ಮಸೀದಿ ಮುಂದೆ ಹಂದಿಮಾಂಸದ ಸಮಾರಾಧನೆ ನಡೆದ್ರೆ ಸಿಎಂ ಸುಮ್ನಿರ್ತಾರಾ?
ಆಳಂದ, ಕಲಬುರಗಿ ನ 2: ಆಹಾರ ಪದ್ದತಿ ಅವರವರ ವೈಯಕ್ತಿಕ ವಿಚಾರವಾದರೂ, ಜವಾಬ್ದಾರಿಯುತ ಸ್ಥಾನದಲ್ಲಿರುವವರು ತೂಕಬದ್ದವಾಗಿ ಹೇಳಿಕೆ ನೀಡಬೇಕೆಂದು ಉಡುಪಿ ಪೇಜಾವರ ಶ್ರೀಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದ್ದಾರೆ.
ಗೋಮಾಂಸ ಇದುವರೆಗೂ ತಿಂದಿಲ್ಲ, ತಿನ್ನಬೇಕು ಅನಿಸಿದರೆ ತಿನ್ನುತ್ತೇನೆ ಎನ್ನುವ ಮುಖ್ಯಮಂತ್ರಿಗಳ ಹೇಳಿಕೆ ನನಗೆ ಬೇಸರ ತಂದಿದೆ. ಮಸೀದಿ ಮುಂದೆ ಹಂದಿಮಾಂಸದ ಸಮಾರಾಧನೆ ನಡೆದರೆ ಮುಖ್ಯಮಂತ್ರಿಗಳು ಸುಮ್ಮನೆ ಇರ್ತಾ ಇದ್ರಾ ಎಂದು ಪೇಜಾವರ ಶ್ರೀಗಳು ಪ್ರಶ್ನಿಸಿದ್ದಾರೆ. (ಗೋಮಾಂಸ ತಿನ್ನಬೇಕೆನಿಸಿದರೆ ತಿನ್ನುತ್ತೇನೆ)
ಸಿಎಂ ಸ್ಥಾನದಲ್ಲಿ ಇರುವವರು ಇತರರ ಓಲೈಕೆಗಾಗಿ ಬಹುಸಂಖ್ಯಾತರ ಭಾವನೆಗೆ ಧಕ್ಕೆ ತರುವಂತಹ ಹೇಳಿಕೆಯನ್ನು ನೀಡಬಾರದು. ಗೋಹತ್ಯೆ ಮತ್ತು ಗೋಮಾಂಸ ಸೇವನೆಯನ್ನು ನಿಷೇಧಿಸಬೇಕು ಎನ್ನುವುದು ಈಗಲೂ ನನ್ನ ನಿಲುವು ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.
ಆಳಂದ ತಾಲ್ಲೂಕು ಧುತ್ತರಗಾಂವ ಹಳ್ಳಿಯಲ್ಲಿ ಶ್ರಮಜೀವಿಗಳ ವೇದಿಕೆ ಹಮ್ಮಿಕೊಂಡಿದ್ದ 'ವ್ಯಸನಮುಕ್ತ ಗ್ರಾಮ ನಿರ್ಮಾಣ ಪಾದಯಾತ್ರೆ'ಗೆ ಶ್ರೀಗಳು ಚಾಲನೆ ನೀಡಿ ಮಾತನಾಡುತ್ತಾ, ನಾವು ಉಪದೇಶವನ್ನಷ್ಟೇ ಮಾಡುತ್ತೇವೆ ಸ್ವೀಕರಿಸುವುದು ಬಿಡುವುದು ಅವರವರಿಗೆ ಬಿಟ್ಟ ವಿಚಾರ ಎಂದು ಶ್ರೀಗಳು ಹೇಳಿದ್ದಾರೆ.
ಭಾನುವಾರ (ನ 1) ಕಲಬುರಗಿ ನಗರದ ದಲಿತ ಕೇರಿಗೆ ಭೇಟಿ ನೀಡಿದ ಪೇಜಾವರ ಶ್ರೀಗಳು, ಹಲವಾರು ದಲಿತ ದಂಪತಿಗಳಿಂದ ಪಾದಪೂಜೆಯನ್ನು ಸ್ವೀಕರಿಸಿದರು.
ಹಂದಿಮಾಂಸವನ್ನೂ ತಿನ್ನುತ್ತೇನೆ, ಸಿದ್ದರಾಮಯ್ಯ: ಮುಂದೆ ಓದಿ..

ಭಗವಾನ್ ಜೊತೆ ಚರ್ಚೆಗೆ ನಾನು ರೆಡಿ
ಮುಖ್ಯಮಂತ್ರಿಗಳ ಹೇಳಿಕೆಯಿಂದ ಹಿಂದೂಗಳಲ್ಲಿ ಮತ್ತಷ್ಟು ಜಾಗೃತಿಯನ್ನುಂಟು ಮಾಡುವುದಂತೂ ಸಹಜ. ಭಗವಾನ್ ವಿಚಾರದಲ್ಲಿ ಈಗಾಗಲೇ ಅವರನ್ನು ಚರ್ಚೆಗೆ ಆಹ್ವಾನಿಸಿದ್ದೇನೆ, ಅವರು ಬಂದರೆ ಬಹಿರಂಗ ಚರ್ಚೆಗೆ ನಾನು ಸಿದ್ದ ಎಂದು ಪೇಜಾವರ ಶ್ರೀಗಳು ಪುನರುಚ್ಚಿಸಿದ್ದಾರೆ.

ಹಂದಿ ಮಾಂಸವನ್ನೂ ತಿನ್ನುತ್ತೇನೆ
ಗೋಮಾಂಸ ವಿಚಾರದಲ್ಲಿ ತನ್ನ ಹೇಳಿಕೆಗೆ ವ್ಯಂಗ್ಯವಾಡಿದ್ದ ಜಗದೀಶ್ ಶೆಟ್ಟರ್ ಅವರಿಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಂದಿ ಮಾಂಸವನ್ನೂ ತಿನ್ನೋಣ ಬಿಡಿ. ಈ ಬಿಜೆಪಿಯವರು ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸವನ್ನು ಮಾಡುತ್ತಿದ್ದಾರೆಂದು ಹೇಳಿದ್ದಾರೆ.

ಜಗದೀಶ್ ಶೆಟ್ಟರ್ ಹೇಳಿದ್ದು
ಇಷ್ಟಪಟ್ಟರೆ ಗೋಮಾಂಸವನ್ನೂ ತಿನ್ನುತ್ತೇನೆ, ಇದನ್ನು ಕೇಳೋಕೆ ಸಂಘ ಪರಿವಾರದವರು ಯಾರು ಎಂದು ಸಿಎಂ ಕಿಡಿಕಾರಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಗೋಮಾಂಸ ತಿನ್ನುವವರಿಗೆ ಹಂದಿ ಮಾಂಸ ತಿನ್ನುವ ಆಸೆ ಇರೋಲ್ವಾ? ಅದನ್ನೂ ಸೇವನೆ ಮಾಡುತ್ತಾರೆ ಎಂದಿದ್ದರು.

ನಾನೂ ಒಬ್ಬ ಹಿಂದೂ
ನಾನೂ ಒಬ್ಬ ಹಿಂದೂ, ಜನರು ಅವರವರ ಇಷ್ಟದಂತೆ ಆಹಾರ ಸೇವನೆ ಮಾಡುತ್ತಾರೆ. ಯಾವ ಆಹಾರ ಸೇವಿಸಬೇಕೆಂದು ಬಿಜೆಪಿಯಿಂದ ಅನುಮತಿ ಪಡೆದು ಆ ಮೇಲೆ ಸ್ವೀಕರಿಸಬೇಕಾ ಎಂದು ಸಚಿವ ಶಿವರಾಜ್ ತಂಗಡಗಿ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.

ಅದಕ್ಕೇ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಜಾಗವಿಲ್ಲ
ಸಸ್ಯಾಹಾರಿಗಳು ಶಾಖಾಹಾರಿಗಳಾಗುತ್ತಿದ್ದಾರೆ. ಅದಕ್ಕೇ ನೋಡಿ, ಯಾವುದೇ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಜನ ತುಂಬಿಕೊಂಡಿರುತ್ತಾರೆಂದು ಚಿತ್ರದುರ್ಗದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ ಹೇಳಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications