ಬೇಡ್ತಿ-ವರದಾ ನದಿ ಜೋಡಣೆ: ಸಮಾವೇಶ, ಹೋರಾಟ ಬಗ್ಗೆ ವಿವರಿಸಿದ ಬಸವರಾಜ ಬೊಮ್ಮಾಯಿ
ಹಾವೇರಿ: ಬೇಡ್ತಿ ವರದಾ ನದಿ ಜೋಡಣೆ ಯೋಜನೆ ನಮ್ಮ ಬದುಕಿನ ಪ್ರಶ್ನೆ, ಭವಿಷ್ಯದ ಪ್ರಶ್ನೆ. ಅದಕ್ಕಾಗಿ ನಮ್ಮ ಹೋರಾಟ ನಮ್ಮ ಬದುಕಿಗಾಗಿ ಹೊರತು ಯಾರ ವಿರುದ್ಧವೂ ಅಲ್ಲ ಎಂದು ಸ್ಪಷ್ಟಪಡಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಬೇಡ್ತಿ ವರದಾ ನದಿ ಜೋಡಣೆಯ ಅಗತ್ಯತೆ ಕುರಿತು ಹಾವೇರಿಯ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿಗಳ ನೇತೃತ್ವದ ನಿಯೋಗವನ್ನು ಸಿಎಂ, ಡಿಸಿಎಂ ಬಳಿ ತೆಗೆದುಕೊಂಡು ಹೋಗಲಾಗುವುದು. ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ಮತ್ತು ರಾಜ್ಯಕ್ಕೂ ನಿಯೋಗ ತೆಗೆದುಕೊಂಡ ಹೋಗಿ ಒತ್ತಡ ಹಾಕಲಾಗುವುದು. ಈ ಯೋಜನೆ ಕುರಿತು ಮನವರಿಕೆ ಮಾಡುವ ಅವಶ್ಯಕತೆ ಇದೆ. ಡಿಪಿಆರ್ ನಲ್ಲಿ ಹಾವೇರಿ ಜಿಲ್ಲೆಯಲ್ಲಿ ನೀರು ಸಂಗ್ರಹಿಸುವ ಪ್ರತ್ಯೇಕ ವ್ಯವಸ್ಥೆ ಆಗಬೇಕು. ಅದನ್ನು ಸೇರಿಸುವಂತೆ ಈಗಾಗಲೇ ಬರೆದಿದ್ದೇನೆ ಅದನ್ನು ಒತ್ತಾಯ ಮಾಡಲಾಗುವುದು ಎಂದು ತಿಳಿಸಿದರು.

ಶಾಸಕರು, ಸಂಸದರು, ಸ್ವಾಮೀಜಿಗಳು ರೈತ ಸಂಘಟನೆ ಮುಖಂಡರು ಸಿಎಂ, ಡಿಸಿಎಂ ಭೇಟಿ ಮಾಡುವುದು, ಕೇಂದ್ರ ಜಲಶಕ್ತಿ ಸಚಿವರು ಹಾಗೂ ರಾಜ್ಯವನ್ನು ಪ್ರತಿನಿಧಿಸುವ ಸಚಿವರನ್ನು ಭೇಟಿ ಮಾಡಿ ಬೇಡ್ತಿ ವರದಾ ನದಿ ಜೋಡಣೆಯ ಕಾರ್ಯಗತ ಗೊಳಿಸಲು ಒತ್ತಡ ಹೇರಲಿದ್ದೇವೆ.
ಜಿಲ್ಲೆ ಪ್ರಮುಖ ತಾಲೂಕುಗಳಿಗೆ ನೀರಿನ ಅಗತ್ಯವಿದೆ
ಇದೇ ವರ್ಷ ಮಾರ್ಚ್ ಮತ್ತು ಏಪ್ರಿಲ್ ನಲ್ಲಿ ಪ್ರತಿ ಗ್ರಾಮದಲ್ಲೂ ಬೇಡ್ತಿ-ವರದಾ ನದಿ ನೀರು ಜೋಡಣೆ ಕುರಿತು ಜನ ಜಾಗೃತಿ ಸಭೆ ಹಮ್ಮಿಕೊಳ್ಳಲಿದ್ದೇವೆ. ತುಂಗಭದ್ರಾ ವರದಾ ನದಿ ಪಾತ್ರದಲ್ಲಿ ಇರುವುದರಿಂದ ಕುಡಿಯುವ ನೀರಿನ ದೃಷ್ಟಿಯಿಂದ ಅವಶ್ಯಕತೆಯಿದೆ. ಹಾವೇರಿ, ಹಾನಗಲ್ ಬ್ಯಾಡಗಿ, ಶಿಗ್ಗಾವಿ, ಸವಣೂರು ಬಂಕಾಪುರ ಎಲ್ಲ ಪಟ್ಟಣಗಳಿಗೂ ಕುಡಿಯುವ ನೀರು ಅವಶ್ಯಕತೆ ಇದೆ. ಇದನ್ನು ಗಮನಿಸಲು ತಜ್ಞರ ಸಮಿತಿ ಮತ್ತು ಲೀಗಲ್ ಟೀಂ ರಚಿಸುವುದು. ಹುಕ್ಕೇರಿ ಸದಾಶಿವ ಸ್ವಾಮೀಜಿ ಪರಮಪೂಜ್ಯರ ನೇತೃತ್ವದಲ್ಲಿ ನಿಯೋಗ ತೆಗೆದುಕೊಂಡು ಹೋಗಲು ತೀರ್ಮಾನ ಮಾಡಲಾಗಿದೆ ಎಂದು ಬೊಮ್ಮಾಯಿ ವಿವರಿಸಿದರು.
ಬಯಲು ಸಿಮೆಯ ಜಿಲ್ಲೆಗಳ ಸಹಕಾರ ಪಡೆಯುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆ ಭಾಗದ ಶಾಸಕರು ಮತ್ತು ಸಂಸತ್ ಸದಸ್ಯರ ಬೆಂಬಲ ಪಡೆದು ದೊಡ್ಡ ಜನಾಂದೋಲನ ಮಾಡುತ್ತೇವೆ. ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ ನಮ್ಮ ಬದುಕುವ ಹಕ್ಕಿಗಾಗಿ ಹೋರಾಟ ಯಾರ ವಿರುದ್ಧವೂ ಅಲ್ಲ. ಅಗತ್ಯ ಬಿದ್ದರೆ ಹಾವೇರಿಯಲ್ಲಿ ದೊಡ್ಡ ಸಮಾವೇಶ ಮಾಡುತ್ತೇವೆ ಎಂದರು.

ಕೇಂದ್ರ ಸರ್ಕಾರ ಡಿಪಿಆರ್ಗೆ ಒಪ್ಪಿಗೆ ನೀಡಿದೆ
ಈಗಾಗಲೇ ಕೇಂದ್ರ ಸರ್ಕಾರ ಒಪ್ಪಿದೆ. ಈಗ ಡಿಪಿಆರ್ ಮಾಡಲು ಎಂಒಯು ಸೈನ್ ಆಗಿದೆ. ಅವರು ವಿರೋಧ ಮಾಡುತ್ತಾರೆಂದು ನಾವು ವಿರೋಧ ಮಾಡುತ್ತಿಲ್ಲ ಇದು ನಮ್ಮ ಬದುಕಿನ ಪ್ರಶ್ನೆ ಭವಿಷ್ಯದ ಪ್ರಶ್ನೆ. ಅದಕ್ಕಾಗಿ ನಮ್ಮ ಹೋರಾಟ ನಮ್ಮ ಬದುಕಿಗಾಗಿ ಹೋರಾಟ. ಸುಮಾರು ಇಪ್ಪತೈದು ವರ್ಷದಿಂದ ಪ್ರಯತ್ನ ನಡೆಯುತ್ತಿದೆ. ಡಿಪಿಆರ್ ಆಗುವುದರೊಳಗೆ ಹೆಚ್ಚು ಜನರ ಜಾಗೃತಿ ಮಾಡಲು ಸಾಧ್ಯ ವಿದೆಯೋ ಅಷ್ಟು ಜಾಗೃತಿ ಮೂಡಿಸಲಿದ್ದೇವೆ.
ಇದು ಅಂತಾರಾಜ್ಯ ಸಮಸ್ಯೆಯಲ್ಲ
ಬೇಡ್ತಿ- ವರದಾ- ಧರ್ಮಾ ನದಿ ಜೋಡಣೆ ನಮ್ಮ ರಾಜ್ಯದಲ್ಲಿಯೇ ನದಿ ಜೋಡಣೆ ಮಾಡುವ ಯೋಜನೆ ಹೊರತು, ಇದು ಅಂತಾರಾಜ್ಯ ನದಿ ಸಮಸ್ಯೆ ಅಲ್ಲ. ಸ್ವಾತಂತ್ರ್ಯ ಪೂರ್ವದಿಂದಲೂ ನೆರೆಯ ರಾಜ್ಯಗಳ ಜೊತೆಗೆ ನದಿ ವಿವಾದ ಇದೆ. ನದಿ ನಮ್ಮೂರಲ್ಲಿ ಹುಟ್ಟಿದೆ ನಾವು ಕೊಡುವುದಿಲ್ಲ ಎಂದು ಹೇಳಲು ಆಗುವುದಿಲ್ಲ. ಹರಿಯುವ ನದಿ, ನಿಸರ್ಗದ ಸ್ವತ್ತು. ಅದು ತನ್ನದೇ ಆದ ರೀತಿಯಲ್ಲಿ ಸಮತೋಲನ ಕಾಯ್ದುಕೊಳ್ಳುತ್ತದೆ.
ಸದರಿ ಯೋಜನೆಯಡಿ ಎರಡು ಕಡೆಯಿಂದ ನೀರು ತೆಗೆದಾಗ ಡ್ಯಾಮ್ ಬದಲು ಬ್ಯಾರೆಜ್ ಕಟ್ಟುತ್ತೇವೆ. ನದಿ ಪಾತ್ರದ ಹೊರಗಡೆಯಿಂದ ನದಿ ನೀರನ್ನು ಲಿಪ್ಟ್ ಮಾಡುವ ವ್ಯವಸ್ಥೆ ಮಾಡುತ್ತೇವೆ. ಪರಿಸರಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಡಿಪಿಆರ್ ಅಂಶಗಳ ಕುರಿತು ತಜ್ಞರು ತೀರ್ಮಾನ ಮಾಡುತ್ತಾರೆ. ನಾವು ನದಿ ಪಾತ್ರದ ಜನರನ್ನು ಕಡೆಗಣಿಸುತ್ತಿಲ್ಲ. ಹಾಗೆ ನೋಡಿದರೆ ಕೃಷ್ಣಾ ,ತುಂಗಾ ಮೇಲ್ದಂಡೆ ಯೋಜನೆ ಆಗುತ್ತಿರಲಿಲ್ಲ. ಬ್ಯಾಡಗಿ, ಹಾನಗಲ್, ಶಿಗ್ಗಾವಿ ಸವಣೂರಲ್ಲಿ ಏತ ನಿರಾವರಿ ವರದಾ ನದಿಯಿಂದ ಮಾಡಿದ್ದೇವೆ. ನಿಮ್ಮೂರಿನ ಮುಂದಿನ ಭವಿಷ್ಯ ತೀರ್ಮಾನ ಮಾಡುವುದು ಬೇಡ್ತಿ ವರದಾ ನದಿ ಜೋಡಣೆಯಿಂದ ಎಂದು ಹೇಳಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications