ಸೋದರ ಲಿಂಗರಾಜು ಬಂಧನ, ಸಿದ್ದೇಶ್ವರರಿಗೆ ಡವ ಡವ
ಬೆಂಗಳೂರು, ಏ.20: ಬೇಲೇಕೇರಿ ಅದಿರು ಅಕ್ರಮ ರಫ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಜಿ.ಎಂ ಸಿದ್ದೇಶ್ವರ ಅವರ ಕಿರಿಯ ಸೋದರ ಜಿಎಂ ಲಿಂಗರಾಜು ಅವರನ್ನು ಶನಿವಾರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಲಿಂಗರಾಜು ಅವರನ್ನು ಈಗ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದು ಏ.28ರ ತನಕ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾಲದೂಡಬೇಕಿದೆ.
ಸಿದ್ದೇಶ್ವರ ಅವರ ಫ್ಯಾಮಿಲಿಗೆ ಸೇರಿರುವ ಲಿಂಗರಾಜು ಒಡೆತನದ ಜಿಎಂ ಗ್ರೂಪ್ ಆಫ್ ಕಂಪನೀಸ್ ಬೇಲೇಕೇರಿ ಬಂದರಿನಿಂದ ಸುಮಾರು 12,500 ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ರಫ್ತು ಮಾಡಿದೆ. ಅದರೆ, ಇದಕ್ಕೆ ಪೂರಕ ದಾಖಲೆಗಳನ್ನು ಒದಗಿಸಿಲ್ಲ. ಈ ಕಾರಣಕ್ಕೆ ಜಿಎಂ ಲಿಂಗರಾಜು ಅವರನ್ನು ಲೋಕಾಯುಕ್ತ ಪೊಲೀಸರ ವಿಶೇಷ ತನಿಖಾ ತಂಡ ಬಂಧಿಸಿತ್ತು.
ಬಂಧಿತ ಲಿಂಗರಾಜು ಅವರನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನಂತರ ಏ.28ರ ತನಕ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಯಿತು. [ಕೊನೆ ಕ್ಷಣದಲ್ಲಿ ಮಲ್ಲಿಕಾರ್ಜುನ ಕೈ ತಪ್ಪಿದ ಗೆಲುವು]

ಜಿಎಂ ಸಿದ್ದೇಶ್ವರ ಅವರಿಗೇ ಏಕೆ ಭಯ: ಜಿಎಂ ಗ್ರೂಪ್ ಆಫ್ ಕಂಪನಿಯಲ್ಲಿ ಸಚಿವ ಸಿದ್ದೇಶ್ವರ ಅವರ ಷೇರುಗಳಿವೆ. ಇದನ್ನು ವಿಚಾರಣೆ ಸಂದರ್ಭದಲ್ಲಿ ಲಿಂಗರಾಜು ಅವರೇ ಹೇಳಿದ್ದಾರೆ. ಸುಮಾರು 9,645ಕ್ಕೂ ಅಧಿಕ ಷೇರುಗಳಿದ್ದು ಸುಮಾರು 9.5 ಕೋಟಿ ರು ಬೆಲೆ ಬಾಳುತ್ತದೆ. [ದಾವಣಗೆರೆ ಲೋಕಸಭೆ ಕ್ಷೇತ್ರದ ಪರಿಚಯ]
ಈ ಬಗ್ಗೆ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸಿದ್ದೇಶ್ವರ ಅವರು ಆಸ್ತಿ ಘೋಷಣಾ ಪತ್ರದಲ್ಲೂ ನಮೂದಿಸಿದ್ದಾರೆ. 6 ಕೋಟಿ ರು ಆಸ್ತಿ ಜೊತೆಗೆ 1 ಕೋಟಿ ರು ಸಾಲ ಇದೆ ಎಂದು ಘೋಷಿಸಿದ್ದರು. ಅದರೆ, ಷೇರು, ಬಾಂಡುಗಳ ಮೊತ್ತ 35 ಲಕ್ಷ ರು ದಾಟುವುದಿಲ್ಲ. ಇಲ್ಲಿ ನೋಡಿದರೆ 9 ಕೋಟಿ ರು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆದರೆ ಸತ್ಯಾಂಶ ಹೊರಬೀಳಬಹುದು.
ಅದಿರು ರಫ್ತಿಗೂ ಮುನ್ನ ಷೇರು ಹೊಂದಿರುವುದು ನಿಜವಾದರೆ ಸಿದ್ದೇಶ್ವರ ಅವರನ್ನು ವಿಚಾರಣೆಗೆ ಒಳಪಡಿಸಬಹುದು. 2010-11ರ ನಂತರ ಷೇರು ಸಿದ್ದೇಶ್ವರ ಅವರ ಹೆಸರಿಗೆ ಬಂದಿದ್ದರೆ ಯಾವುದೇ ಭಯ ಪಡಬೇಕಾಗಿಲ್ಲ.
ಸದ್ಯ ಲಿಂಗರಾಜು ಅವರ ಜಿಎಂ ಲ್ಯಾಬೊರೇಟರೀಸ್ ಕಂಪನಿ 2009-10ರ ಅವಧಿಯಲ್ಲಿ 12,500 ಮೆಟ್ರಿಕ್ ಟನ್ ಅದಿರನ್ನು ಯಾವುದೇ ದಾಖಲೆಗಳಿಲ್ಲದೆ ರಫ್ತು ಮಾಡಿರುವ ಆರೋಪವಿದೆ. (ಒನ್ ಇಂಡಿಯಾ ಸುದ್ದಿ)
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications