ಬೇಡ ಜಂಗಮರ ಬೃಹತ್ ಸಮಾವೇಶ: ಪ್ರತಿಭಟನಾಕಾರರಿಗೆ ಪೊಲೀಸರ ತಡೆ
ಬೆಂಗಳೂರು ಜೂ.30, ಅಖಿಲ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಬೆಳಗ್ಗೆ 11ಗಂಟೆಗೆ 'ಬೇಡ ಜಂಗಮ ಸತ್ಯ ಪ್ರತಿಪಾದನಾ ಸತ್ಯಾಗ್ರಹ ಹೋರಾಟ'- ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ. ಆದರೆ ಸಮಾವೇಶಕ್ಕೆ ತೆರಳುತ್ತಿದ್ದ ವಿವಿಧ ಜಿಲ್ಲೆಗಳ ಸಮುದಾಯದ ಮುಖಂಡರು, ಕಾರ್ಯಕರ್ತನ್ನು ಪೊಲೀಸರ ರಸ್ತೆಯಲ್ಲೆ ತಡೆದು ನಿಲ್ಲಿಸಿದ್ದಾರೆ.
ಪ್ರತಿಭಟನೆಗೆ ಅನುಮತಿ ನಿರಾಕರಿಸಲಾಗಿದೆ ಎನ್ನಲಾಗಿದೆ. ಈ ಹಿನ್ನೆಲೆ ಸಮಾವೇಶದಲ್ಲಿ ಪಾಲ್ಗೊಳ್ಳಲು ಬರುತ್ತಿದ್ದ 30ಕ್ಕೂ ಹೆಚ್ಚು ಬಸ್ ಗಳನ್ನು ಹಾಗೂ 50ಕ್ಕೂ ಹೆಚ್ಚು ಟ್ಯಾಕ್ಸಿಗಳನ್ನು ಪೊಲೀಸರು ತಡೆದಿದ್ದಾರೆ. ತುಮಕೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಕೆಲ ಕಾಲ ಸಂಚಾರಕ್ಕೆ ತೊಂದರೆ ಆಯಿತು. ಪೊಲೀಸರೊಂದಿಗೆ ಮಾತಿನ ಚಕಮಕಿಯೂ ನಡೆಯಿತು ಎಂದು ತಿಳಿದು ಬಂದಿದೆ.
ಬೇಡ ಜಂಗಮ ಸಮಾವೇಶಕ್ಕೆ ಅನುಮತಿ ನೀಡಿಲ್ಲವಾದ್ದರಿಂದ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ನಾನಾ ಮೂಲೆಗಳಿಂದ ರಾಜಧಾನಿಗೆ ಆಗಮಿಸುತ್ತಿದ್ದ ಸಮುದಾಯ ಸಾವಿರಾರು ಜನರನ್ನು ಶಿರಾ ತಾಲೂಕಿನ ಕರಜೀವನಹಳ್ಳಿ ಬಳಿ ತಡೆಯಲಾಗಿದೆ. ತುಮಕೂರು ಎಸ್ ಪಿ ರಾಹುಲ್ ಕುಮಾರ್ ನೇತೃತ್ವದಲ್ಲಿ ಸ್ಥಳದಲ್ಲಿ ಮೊಕ್ಕಾಂ ಹೂಡಲಾಗಿದೆ. ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

ಪ್ರತಿಭಟನಾಕಾರರ ಆಕ್ರೋಶ :
ಸಮಾವೇಶಕ್ಕೆ ಅನುಮತಿ ನೀಡಿದ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಬೇಡ ಜಂಗಮರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದ್ದಾರೆ. ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಇದರಿಂದಾಗಿ ಹೆದ್ದಾರಿಯಲ್ಲಿ ಕಿಲೋ ಮೀಟರ್ ಗಟ್ಟಲೇ ಸಂಚಾರ ದಟ್ಟಣೆ ಉಂಟಾಗಿದೆ. ಉತ್ತರ ಕರ್ನಾಟಕದ ಹುಬ್ಬಳ್ಳಿ, ಬೆಳಗಾವಿ, ಚಿತ್ರದುರ್ಗ, ದಾವಣಗೆರೆ ಇನ್ನಿತರ ಕಡೆಯಿಂದ ಬರುವ ವಾಹನ ಸವಾರರು ಪದಾಡಿದ್ದಾರೆ. ಕರಜೀವನಹಳ್ಳಿ ಭಾಗದಲ್ಲೂ ಸಂಚಾರ ಸಮಸ್ಯೆ ಉಂಟಾಗಿದೆ.
ರೈಲು ಹಿಡಿದು ಬರುತ್ತಿರುವ ಬೇಡ ಜಂಗಮರು:
ಪೊಲೀಸರ ತಡೆಗೆ ಮಣಿಯದ ಬೇಡ ಜಂಗಮರು ಬೆಳಗ್ಗೆ 8ಗಂಟೆ ನಂತರ ತುಮಕೂರಿನಿಂದ ಬೆಂಗಳೂರಿಗೆ ಇರುವ ಪ್ಯಾಸೆಂಜರ್ ರೈಲುಗಳ ಸಮಯ, ಒಬ್ಬರಿಗೆ 35 ರಿಂದ 40 ರೂ.ಟಿಕೆಟ್ ದರ ಇರುವ ಬಗ್ಗೆ ಮಾಹಿತಿ ಪಡೆದಿದ್ದಾರೆ. ಕೂಡಲೇ ರೈಲು ಮೂಲಕ ಬೆಂಗಳೂರು ತಲುಪುವಂತೆ ಕರೆ ನೀಡಿದ್ದಾರೆ. ರಸ್ತೆಯಲ್ಲೇ ಕುಳಿತಿದ್ದವರ ಪೈಕಿ ಅನೇಕರು ಈಗಾಗಲೇ ರೈಲಿನ ಮೂಲಕ ರಾಜಧಾನಿಯತ್ತ ಧಾವಿಸಿದ್ದಾರೆ.
ಬೇಡ ಜಂಗಮ ಸಮುದಾಯದವರನ್ನು ಪರಿಶಿಷ್ಟ ಜಾತಿಯಡಿ ಸೇರಿಸಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಒಕ್ಕೂಟದ ಕರೆಯ ಮೇರೆಗೆ ನಡೆಯುತ್ತಿದ್ದ ಈ ಪ್ರತಿಭಟನಾ ಸಮಾವೇಶದಲ್ಲಿ ವಿವಿಧ ಬೇಡ ಜಂಗಮರ ವಿವಿಧ ಸಂಘ, ಸಂಸ್ಥೆಗಳು, ಮಠಾಧೀಶರು, ಮುಖಂಡರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಖಿಲ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಿ.ಡಿ. ಹಿರೇಮಠ ಹೋರಾಟದ ನೇತೃತ್ವ ವಹಿಸಿದ್ದಾರೆ.
Recommended Video
-
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು












Click it and Unblock the Notifications