Belagavi Session: ಅಧಿವೇಶನದಲ್ಲಿ 10 ಪ್ರಮುಖ ಬಿಲ್ ಗಳ ಮಂಡನೆ
ಹುಬ್ಬಳ್ಳಿ, ಡಿಸೆಂಬರ್ 01: ಕುಂದಾನಗರಿ ಬೆಳಗಾವಿಯಲ್ಲಿ ಡಿಸೆಂಬರ್ 4 ರಿಂದ 14 ವರೆಗೆ ನಡೆಯಲಿರುವ ಚಳಿಗಾಲ ಅಧಿವೇಶನದಲ್ಲಿ 10 ಮಹತ್ವದ ಬಿಲ್ ಮಂಡನೆ ಮಾಡಲಾಗುವುದು ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್ಕೆ ಪಾಟೀಲ್ ಹೇಳಿದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಡಿಸೆಂಬರ್ 4 ರಂದು ನಮ್ಮ ಬಿಸಿನೆಸ್ ಅಡ್ವಸರಿ ಸಮಿತಿ ಸಭೆ ನಡೆಯಲಿದ್ದು. 10 ಪ್ರಮುಖ ಬಿಲ್ ಗಳ ಮಂಡನೆ ಮಾಡಲಾಗುವ ಕುರಿತು ಸಲಹೆ ಸೂಚನೆಗಳನ್ನು ಪಡೆಯಲಾಗುವುದು. ಜೊತೆಗೆ ಈ ಸಭೆಯಲ್ಲಿ ಯಾವ ಬಿಲ್ ಮಂಡನೆ ಆಗಬೇಕು ಎಂಬ ಸುದೀರ್ಘವಾದ ಚರ್ಚೆ ನಡೆಸುತ್ತೇವೆ.

ಅಧಿವೇಶನದಲ್ಲಿ ಬರಗಾಲ ಕುರಿತು ಹೆಚ್ಚು ಚರ್ಚೆ ಆಗಲಿದ್ದು ಪ್ರಮುಖ ಸಮಸ್ಯೆ, ಅಭಿವೃದ್ಧಿ ವಿಚಾರಗಳು ಸಹ ಚರ್ಚೆ ನಡೆಸಲಾಗುವುದು. ಉತ್ತರ ಕರ್ನಾಟಕ ಭಾಗದಲ್ಲಿ ಅನೇಕ ಸಮಸ್ಯೆಗಳು ಬಗ್ಗೆ ಚರ್ಚೆಗೆ ಹೆಚ್ಚು ಮಹತ್ವ ಕೊಡಲಾಗಿದೆ ಎಂದರು.
ಪಂಚಾರಾಜ್ಯ ಚುನಾವಣೆ ಫಲಿತಾಂಶ: ಪ್ರತಿಕ್ರಿಯೆ
ಐದು ರಾಜ್ಯ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಕುರಿತು ಪ್ರತಿಕ್ರಿಯೆ ದೇಶದ ಐದು ರಾಜ್ಯಗಳಲ್ಲಿ ನಡೆದ ಮತದಾನ ನಂತರಈಗಾಗಲೇ ಮತದಾನೋತ್ತರ ಫಲಿತಾಂಶ ಬಂದಿದೆ. ಬಹುತೇಕ ಸಮೀಕ್ಷೆಗಳು ಐದು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಅಂತಾ ಫಲಿತಾಂಶ ನೀಡಿವೆಇದರಲ್ಲಿತೆಲಂಗಾಣ, ಛತ್ತೀಸ್ಗಢ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಭರವಸೆ ಇದ್ದು ರಾಜಸ್ಥಾನದಲ್ಲಿ ಎಕ್ಸಿಟ್ ಪೋಲ್ ನಲ್ಲಿ ಕಾಂಗ್ರೆಸ್ ಹಿಂದೆ ಇದೆ.
ಈ ಎಲ್ಲ ಬೆಳವಣಿಗೆ ಫಲಿತಾಂಶ ನೋಡಿದರೆ ದೇಶದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆಕಾಂಗ್ರೆಸ್ ಪಕ್ಷದತ್ತ ಜನರ ಒಲವು ಹೆಚ್ಚಾಗಿದೆಜನರ ಆರ್ಶೀವಾದ ಕಾಂಗ್ರೆಸ್ ಮೇಲೆ ಇದೆ ಆದ್ದರಿಂದಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಅಂತ್ಯ ಆಗಲಿದೆ ಎಂದು ಭವಿಷ್ಯ ನುಡಿದ ಅವರು ಭಾರತೀಯ ಜನತಾ ಪಕ್ಷದವರು ಮನೆಗೆ ಹೋಗುವ ಕಾಲ ಬಂದಿದೆ ಎಂದು ಕುಟುಕಿದರು.

ಬಿಜೆಪಿ ವಿರುದ್ಧ ಕಿಡಿ ಕಾರಿದ ಪಾಟೀಲ್
ಇನ್ನು ತೆಲಂಗಾಣ ಕಾಂಗ್ರೆಸ್ ಅಭ್ಯರ್ಥಿಗಳು ಬೆಂಗಳೂರಿನ ರೆಸಾರ್ಟ್ ಗೆ ಕರೆ ತರುವ ವಿಚಾರ ಕುರಿತು ಸಹ ಮಾತನಾಡಿದ ಅವರು, ಈ ಎಲ್ಲ ದಂಧೆಗಳು ಭಾರತೀಯ ಜನತಾ ಪಕ್ಷದವರು ಮನೆಗೆ ಹೋಗುವ ಮುಂದೆ ಮಾಡಿದರೆ ನಡೆಯುವುದಿಲ್ಲ. ಭಾರತೀಯ ಜನತಾ ಪಕ್ಷದವರಿಗೆ ಕೆಟ್ಟ ವಿಚಾರ ಇದು. ಇದು ಕರ್ನಾಟಕ ದಲ್ಲಿ 17 ಶಾಸಕರನ್ನ ತೆಗೆದುಕೊಂಡ ಹೋಗಿ ಸರ್ಕಾರ ಮಾಡಿದ್ದರು ಎಂದ ಕಿಡಿ ಕಾರಿದರು.
ಅದು ಪ್ರಜಾಪ್ರಭುತ್ವ ಕೊಟ್ಟ ಕೊಡಲೇ ಪೆಟ್ಟು ಮರೆಯಕ್ಕೆ ಆಗಲ್ಲ ಪ್ರಜಾಪ್ರಭುತ್ವ ವ್ಯವಸ್ಥೆ ವಿರುದ್ಧ ನಡೆದುಕೊಂಡ ಕಾರಣ ಇಂದು ಈ ವ್ಯವಸ್ಥೆಗೆ ಅವರನ್ನು ತಂದು ನಿಲ್ಲಿಸಿತು ಎಂದರು.
ಇನ್ನು ಇದೇ ಸಮಯದಲ್ಲಿ ಪ್ರವಾಸೋದ್ಯಮ ಹೊಸ ನೀತಿ ಡಿಸೆಂಬರ್ ಅಂತ್ಯ, ಜನವರಿ ತಿಂಗಳ ಒಳಗೆ ಜಾರಿ ಮಾಡಲಾಗುವುದು ಎಂದ ಅವರುನಾನು ರಾಜ್ಯದ ಬಹುತೇಕ ಕಡೆಗಳಲ್ಲಿ ಪ್ರವಾಸ ಮಾಡಿದ್ದೇನೆಪ್ರವಾಸದ ಅನುಭವ ಜೊತೆಗೆ ಹೊಸ ಪ್ರವಾಸೋದ್ಯಮ ನೀತಿ ಜಾರಿ ಆಗಲಿದೆ ಎಂದು ತಿಳಿಸಿದರು. ಉಪ ಮುಖ್ಯಮಂತ್ರಿ ಶಿವಕುಮಾರ್ ಅಕ್ರಮ ಆಸ್ತಿ ಪ್ರಕರಣ ವಾಪಾಸ್ ಪಡೆಯುವ ವಿಚಾರ, ಇದು ನ್ಯಾಯಾಲಯದಲ್ಲಿದ್ದು, ಈ ಬಗ್ಗೆ ಏನು ಹೇಳಲ್ಲ ಎಂದು ತಿಳಿಸಿದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications