ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಂಗಾಮಿ ಸ್ಪೀಕರಾಗಿ ಬೋಪಯ್ಯ : ಸುಪ್ರೀಂನಲ್ಲಿ ವಿಚಾರಣೆ

By Prasad
|
Google Oneindia Kannada News

ಬೆಂಗಳೂರು, ಮೇ 19 : ವಿಶ್ವಾಸಮತವೆಂಬ ಅಗ್ನಿಪರೀಕ್ಷೆಯನ್ನು ಎದುರಿಸುವ ಮೊದಲೇ ಭಾರತೀಯ ಜನತಾ ಪಕ್ಷ ಮತ್ತೊಂದು ಮಧ್ಯಂತರ ಪರೀಕ್ಷೆಯಲ್ಲಿ ಪಾರಾಗಿ ಬರಬೇಕಾಗಿದೆ.

ಹಂಗಾಮಿ ಸಭಾಧ್ಯಕ್ಷರನ್ನಾಗಿ ಕೆಜಿ ಬೋಪಯ್ಯ ಅವರನ್ನು ರಾಜ್ಯಪಾಲರಾದ ವಜುಭಾಯಿ ವಾಲಾ ಅವರನ್ನು ನೇಮಕ ಮಾಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅದು ಶನಿವಾರ ಬೆಳಿಗ್ಗೆ 10.30ಕ್ಕೆ ವಿಚಾರಣೆಗೆ ಬರಲಿದೆ.

ಕರ್ನಾಟಕ ವಿಶ್ವಾಸಮತ LIVE: ವಿಧಾನಸೌಧದ ಮೇಲೆ ಎಲ್ಲರ ಕಣ್ಣು ಕರ್ನಾಟಕ ವಿಶ್ವಾಸಮತ LIVE: ವಿಧಾನಸೌಧದ ಮೇಲೆ ಎಲ್ಲರ ಕಣ್ಣು

ಮೇ 17ರಂದು ಬೆಳಿಗ್ಗೆ 9 ಗಂಟೆಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಯಡಿಯೂರಪ್ಪನವರು, ಎರಡೇ ದಿನಗಳಲ್ಲಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಬೇಕಾಗಿದೆ. ಅಧಿವೇಶನ 11 ಗಂಟೆಗೆ ಆರಂಭವಾಗಲಿರುವುದರಿಂದ ಸುಪ್ರೀಂ ಕೋರ್ಟ್ ಏನು ತೀರ್ಪು ನೀಡುತ್ತದೋ ಎಂಬ ಕುತೂಹಲ ಎಲ್ಲರಲ್ಲಿದೆ.

Before trust vote SC to decide on interim speaker KG Bopaiah

ಬೋಪಯ್ಯ ಅವರ ವಿರುದ್ಧ ಕಾಂಗ್ರೆಸ್ ತಿರುಗಿಬಿದ್ದಿರುವುದೇಕೆಂದರೆ, ಹಂಗಾಮಿ ಸ್ಪೀಕರ್ ಅವರು ಕಟ್ಟಾ ಯಡಿಯೂರಪ್ಪ ಬೆಂಬಲಿಗ. 2010ರಲ್ಲಿ ಯಡಿಯೂರಪ್ಪನವರ ವಿರುದ್ಧ ಅಕ್ರಮ ಗಣಿಗಾರಿಕೆ ಆರೋಪ ಕೇಳಿಬಂದಿದ್ದಾಗ, ಅವರ ವಿರುದ್ಧ ತಿರುಗಿಬಿದ್ದಿದ್ದ 11 ಬಿಜೆಪಿ ಶಾಸಕರು ಮತ್ತು 5 ಪಕ್ಷೇತ್ರ ಅಭ್ಯರ್ಥಿಗಳನ್ನು ಬೋಪಯ್ಯ ಅನರ್ಹಗೊಳಿಸಿದ್ದರು.

ವ್ಯಕ್ತಿಚಿತ್ರ: 'ಸ್ಪೀಕರ್' ಸ್ಥಾನಕ್ಕೇರಿದ ಕೊಂಬಾರಣ್ಣ ಗಣಪತಿ ಬೋಪಯ್ಯ ವ್ಯಕ್ತಿಚಿತ್ರ: 'ಸ್ಪೀಕರ್' ಸ್ಥಾನಕ್ಕೇರಿದ ಕೊಂಬಾರಣ್ಣ ಗಣಪತಿ ಬೋಪಯ್ಯ

ಬಂಡಾಯ ಶಾಸಕರನ್ನು ಅನರ್ಹಗೊಳಿಸಿದ್ದರಿಂದ ಯಡಿಯೂರಪ್ಪನವರು ವಿಶ್ವಾಸಮತದಲ್ಲಿ ಗೆದ್ದಿದ್ದರು. ಬಂಡಾಯವೆದ್ದಿದ್ದ ಶಾಸಕರ ಅನರ್ಹತೆ ಕಾನೂನಿಗೆ ವಿರುದ್ಧವಾಗಿದೆ ಮತ್ತು ಸಭಾಧ್ಯಕ್ಷರು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಅವರಿಗೆ ಎಚ್ಚರಿಕೆ ನೀಡಿ, ಶಾಸಕರ ಅನರ್ಹತೆಯನ್ನು ಸರ್ವೋಚ್ಚ ನ್ಯಾಯಾಲಯ 2011ರಲ್ಲಿ ರದ್ದುಗೊಳಿಸಿತ್ತು.

ಬೋಪಯ್ಯ ನೇಮಕ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಕಾಂಗ್ರೆಸ್ಬೋಪಯ್ಯ ನೇಮಕ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಕಾಂಗ್ರೆಸ್

ಅಂಥದೇ ಸಂದರ್ಭ ಈಗ ಕೂಡ ಬರಬಹುದು ಎಂಬುದು ಕಾಂಗ್ರೆಸ್ ನ ಆತಂಕ. ಅಲ್ಲದೆ, 5 ಬಾರಿ ಶಾಸಕರಾಗಿರುವ ಬೋಪಯ್ಯ ಅವರು ಹಿರಿಯ ರಾಜಕಾರಣಿ ಕೂಡ ಅಲ್ಲ. ಎಂಟು ಬಾರಿ ಶಾಸಕರಾಗಿರುವ ಆರ್ ವಿ ದೇಶಪಾಂಡೆಯಂಥ ಹಿರಿಯ ರಾಜಕಾರಣಿಯಿದ್ದರೂ 62 ವರ್ಷದ ಕೆಜಿ ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರನ್ನಾಗಿ ನೇಮಕ ಮಾಡಿರುವುದು ಕಾಂಗ್ರೆಸ್ ಕಣ್ಣು ಕೆಂಪಾಗುವಂತೆ ಮಾಡಿದೆ.

ಮೇ 16ರ ಮಧ್ಯರಾತ್ರಿ, ರಾಜ್ಯಪಾಲರು ಯಡಿಯೂರಪ್ಪನವರನ್ನು ಆಹ್ವಾನಿಸಿದ್ದನ್ನು ಪ್ರಶ್ನಿಸಿ ಹೂಡಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಸಿಕ್ರಿ, ನ್ಯಾಯಮೂರ್ತಿ ಬೊಬ್ಡೆ, ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರೇ ಕೆಜಿ ಬೋಪಯ್ಯ ಅವರ ವಿರುದ್ಧ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನೂ ಮಾಡಲಿದ್ದಾರೆ.

English summary
Before trust vote Supreme Court of India will hear the application filed by Congress questioning the appointment of KG Bopaiah as pro tem speaker.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X