Get Updates
Get notified of breaking news, exclusive insights, and must-see stories!

ಸ್ವಾಮೀಜಿಯಾಗಲಿ, ಯಾರಾದರೂ ಆಗಲಿ ಕಾನೂನು ಒಂದೇ: ಲಾಠಿಚಾರ್ಜ್‌ ಸಮರ್ಥಿಸಿಕೊಂಡ ಸಿಎಂ

ಬೆಳಗಾವಿ ಸುವರ್ಣಸೌಧದ ಮುಂದೆ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲಿನ ಲಾಠಿಚಾರ್ಜ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಮಾಹಿತಿ ಹಂಚಿಕೊಂಡಿದ್ದಾರೆ. ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಖಡಕ್‌ ಆಗಿ ಹೇಳಿದ್ದಾರೆ.

ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ಯಾವುದೇ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ, ಎಲ್ಲರಿಗೂ ಕಾನೂನು ಒಂದೇ. ನನಗೂ, ಸ್ವಾಮೀಜಿಗೂ ಎಲ್ಲರಿಗೂ ಒಂದೇ. ಸಂವಿಧಾನದ 14ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಹಾಗೂ ಕಾನೂನು ಸಮಾನ ರಕ್ಷಣೆಯನ್ನು ಖಾತ್ರಿಪಡಿಸುತ್ತದೆ. ಸ್ವಾಮೀಜಿಗಳಿಗೂ ಅವರ ಅಭಿಪ್ರಾಯ ತಿಳಿಸಲು ಸ್ವಾತಂತ್ರ್ಯವಿದೆ. ಅಂತಿಮವಾಗಿ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತೇವೆ ಎಂದಿದ್ದಾರೆ.

Belagavi Panchamasali Protest CM Siddaramaiah Justifies Police Action

ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿ ಸಮುದಾಯದವರ ಮೇಲೆ ಪೊಲೀಸರು ಕಲ್ಲು ಹೊಡೆದಿದ್ದಾರೆ ಎಂದು ಬಿಜೆಪಿ ಆರೋಪ ಮಾಡುತ್ತಿದೆ. ವಾಸ್ತವವಾಗಿ ಕಲ್ಲು ಹೊಡೆದಿರುವುದು ಬಿಜೆಪಿಗರು, ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗುವುದರ ಫೋಟೋಗಳನ್ನು ತೋರಿಸುತ್ತೇವೆ. ಸ್ವಾಮೀಜಿಗಳು ರಸ್ತೆಯಲ್ಲಿ ಏಕೆ ಕುಳಿತುಕೊಂಡಿದ್ದಾರೆ? ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು? ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ? ನಾನು ಹೇಳಿರುವುದಕ್ಕೆ ಸಾಕ್ಷಿಯಿದೆ ಎಂದು ಗರಂ ಆಗಿ ಉತ್ತರಿಸಿದ್ದಾರೆ.

ಪಂಚಮಸಾಲಿ ಸಮಾಜದವರು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮುಂದೆ ಹೋಗಬೇಕು. ಬಿಜೆಪಿ ಕಾಲದಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗಡೆಯವರ ವರದಿಯಲ್ಲಿ ಈಗಿರುವಂತೆಯೇ ಪ್ರವರ್ಗ 2ಎ, 2ಬಿ ಇರಬೇಕು. ಇದಕ್ಕೆ ಹೊಸ ಸೇರ್ಪಡೆಯಾಗಬಾರದು. 2ಬಿ ಯಲ್ಲಿರುವ ಶೇ 4ರಷ್ಟು ಮೀಸಲಾತಿಯನ್ನು ರದ್ದು ಮಾಡಬಾರದು ಎಂದು ಹೇಳಿದ್ದಾರೆ.

Belagavi Panchamasali Protest CM Siddaramaiah Justifies Police Action

ಬಿಜೆಪಿ ಅವಧಿಯಲ್ಲಿ ಅಂದು ಪ್ರತಿಭಟನೆ ಏಕೆ ಆಗಲಿಲ್ಲ? ಈಗ ಅದೇ ಬಿಜೆಪಿಯವರು ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ. ಮುಸಲ್ಮಾನರಿಗೆ ಇದ್ದ ಶೇ 4ರ ಮೀಸಲಾತಿಯನ್ನು ರದ್ದು ಮಾಡಿ, 3ಎ ಒಕ್ಕಲಿಗರಿಗೆ ಶೇ 2ರಷ್ಟು ಮತ್ತು 3ಬಿ ಪ್ರವರ್ಗಗಳಿಗೆ ಲಿಂಗಾಯತರಿಗೆ ಶೇ 2ರಷ್ಟು ಮೀಸಲಾತಿ ನೀಡಿದರು. ಇದನ್ನು ಪ್ರಶ್ನಿಸಿ ಮುಸ್ಲಿಂ ಸಮುದಾಯದ ರಸೂಲ್ ಎಂಬ ವ್ಯಕ್ತಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ವೇಳೆ ಹಿಂದಿನ ಬಿಜೆಪಿ ಸರ್ಕಾರವೇ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿತ್ತು ಎಂದು ವಿವರಣೆ ನೀಡಿದ್ದಾರೆ.

Belagavi Panchamasali Protest CM Siddaramaiah Justifies Police Action

ಪಂಚಮಸಾಲಿ ಹೋರಾಟವನ್ನು ಟ್ರ್ಯಾಕ್ಟರ್ ತರುವ ಮೂಲಕ ಮಾಡುತ್ತೇವೆ ಎಂದು ಮೊದಲೇ ತಿಳಿಸಿದ್ದರು. ನ್ಯಾಯಾಲಯ ಹೋರಾಟವನ್ನು ಶಾಂತಿಯುತವಾಗಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆಸಲು ಸೂಚನೆ ನೀಡಲಾಗಿತ್ತು. ಆದರೆ ಹೋರಾಟಗಾರರು ಕಾನೂನನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದರು. ಸ್ಥಳಕ್ಕೆ ಮಹದೇವಪ್ಪ ಸೇರಿದಂತೆ ಮೂರು ಸಚಿವರನ್ನು ಕಳುಹಿಸಿದ್ದೆವು ಎಂದು ಸ್ಪಷ್ಟನೆ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+