ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಮತ್ತು ಸಂಪುಟ ಸಭೆಯ ಇತರ ತೀರ್ಮಾನಗಳು
ಬೆಂಗಳೂರು, ಅಕ್ಟೋಬರ್ 11: ನವೆಂಬರ್ 13 ರಿಂದ ಹತ್ತು ದಿನಗಳ ಕಾಲ ಬೆಳಗಾವಿಯ ಸುವರ್ಣ ಸೌಧದಲ್ಲಿ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಗಳನ್ನು ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ. ಬಿ. ಜಯಚಂದ್ರ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ಬಿಪಿಎಲ್ ಕಾರ್ಡುದಾರರಿಗೆ ಉಚಿತ ಎಲ್ಇಡಿ ಬಲ್ಬ್
ಬಿಪಿಎಲ್ ಕಾರ್ಡ್ ಗ ಸಿಗುವ ಸೀಮೆ ಎಣ್ಣೆ ಬಿಟ್ಟು ಬಿಡುವ ಕುಟುಂಬಗಳಿಗೆ ಉಚಿತ ಎಲ್ಇಡಿ ಬಲ್ಬ್ ವಿತರಿಸುವ ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ.

ಹೊಸ ಆ್ಯಂಬುಲೆನ್ಸ್ ಖರೀದಿಗೆ ಸಮ್ಮತಿ
ಆರೋಗ್ಯ ಕವಚ ಯೋಜನೆಯ ಹಳೆಯ 95 ಆಧುನಿಕ ಜೀವ ರಕ್ಷಕ ವ್ಯವಸ್ಥೆ (ಅಡ್ವಾನ್ಸ್ ಲೈಫ್ ಸಪೋರ್ಟರ್ಸ್) ಮತ್ತು 276 ಮೂಲ ಜೀವ ರಕ್ಷಕ ವ್ಯವಸ್ಥೆ (ಬೇಸಿಕ್ ಲೈಫ್ ಸಪೋರ್ಟರ್ಸ್) ಆ್ಯಂಬುಲೆನ್ಸ್ ಗಳನ್ನು ಬದಲಾಯಿಸಿ 61.78 ಕೋಟಿ ರೂ ವೆಚ್ಚದಲ್ಲಿ ಸುಸಜ್ಜಿತ ಆಂಬುಲೆನ್ಸ್ ಗಳನ್ನು ಖರೀದಿಸಲು ಸಚಿವ ಸಂಪುಟ ಸಮ್ಮತಿಸಿದೆ.

ಸಂಘಗಳಿಗೆ ರಿಯಾಯಿತಿ ದರದಲ್ಲಿ ಜಾಗ
ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ಮಡಿವಾಳ ಮಾಚಿದೇವ ಸಂಘಕ್ಕೆ ಖಾಸಗೀ ವಸತಿ ಬಡಾವಣೆಯಲ್ಲಿ 4465 ಚದರಡಿ ವಿಸ್ತೀರ್ಣದ ಜಾಗವನ್ನು ಚದರ ಅಡಿಗೆ 10 ರೂ. ರಿಯಾಯಿತಿ ಗುತ್ತಿಗೆ ದರದಲ್ಲಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ದಾವಣಗೆರೆ ಜಿಲ್ಲಾ ಒಕ್ಕಲಿಗರ ಸಂಘಕ್ಕೂ ದಾವಣಗೆರೆಯ ಆವರೆಗೆರೆ ಗ್ರಾಮದ ಖಾಸಗೀ ಬಡಾವಣೆಯಲ್ಲಿನ 21,418 ಚದರಡಿ ವಿಸ್ತೀರ್ಣದ ನಾಗರೀಕ ಸೌಲಭ್ಯ ನಿವೇಶನವನ್ನು ಶೇಕಡಾ 10 ರ ರಿಯಾಯತಿ ದರದಲ್ಲಿ ನೀಡಲು ಸಚಿವ ಸಂಪುಟ ಅನುಮತಿ ನೀಡಿದೆ.

ಹಿರೆಕೆರೂರು ತಾಲೂಕಿಗೆ ಕುಡಿಯುವ ನೀರು
ಹಾವೇರಿ ಜಿಲ್ಲೆಯ ಹಿರೆಕೆರೂರು ತಾಲ್ಲೂಕಿನ ಹಿರೆಕೆರೂರು ಪಟ್ಟಣದ ದುರ್ಗಾದೇವಿ ಕೆರೆ ಹಾಗೂ ಬಹುಗ್ರಾಮ ಕೆರೆಗಳಿಗೆ ಕುಮದ್ವತಿ ನದಿಯಿಂದ ಅಂದಾಜು 24 ಕೋಟಿ ರೂ. ವೆಚ್ಚದಲ್ಲಿ ನೀರನ್ನು ತುಂಬಿಸುವ ಯೋಜನಾ ವರದಿಗೆ ಸಂಪುಟ ಆಡಳಿತಾತ್ಮಕ ಅನುಮತಿ ನೀಡಿದೆ.
ಹಿರೆಕೆರೂರು ತಾಲ್ಲೂಕಿನ 13 ಕೆರೆ ಹಾಗೂ ಬ್ಯಾಡಗಿ ತಾಲ್ಲೂಕಿನ 2 ಕೆರೆಗಳಿಗೆ ವರದಾ ನದಿಯಿಂದ ಏತ ನೀರಾವರಿ ಮೂಲಕ ನೀರು ತುಂಬಿಸುವ 38 ಕೋಟಿ ರೂ ಅಂದಾಜು ವೆಚ್ಚದ ಗುಡ್ಡದ ಮಲ್ಲಾಪುರ್ ನೀರಾವರಿ ಯೋಜನೆಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications