ಬೆಳ್ಳಂದೂರು ಡಿನೋಟಿಫಿಕೇಷನ್ ಹಗರಣ: ವಿಶೇಷ ಕೋರ್ಟ್ ಮುಂದೆ ಬಿಎಸ್ವೈ ಹಾಜರ್
ಬೆಂಗಳೂರು ಜೂ.17. ಬೆಳ್ಳಂದೂರು ಬಳಿಯ ಭೂ ಡಿನೋಟಿಫಿಕೇಷನ್ ಹಗರಣದ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೆ ಹಾಜರಾಗಿದ್ದರು. ಬಿಎಸ್ವೈ ತಮ್ಮ ವಕೀಲರ ಮೂಲಕ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಬಿ.ಜಯಂತ್ ಕುಮಾರ್ ಅವರ ಮುಂದೆ ಹಾಜರಾದರು.
ಆನಂತರ ಅವರ ಪರ ವಕೀಲರು, ಜಾಮೀನು ಕೋರಿ ಅರ್ಜಿ ಸಲ್ಲಿಸಿದರು. ಅದನ್ನು ಪರಿಗಣಿಸಿದ ನ್ಯಾಯಾಲಯ ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಅಭಿಯೋಜಕರಿಗೆ ಕೋರ್ಟ್ ಸೂಚನೆ ನೀಡಿ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿತು.
ಡಿನೋಟಿಫಿಕೇಷನ್ ಹಗರಣ ಬೆನ್ನು ಬಿಡದಂತೆ ಬಿಎಸ್ ವೈ ಅವರನ್ನು ಕಾಡುತ್ತಿದ್ದು, 9 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ ಬಂದಿದ್ದು, ಮತ್ತೆ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿತ್ತು.

2013ರಲ್ಲಿ ವಾಸುದೇವ ರೆಡ್ಡಿ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಿರುವ ವಿಶೇಷ ನ್ಯಾಯಾಲಯ, ದೂರುದಾರರ ಪ್ರಮಾಣೀಕೃತ ಹೇಳಿಕೆ ದಾಖಲಿಸಿ ವಿಚಾರಣಾ ಪ್ರಕ್ರಿಯೆ ಕೈಗೆತ್ತಿಕೊಂಡಿದೆ.
ಪ್ರಕರಣದ ಹಿನ್ನೆಲೆ:
ಐ.ಟಿ. ಕಾರಿಡಾರ್ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯ ಪೈಕಿ 15 ಎಕರೆ 30 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪ ಮಾಜಿ ಸಿಎಂ ಬಿಎಸ್ ವೈ ಮೇಲಿದೆ. ಈ ಪ್ರಕರಣದಲ್ಲಿ ಮೂಲ ದೂರುದಾರರಾದ ವಾಸುದೇವ ರೆಡ್ಡಿ, ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಯಡಿಯೂರಪ್ಪ ಸೇರಿದಂತೆ ಹತ್ತು ಮಂದಿಯ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು.
2015ರಲ್ಲಿ ಹೈಕೋರ್ಟ್ ದೇಶಪಾಂಡೆ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿತ್ತು. ಉಳಿದ ಎಂಟು ಜನರ ವಿರುದ್ಧದ ದೂರನ್ನು ವಿಚಾರಣಾ ನ್ಯಾಯಾಲಯ ರದ್ದುಗೊಳಿಸಿತ್ತು. ಆದರೆ ಎರಡನೇ ಆರೋಪಿಯಾಗಿರುವ ಯುಡಿಯೂರಪ್ಪ ವಿರುದ್ಧದ ಪ್ರಕರಣ ಹಾಗೆಯೇ ಇದೆ.
ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ದೂರಿನಲ್ಲಿರುವ ಆರೋಪಗಳ ಕುರಿತು ತನಿಖೆ ನಡೆಸುವಂತೆ ಆದೇಶಿಸಿತ್ತು. ತನಿಖೆ ನಡೆಸಿದ್ದ ಪೊಲೀಸರು ಎರಡು ಭಾರಿ ಯಡಿಯೂರಪ್ಪ ವಿರುದ್ಧದ ಆರೋಪಗಳಲ್ಲಿ ಹುರುಳಿಲ್ಲ ಎಂದು 'ಬಿ' ವರದಿ ಸಲ್ಲಿಸಿದ್ದರು. ಎರಡೂ ವರದಿಗಳನ್ನು ನ್ಯಾಯಾಲಯ ತಿರಸ್ಕರಿಸಿತ್ತು.2021ರ ನ. 27ರಂದು ಎರಡನೇ 'ಬಿ' ವರದಿಯನ್ನು ತಿರಸ್ಕರಿಸಿದ್ದ ನ್ಯಾಯಾಲಯ ವಿಚಾರಣೆ ಆರಂಭಿಸುವುದಾಗಿ ಆದೇಶಿಸಿತು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications