ಮೋದಿ ಮಧ್ಯಸ್ಥಿಕೆ; ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದ ಅಂತ್ಯವಾಗುತ್ತಾ?
ನವದೆಹಲಿ, ನವೆಂಬರ್ 1: ಕರ್ನಾಟಕ-ಮಹಾರಾಷ್ಟ್ರ ಗಡಿ ಪ್ರದೇಶದ ವಿವಾದ ಹಲವು ವರ್ಷಗಳಿಂದ ನಡೆಯುತ್ತಿದೆ. ಈ ವಿಚಾರವಾಗಿ ಉಭಯ ರಾಜ್ಯಗಳ ನಡುವೆ ಘರ್ಷಣೆ ಆಗಾಗ ಕಂಡು ಬರುತ್ತಿದೆ. ಇದೀಗ ಮೊದಲ ಬಾರಿಗೆ ಈ ವಿವಾದವನ್ನು ಬಗೆಹರಿಸಲು ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದಾರೆ.
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಶೀಘ್ರದಲ್ಲೇ ಬಗೆಹರಿಯುವ ಸಾಧ್ಯತೆ ಇದೆ. ಈ ವಿಚಾರದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಲಿದ್ದಾರೆ. ಉಭಯ ರಾಜ್ಯಗಳ ಗಡಿ ಭಾಗದ ಸಮಸ್ಯೆಗಳ ಕುರಿತು ಶುಕ್ರವಾರ (ನವೆಂಬರ್ 4) ಕೊಲ್ಲಾಪುರದಲ್ಲಿ ಚಿಂತನ ಮಂಥನ ಸಭೆ ನಡೆಯಲಿದೆ. ಪ್ರಧಾನಿ ಮೋದಿಯವರ ಸಲಹೆಯಂತೆ ದಶಕಗಳಷ್ಟು ಹಳೆಯದಾದ ಈ ಸಮಸ್ಯೆ ಬಗೆಹರಿಯಲಿದೆ ಎಂದು ವರದಿಯಾಗಿದೆ.
ಮಹಾರಾಷ್ಟ್ರ ಮತ್ತು ಕರ್ನಾಟಕದ ರಾಜ್ಯಪಾಲರು, ಎರಡೂ ರಾಜ್ಯಗಳ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಇಷ್ಟು ವ್ಯಾಪಕ ಮತ್ತು ಜಂಟಿ ಸಭೆ ಹಿಂದೆಂದೂ ನಡೆದಿರಲಿಲ್ಲ. ಈ ಸಭೆಯು ದಶಕಗಳಿಂದ ನಡೆಯುತ್ತಿರುವ ಗಡಿ ವಿವಾದಕ್ಕೆ ಪರಿಹಾರವನ್ನು ತರುತ್ತದೆಯೇ? ಈ ಪ್ರಶ್ನೆ ಎಲ್ಲರ ಮನಸ್ಸಿನಲ್ಲಿದೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಹಲವು ವರ್ಷಗಳಿಂದ ನಡೆಯುತ್ತಿದೆ. ಈ ವಿಚಾರವಾಗಿ ಉಭಯ ರಾಜ್ಯಗಳ ನಡುವೆ ಘರ್ಷಣೆ ಆಗಾಗ ಕಂಡು ಬರುತ್ತಿದೆ. ಇದೀಗ ಮೊದಲ ಬಾರಿಗೆ ಈ ವಿವಾದವನ್ನು ಬಗೆಹರಿಸಲು ಪ್ರಧಾನಿ ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದಾರೆ. ನವೆಂಬರ್ 4 ರಂದು ಪ್ರಧಾನಿ ಮೋದಿ ಅವರ ಸೂಚನೆಯ ಮೇರೆಗೆ ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾಲಯದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವೆ ಚಿಂತನ-ಮಂಥನ ಸಭೆ ನಡೆಯಲಿದೆ.
ಈ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ; ಮಹಾರಾಷ್ಟ್ರದ ಶಿವಾಜಿ ವಿಶ್ವವಿದ್ಯಾನಿಲಯದಲ್ಲಿ ನಡೆಯಲಿರುವ ಸಭೆಯಲ್ಲಿ ವಿವಾದಿತ ಪ್ರದೇಶಗಳ ಹಲವು ಸಮಸ್ಯೆಗಳನ್ನು ಬಗೆಹರಿಸಲು ಎರಡೂ ರಾಜ್ಯಗಳಿಂದ ಪ್ರಯತ್ನಗಳು ನಡೆಯಲಿವೆ. ಆಲಮಟ್ಟಿ ಅಣೆಕಟ್ಟು ಸಮಸ್ಯೆ ಸೇರಿದಂತೆ, ಪ್ರವಾಹದಿಂದಾಗಿ ಕೊಲ್ಲಾಪುರ ಮತ್ತು ಸಾಂಗ್ಲಿ ಮೇಲೆ ಪರಿಣಾಮ ಬೀರಿದೆ. ಇದಕ್ಕಾಗಿ ಕರ್ನಾಟಕ ಸರ್ಕಾರ ಅಣೆಕಟ್ಟಿನ ಎತ್ತರವನ್ನು ಹೆಚ್ಚಿಸುವ ಪ್ರಸ್ತಾವನೆಯನ್ನು ಮುಂದಿಟ್ಟಿದೆ. ಆದರೆ ಮಹಾರಾಷ್ಟ್ರ ಸರ್ಕಾರ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಆಲಮಟ್ಟಿ ಅಣೆಕಟ್ಟಿನ ಎತ್ತರ, ಆನೆಗಳ ಉಪಟಳ, ಗರ್ಭಧಾರಣೆ ಪರೀಕ್ಷೆ, ಶಾಲಾ ಪ್ರವೇಶ ಮುಂತಾದ ವಿಚಾರಗಳ ಕುರಿತು ಈ ಚಿಂತನ ಮಂಥನ ಸಭೆಯಲ್ಲಿ ಚರ್ಚೆ ನಡೆಯಲಿದೆ. ಲಾತೂರ್, ಉಸ್ಮಾನಾಬಾದ್, ಸಾಂಗ್ಲಿ, ಕೊಲ್ಲಾಪುರ, ಸೊಲ್ಲಾಪುರ ಜಿಲ್ಲಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ಕರ್ನಾಟಕದ ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳೂ ಪಾಲ್ಗೊಳ್ಳಲಿದ್ದಾರೆ.
ಮಹಾರಾಷ್ಟ್ರವು ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿ ಸೇರಿದಂತೆ ಕರ್ನಾಟಕದ ಹಲವಾರು ಭಾಗಗಳನ್ನು ಪ್ರತಿಪಾದಿಸುತ್ತದೆ, ಇವುಗಳಲ್ಲಿ ಹೆಚ್ಚಿನ ಜನಸಂಖ್ಯೆಯು ಮರಾಠಿ ಮಾತನಾಡುವವರು ಎಂದು ವಾದಿಸುತ್ತಾರೆ. ಈ ಪ್ರಕರಣ ಹಲವು ವರ್ಷಗಳಿಂದ ದೇಶದ ಉನ್ನತ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದೆ.












Click it and Unblock the Notifications