ಕೋರೆ ಕುಟುಂಬದಲ್ಲಿಯೂ ರಾಜಕೀಯ ಓರೆಕೋರೆಗಳು!

ಬೆಳಗಿನ ಸುದ್ದಿ: ಉತ್ತರ ಕರ್ನಾಟಕ ಭಾಗದ ಪ್ರಭಾವಿ ಮುಖಂಡ, ಬಿಜೆಪಿ ರಾಜ್ಯಸಭಾ ಸದಸ್ಯ, ಪ್ರತಿಷ್ಠಿತ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಬಿ. ಕೋರೆ ಅವರ ಕುಟುಂಬದಲ್ಲಿ ರಾಜಕೀಯ ಧ್ರುವೀಕರಣ ನಡೆದಿದೆ. ಅಪ್ಪ ಪ್ರಭಾಕರ ಕೋರೆ ಅವರು ಬಿಜೆಪಿ ಕಟ್ಟುವಲ್ಲಿ ಶ್ರಮಿಸುತ್ತಿದ್ದರೆ ಅವರ ಪುತ್ರ ಅಮಿತ್ ಕೋರೆ ಅವರು ಕಾಂಗ್ರೆಸ್ ಪಕ್ಷಕ್ಕೆ ಅಂಕಿತರಾಗಿದ್ದಾರೆ.
ಕುತೂಹಲಕಾರಿಯೆಂದರೆ ಈ ಬೆಳವಣಿಗೆ ಕೋರೆ ಕುಟಂಬದಲ್ಲಷ್ಟೇ ಅಲ್ಲ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಲ್ಲಿಯೂ ತಲ್ಲಣ ಸೃಷ್ಟಿಸಿದೆ. ಆದರೆ ಈ ಬೆಳವಣಿಗೆಗಳನ್ನು ನೋಡಿದರೆ ಬೆಳಗಾವಿಯ ಮಣ್ಣಿನ ಗುಣವೇ ಹಾಗೇನೋ... ಜಿಲ್ಲೆಯಲ್ಲಿ ಒಂದೇ ಕುಟುಂಬದವರು ವಿಭಿನ್ನ ರಾಜಕೀಯ ಪಕ್ಷಗಳಿಗೆ ಅಂಕಿತವಾಗಿರುವುದು ಸೋಜಿಗವೇ ಸರಿ!.
ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದೇನೆ. ಆದರೆ ಕಾಂಗ್ರೆಸ್ ಸೇರುವ ಕುರಿತು ಇನ್ನೂ ತಮ್ಮ ತಂದೆ ಪ್ರಭಾಕರ ಕೋರೆ ಜತೆ ಚರ್ಚಿಸಿಲ್ಲ. ಬಹುಶಃ ಈ ವೇಳೆಗೆ ಅವರಿಗೂ ವಿಷಯ ಗೊತ್ತಾಗಿರುತ್ತದೆ. ಆದರೆ ಆ ಬಗ್ಗೆ ಅವರೂ ನನ್ನನ್ನೇನು ಪ್ರಶ್ನಿಸಿಲ್ಲ. ಇದು ನನ್ನ ಸ್ವಂತ ನಿರ್ಧಾರ ಎಂದು BE ಮತ್ತು MBA ಶಿಕ್ಷಣ ಪಡೆದಿರುವ ಅಮಿತ್ ಹೇಳಿದ್ದಾರೆ.
'ಆದರೆ ಸದ್ಯಕ್ಕೆ ರಾಜಕೀಯ ಬೇಡವೆಂದು ತಮ್ಮ ಮಗನಿಗೆ ಈ ಹಿಂದೆಯೇ ತಿಳಿಯಹೇಳಿದ್ದೆ. ಅಮಿತ್ ರಾಜಕೀಯ ಪ್ರವೇಶಕ್ಕೆ ಇನ್ನೂ ಕಾಲಾವಕಾಶ ಇದೆ. ತಂದೆಯೊಂದು ಕಡೆ, ಮಗ ಒಂದು ಕಡೆ ಇರುವುದು ನಮ್ಮ ಸಂಸ್ಕಾರವಲ್ಲ. ಆತನ ನಿರ್ಧಾರ ದುಡುಕಿನದ್ದು' ಎಂದು ಪ್ರಭಾಕರ್ ಕೋರೆ ಪ್ರತಿಕ್ರಿಯಿಸಿದ್ದಾರೆ.
ಅಮಿತ್ ಕೋರೆ ಅವರು ಇಂದು ಗುರುವಾರ ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ 5 ಶುಲ್ಕ ಪಾವತಿಸಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆಯಲಿದ್ದಾರೆ. ಮುಂಬರುವ ದಿನಗಳಲ್ಲಿ ತಮ್ಮ ಬೆಂಬಲಿಗರೂ ಕಾಂಗ್ರೆಸ್ ಕೈಹಿಡಿಯಲಿದ್ದಾರೆ ಎಂದಿರುವ ಅಮಿತ್ ಕೋರೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟಿನಿಂದ ಸ್ಪರ್ಧಿಸಬಯಸಿದ್ದಾರೆ.
ರಾಜಕೀಯ ಹಿನ್ನೆಲೆಯಿಂದ ಬಂದಿದ್ದರೂ ರಾಜಕೀಯ ಪಕ್ಷಗಳಿಂದ ದೂರ ಉಳಿದಿದ್ದ ಅಮಿತ್, ಸಹಕಾರಿ ಕ್ಷೇತ್ರದಲ್ಲಿ ಮಾತ್ರ ತೊಡಗಿಸಿಕೊಂಡಿದ್ದರು. ಇದೀಗ ಕಾಂಗ್ರೆಸ್ ಸೇರುವ ಮೂಲಕ ತಮ್ಮ ರಾಜಕೀಯ ಭವಿಷ್ಯ ರೂಪಿಸಿಕೊಳ್ಳಲು ಸಿದ್ಧರಾಗಿದ್ದಾರೆ. ಚಿಕ್ಕೋಡಿಯ ದೂಧಗಂಗಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರೂ ಆಗಿರುವ ಅಮಿತ್ ಕೆಎಲ್ ಇ ಸಂಸ್ಥೆಯ ನಿರ್ದೇಶಕರಾಗಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications