ್ನು ತೋರಿದ್ದಾರೆ ಎಂದರು.
ಜಗತ್ತನ್ನು ಮೀರಿದ ಅಸ್ತಿತ್ವ
ಭಕ್ತಿಯ ಮಾರ್ಗವನ್ನು ತೋರಿಸಿದ್ದಾರೆ. ಭಗವಂತನೊಳಗೆ ಲೀನನಾಗುವುದು ಹೇಗೆಂದು ಬಾಬಾ ಅವರು ನಡೆದು ನಮಗೆ ತಿಳಿಸಿದ್ದಾರೆ. ಉದ್ದೇಶ ಪೂರ್ತಿ ಮಾಡಿ ಸೃಷ್ಟಿಕರ್ತನಲ್ಲಿ ಲೀನರಾಗಿದ್ದಾರೆ. ಬಾಬಾ ಅವರಿಗೆ ಹುಟ್ಟು ಸಾವು ಇಲ್ಲ. ಕಾಲಾತೀತವಾಗಿ ಇರುವವರು. ಜಗತ್ತನ್ನು ಮೀರಿ ಅವರ ಅಸ್ತಿತ್ವವಿದೆ. ಇವೆಲ್ಲವನ್ನು ಅನುಭವಿಸಬೇಕಾದರೆ ನಮ್ಮೊಳಗೆ ದೈವತ್ವದ ಅಂಶವಿರಬೇಕು. ದೈವತ್ವನ್ನು ದೈವತ್ವ ಮಾತ್ರ ಸಂಪರ್ಕಿಸಬಲ್ಲದು. ಹೃದಯ ಮತ್ತು ಆತ್ಮಗಳ ಪಾವಿತ್ರ್ಯತೆಯೇ ದೈವತ್ವ. ಕಾಮ, ಕ್ರೋಧ, ಮದ, ಮತ್ಸರಗಳ ಸಂಕೋಲೆಯಿಂದ ಆಚೆ ಬರುವುದೇ ಶುದ್ಧತೆ. ತಾಮಸ ಗುಣಗಳನ್ನು ಬಿಟ್ಟರೆ, ಶುದ್ಧತೆ ಉಂಟಾಗುತ್ತದೆ. ಅದನ್ನೇ ಸಾಯಿಬಾಬಾ ಬೋಧಿಸಿದರು. ಅವರ ಮಾರ್ಗದರ್ಶನದಲ್ಲಿ ನಡೆದರೆ, ನಾವು ದೈವತ್ವಕ್ಕೆ ಹತ್ತಿರವಾಗಬಹುದು ಎಂದರು.

ಸಾಧಕನಿಗೆ ಸಾವು ಅಂತ್ಯವಲ್ಲ ಎಂದು ಸ್ವಾಮಿ ವಿವೇಕಾನಂದ ಹೇಳಿದ್ದರು. ಸಾಯಿ ಬಾಬಾ ಅವರಿಗೆ ಆರಂಭ, ಅಂತ್ಯಗಳಿಲ್ಲ. ಆದರೆ ಅವರು ನಿತ್ಯ. ಪ್ರತಿಕ್ಷಣವೂ ಅವರು ಬದುಕುತ್ತಿದ್ದಾರೆ. ದೈವತ್ವ ಎನ್ನುವುದು ಅಮರ ಎಂದರು.
ತಮ್ಮ ತಾಯಿಯವರು ಕ್ಯಾನ್ಸರ್ನಿಂದ ಬಳಲುತ್ತಿದ್ದಾಗ ಬಾಬಾ ಅವರನ್ನು ಪ್ರಾರ್ಥಿಸಿದಾಗ ಚೇತರಿಸಿಕೊಂಡರು ಎಂದು ನೆನಪು ಮಾಡಿಕೊಂಡ ಮುಖ್ಯಮಂತ್ರಿಗಳು ಪ್ರಧಾನಮಂತ್ರಿಗಳೂ ಸಹ ಮೈಸೂರಿಗೆ ಭೇಟಿ ನೀಡದ ಸಂದರ್ಭದಲ್ಲಿ ಸಾಯಿಬಾಬಾ ಭಕ್ತರು ಎಂದು ತಿಳಿಸಿದ್ದರು ಎಂದರು.
ಶಾಸಕ ಅರವಿಂದ ಲಿಂಬಾವಳಿ, ಸತ್ಯಸಾಯಿ ಆಶ್ರಮ ಟ್ರಸ್ಟ್ನ ವ್ಯವಸ್ಥಾಪಕ ನಿರ್ದೇಶಕ ರತ್ನಾಕರ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಆಶ್ರಮದ ಟ್ರಸ್ಟಿಗಳು ಉಪಸ್ಥಿತರಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications