ಬೇಲೇಕೇರಿ:ರೆಡ್ಡಿಯೇ ರೂವಾರಿ, ರೆಡ್ಡಿ ವಿಚಾರಣೆ ಸಾಧ್ಯತೆ

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದ ರೂವಾರಿ ಎಂಬ ಅಂಶ ವಿಚಾರಣೆ ವೇಳೆ ಬೆಳಕಿಗೆ ಬಂದಿರುವುದರಿಂದ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ (OMC) ಪ್ರಸ್ತುತ ಚಂಚಲಗೂಡ ಜೈಲಿನಲ್ಲಿರುವ ಜನಾರ್ದನ ರೆಡ್ಡಿಯನ್ನು ಈ ಪ್ರಕರಣದಲ್ಲೂ ಬೆಂಗಳೂರು ಸಿಬಿಐ ಅಧಿಕಾರಿಗಳು ಜನಾರ್ದನ ರೆಡ್ಡಿಯನ್ನು ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ. ಹಾಗಾದಲ್ಲಿ ರೆಡ್ಡಿಗೆ ಸದ್ಯಕ್ಕೆ ಜೈಲು ವಾಸದಿಂದ ಮುಕ್ತಿ ಇಲ್ಲವಾಗುತ್ತದೆ.
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದ ವಿಚಾರಣೆ ತೀವ್ರಗೊಗೊಂಡಿದ್ದು, ಬಂಧಿತ ಆರೋಪಿಗಳಾದ ಶಾಸಕ ಸುರೇಶ್ ಬಾಬು, ಸತೀಶ್ ಸೈಲ್ ಅವರು ಅಕ್ರಮದ ಬಗ್ಗೆ ಹಲವು ಮಹತ್ವದ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ.
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿಯೇ ರೂವಾರಿ ಎಂದು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆಂದು ಸಿಬಿಐ ಮೂಲಗಳು ತಿಳಿಸಿವೆ. ಈಗಾಗಲೇ ಬಂಧಿತರಾಗಿರುವ ಕಾರಂಪುಡಿ ಮಹೇಶ್, ಸ್ವಸ್ತಿಕ್ ನಾಗರಾಜ್ ಅವರು ಸುರೇಶ್ ಬಾಬು ಸೂಚನೆ ಮೇರೆಗೆ ಅದಿರನ್ನು ಸಾಗಿಸಲಾಗಿತ್ತು ಎಂದು ಸಿಬಿಐ ಮುಂದೆ ಬಾಯ್ಬಿಟ್ಟಿರುವುದು ಗಮನಾರ್ಹ. ಈ ಹೇಳಿಕೆಗಳನ್ನು ಆಧರಿಸಿ ಶಾಸಕರು, ಅಧಿಕಾರಿಗಳು, ಇನ್ನಿತರರನ್ನು ಸಿಬಿಐ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಬಂಧಿತ ಶಾಸಕರಾದ ಸುರೇಶ್ ಬಾಬು, ಸತೀಶ್ ಸೈಲ್ ರವರು ಬಳ್ಳಾರಿ ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದ ಜನಾರ್ದನ ರೆಡ್ಡಿಯ ಸೂಚನೆ ಮೇರೆಗೆ ಅದಿರನ್ನು ರಫ್ತು ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.
ಸತೀಶ್ ಸೈಲ್ 2.5 ಲಕ್ಷ ಟನ್ ಅದಿರನ್ನು ವಿದೇಶಕ್ಕೆ ಸಾಗಿಸಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾರೆ ಎಂದು ಸಿಬಿಐ ಮೂಲಗಳು ಹೇಳಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹಲವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್ ಜಾರಿ ಮಾಡಿದೆ. ಒಟ್ಟಾರೆ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದ ಉರುಳು ಹಲವರಿಗೆ ಕೊರಳಿಗೆ ಬಿಗಿಯಾಗ ತೊಡಗಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್, ಕೂಡ್ಲಿಗಿ ಶಾಸಕ ನಾಗೇಂದ್ರ ಅವರು ಸಿಬಿಐ ಮುಂದೆ ಹಾಜರಾಗಿ ವಿಚಾರಣೆ ಎದುರಿಸಬೇಕಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications