ಬೇಲೇಕೇರಿ : ಸ್ವಸ್ತಿಕ್, ಕಾರದಪುಡಿ ಮೇಲೆ ಚಾರ್ಜ್ ಶೀಟ್
ಬೆಂಗಳೂರು, ನ. 30: ಬೇಲೆಕೇರಿ ಅದಿರು ನಾಪತ್ತೆ ಹಾಗೂ ಅಕ್ರಮ ಅದಿರು ಸಾಗಣೆ ಪ್ರಕರಣಗಳ ಸಂಬಂಧ ಸುಪ್ರೀಂ ಕೋರ್ಟ್ ಆದೇಶದಂತೆ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದ ಶನಿವಾರ(ನ.30) ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಬೇಲೆಕೇರಿ ಬಂದರಿಗೆ ಅಕ್ರಮವಾಗಿ ಕಬ್ಬಿಣ ಅದಿರು ಸಾಗಣೆ ಮಾಡಿದ ಆರೋಪಗಳ ಹಿನ್ನೆಲೆಯಲ್ಲಿ ತನಿಖಾ ಸಂಸ್ಥೆ ನಾಲ್ಕು ಪ್ರಕರಣಗಳನ್ನು ದಾಖಲಿಸಿದೆ. ಇದರಲ್ಲಿ ಇದೀಗ ಎರಡು ಪ್ರಕರಣಗಳಲ್ಲಿ ವಿಶೇಷ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಐಎಲ್ ಸಿ ಕಂಪೆನಿ ಹಾಗೂ ಅದರ ಒಡೆಯ ಕೆ.ಸೋಮಶೇಖರ್, ಕಾರದಪುಡಿ ಮಹೇಶ್ ಮತ್ತಿತರರ ಮೇಲೆ ಆರೋಪಗಳನ್ನು ಹೊರಿಸಲಾಗಿದೆ.
ಜಾಮೀನು ತಿರಸ್ಕಾರ: ಇದೇ ವೇಳೆ ವಿಶೇಷ ನ್ಯಾಯಾಲಯದ ಮುಂದೆ ಅಧಿಕಾರಿಗಳಾದ ಮುತ್ತಯ್ಯ, ಎಂ.ಕೆ.ಶುಕ್ಲಾ, ಐಎಲ್ ಸಿ ಕಂಪೆನಿ ಮಾಲಕ ಕೆ.ಸೋಮಶೇಖರ್ ಹಾಗೂ ಕಾರದಪುಡಿ ಮಹೇಶ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಧೀಶ ವಿ.ಶ್ರಿಶಾನಂದ ತಿರಸ್ಕರಿಸಿದ್ದಾರೆ.

ಪ್ರಕರಣದಲ್ಲಿ ಆರೋಪಿಗಳ ಮೇಲೆ ಗಂಭೀರ ಆರೋಪಗಳಿವೆ. ಅಲ್ಲದೆ ತನಿಖಾ ಸಂಸ್ಥೆ ಇನ್ನೂ ದೋಷಾರೋಪ ಪಟ್ಟಿಯನ್ನು ಸಲ್ಲಿಸಿಲ್ಲ ಎಂದು ಸಿಬಿಐ ಪರ ವಕೀಲ ಕೆ.ಸುದರ್ಶನ್ ವಾದಿಸಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಯಾರಿಗೆ ಭೀತಿ: M/s ಡ್ರೀಮ್ ಲಾಜಿಸ್ಟಿಕ್ಸ್ ಪೈ ಲಿ ಮಾಲೀಕರಾದ ಯಲ್ಲಾಪುರ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಅವರ ಪುತ್ರ ವಿವೇಕ್ ಹೆಬ್ಬಾರ್.
* ಆನಂದ್ ಸಿಂಗ್ ಅವರ ವೈಷ್ಣವಿ ಮಿನಿರಲ್ಸ್ , ನಾಗೇಂದ್ರ ಅವರ ಈಗಲ್ ಟ್ರೇಡರ್ಸ್ ಅಂಡ್ ಲಾಜಿಸ್ಟಿಕ್ಸ್, ಸುರೇಶ್ ಬಾಬು ಅವರ ಜನಾದೇವಿ ಮಿನರಲ್ಸ್, ಕೆ ಸೋಮಶೇಖರ್ ಅವರ ಐಎಲ್ ಸಿ ಇಂಡಸ್ಟ್ರೀಸ್ ಪೈ.ಲಿ. ಸಿಬ್ಬಂದಿಗಳು
* ಅರಣ್ಯ ಇಲಾಖೆ ಅಧಿಕಾರಿಗಳು, ಬಂದರಿನ ಸಿಬ್ಬಂದಿಗಳು
* ಪವನ್ ಕುಮಾರ್ ಜೈನ್ ಅವರ ಪಿಜೆಎಸ್ ಓವರ್ಸೀಸ್ ಲಿ.
ಬಂಧಿತರು: ಕೂಡ್ಲಿಗಿ ಶಾಸಕ ನಾಗೇಂದ್ರ, ಕಂಪ್ಲಿಶಾಸಕ ಸುರೇಶ್ ಬಾಬು, ಕಾರವಾರದ ಶಾಸಕ ಸತೀಶ್ ಸೈಲ್. ಜತೆಗೆ ಅಂಕೋಲದ ಮಾಜಿ ಅರಣ್ಯಾಧಿಕಾರಿ ನರೇಂದ್ರ ಹಿತಲಮಕ್ಕಿ, ಮಾಜಿ ರೇಂಜ್ ಆಫೀಸರ್ ಜಿ.ಸಿ ನಾಯಕ್, ಬೇಲೇಕೇರಿ ಬಂದರು ಅಧಿಕಾರಿ ಕ್ಯಾಪ್ಟನ್ ಸಿ ಸ್ವಾಮಿ, ಪ್ರೊಪ್ರೆಟರ್ ಲಾಲ್ ಮಹಲ್ ಲಿ. ರಾಜಕುಮಾರ್ ಇವರೆಲ್ಲರ ಜತೆಗೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications