ಬೇಲೇಕೇರಿ ಪ್ರಕರಣ 19ಕಡೆ ಸಿಬಿಐ ದಾಳಿ
ಬೆಂಗಳೂರು, ಫೆ.6 : ಬೇಲಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಬಿಐ ಗುರುವಾರ ದೇಶದ ಹತ್ತು ನಗರಗಳ 19 ಕಡೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಕರ್ನಾಟಕ, ಗೋವಾ, ಕೋಲ್ಕತ್ತಾ, ಮುಂಬೈಗಳಲ್ಲಿ ಏಕಕಾಲದಲ್ಲಿ ಈ ದಾಳಿ ನಡೆಸಿದೆ.
ಕಾರವಾರದ ಬೇಲೇಕೇರಿ ಬಂದರಿನಿಂದ 21 ಲಕ್ಷ ಟನ್ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿರುವ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಗುರುವಾರ ಬೆಂಗಳೂರು, ಬಳ್ಳಾರಿ, ಹೊಸಪೇಟೆ, ಸಂಡೂರು, ಗೋವಾ, ಸೇಲಂ, ಕೋಲ್ಕತಾ, ಮುಂಬಯಿ ಹಾಗೂ ಬೆಳಗಾವಿಯಲ್ಲಿ ದಾಳಿ ನಡೆಸಲಾಗಿದ್ದು, ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ.

ಸುಪ್ರೀಂಕೋರ್ಟ್ ಆದೇಶದಂತೆ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, 2013ರ ಅಕ್ಟೋಬರ್-ನವೆಂಬರ್ನಲ್ಲಿ 22 ಕೇಸುಗಳನ್ನು ಸಿಬಿಐ ದಾಖಲಿಸಿಕೊಂಡಿದ್ದು, ಪ್ರಕರಣದ ವಿಚಾರಣೆ ನಡೆಸುತ್ತಿದೆ. ಕರ್ನಾಟಕದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿ, ಕಂಪ್ಲಿ ಶಾಸಕ ಸುರೇಶ್ಬಾಬು, ಕೂಡ್ಲಿಗಿ ಶಾಸಕ ನಾಗೇಂದ್ರ, ವಿಜಯನಗರ ಶಾಸಕ ಆನಂದ್ಸಿಂಗ್, ಕಾರವಾರ ಶಾಸಕ ಸತೀಶ್ ಸೈಲ್ ಸೇರಿದಂತೆ ಹಲವಾರು ಅಧಿಕಾರಿಗಳು ಬಂಧಿಸಲಾಗಿದೆ.[ಬೇಲೇಕೇರಿ ಪ್ರಕರಣ ರೆಡ್ಡಿ ಆರೋಪಿ ನಂ 1]
ಪ್ರಕರಣಕ್ಕೆ ಸಂಬಂಧಿಸಿದಂರೆ 22 ಎಫ್ಐಆರ್ಗಳು, 15 ಕಂಪನಿಗಳು, ಆರು ಪಾಲುದಾರಿಕೆ ಹಾಗೂ 2 ಮಾಲೀಕತ್ವಗಳಿಗೆ ಸಂಬಂಧಿಸಿದಂತೆ 50 ವ್ಯಕ್ತಿಗಳನ್ನು ಸಿಬಿಐ ಗುರುತಿಸಿದೆ. ಜೊತೆಗೆ ಗಣಿ ಮತ್ತು ಭೂವಿಜ್ಞಾನ ಅರಣ್ಯ ಮತ್ತಿತರ ಇಲಾಖೆಗಳ ಸಿಬ್ಬಂದಿಗಳನ್ನೂ ಗುರುತಿಸಿದ್ದು, ಇನ್ನೂ ಅನೇಕರನ್ನು ತನಿಖೆ ಸಂದರ್ಭ ಗುರುತಿಸಲಾಗುವುದು ಎಂದು ಸಿಬಿಐ ಹೇಳಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications