ಬೇಲೇಕೇರಿ ಪ್ರಕರಣ 19ಕಡೆ ಸಿಬಿಐ ದಾಳಿ
ಬೆಂಗಳೂರು, ಫೆ.6 : ಬೇಲಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಬಿಐ ಗುರುವಾರ ದೇಶದ ಹತ್ತು ನಗರಗಳ 19 ಕಡೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಕರ್ನಾಟಕ, ಗೋವಾ, ಕೋಲ್ಕತ್ತಾ, ಮುಂಬೈಗಳಲ್ಲಿ ಏಕಕಾಲದಲ್ಲಿ ಈ ದಾಳಿ ನಡೆಸಿದೆ.
ಕಾರವಾರದ ಬೇಲೇಕೇರಿ ಬಂದರಿನಿಂದ 21 ಲಕ್ಷ ಟನ್ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿರುವ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಗುರುವಾರ ಬೆಂಗಳೂರು, ಬಳ್ಳಾರಿ, ಹೊಸಪೇಟೆ, ಸಂಡೂರು, ಗೋವಾ, ಸೇಲಂ, ಕೋಲ್ಕತಾ, ಮುಂಬಯಿ ಹಾಗೂ ಬೆಳಗಾವಿಯಲ್ಲಿ ದಾಳಿ ನಡೆಸಲಾಗಿದ್ದು, ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ.

ಸುಪ್ರೀಂಕೋರ್ಟ್ ಆದೇಶದಂತೆ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, 2013ರ ಅಕ್ಟೋಬರ್-ನವೆಂಬರ್ನಲ್ಲಿ 22 ಕೇಸುಗಳನ್ನು ಸಿಬಿಐ ದಾಖಲಿಸಿಕೊಂಡಿದ್ದು, ಪ್ರಕರಣದ ವಿಚಾರಣೆ ನಡೆಸುತ್ತಿದೆ. ಕರ್ನಾಟಕದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿ, ಕಂಪ್ಲಿ ಶಾಸಕ ಸುರೇಶ್ಬಾಬು, ಕೂಡ್ಲಿಗಿ ಶಾಸಕ ನಾಗೇಂದ್ರ, ವಿಜಯನಗರ ಶಾಸಕ ಆನಂದ್ಸಿಂಗ್, ಕಾರವಾರ ಶಾಸಕ ಸತೀಶ್ ಸೈಲ್ ಸೇರಿದಂತೆ ಹಲವಾರು ಅಧಿಕಾರಿಗಳು ಬಂಧಿಸಲಾಗಿದೆ.[ಬೇಲೇಕೇರಿ ಪ್ರಕರಣ ರೆಡ್ಡಿ ಆರೋಪಿ ನಂ 1]
ಪ್ರಕರಣಕ್ಕೆ ಸಂಬಂಧಿಸಿದಂರೆ 22 ಎಫ್ಐಆರ್ಗಳು, 15 ಕಂಪನಿಗಳು, ಆರು ಪಾಲುದಾರಿಕೆ ಹಾಗೂ 2 ಮಾಲೀಕತ್ವಗಳಿಗೆ ಸಂಬಂಧಿಸಿದಂತೆ 50 ವ್ಯಕ್ತಿಗಳನ್ನು ಸಿಬಿಐ ಗುರುತಿಸಿದೆ. ಜೊತೆಗೆ ಗಣಿ ಮತ್ತು ಭೂವಿಜ್ಞಾನ ಅರಣ್ಯ ಮತ್ತಿತರ ಇಲಾಖೆಗಳ ಸಿಬ್ಬಂದಿಗಳನ್ನೂ ಗುರುತಿಸಿದ್ದು, ಇನ್ನೂ ಅನೇಕರನ್ನು ತನಿಖೆ ಸಂದರ್ಭ ಗುರುತಿಸಲಾಗುವುದು ಎಂದು ಸಿಬಿಐ ಹೇಳಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications