ಬಳ್ಳಾರಿ: ಡಬಲ್ ಪೋಸ್ಟ್ ಮಾರ್ಟಂ ಬಗ್ಗೆ ನಾನು ಹೇಳಿದ್ದು ಸತ್ಯ: ಎಚ್.ಡಿ ಕುಮಾರಸ್ವಾಮಿ
ಬಳ್ಳಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಹಾಗೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ನಡುವೆ ವಾಕ್ಸಮರ ಮುಂದುವರಿದಿದೆ. ಬಳ್ಳಾರಿ ಬ್ಯಾನರ್ ಪ್ರಕರಣದಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತನ ಮರಣೋತ್ತರ ಶವ ಪರೀಕ್ಷೆಯನ್ನು ಎರಡು ಬಾರಿ ಮಾಡಲಾಗಿದೆ ಎಂದು ಎಚ್.ಡಿ ಕುಮಾರಸ್ವಾಮಿ ಅವರು ಆರೋಪ ಮಾಡಿದ್ದರು. ಇದಕ್ಕೆ ಜಿ. ಪರಮೇಶ್ವರ್ ಅವರು ತಿರುಗೇಟು ನೀಡಿದ್ದರು. ಇದೀಗ ಮತ್ತೆ ಎಚ್ಡಿ ಕುಮಾರಸ್ವಾಮಿ ಅವರು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ.
ಗೃಹ ಸಚಿವ ಪರಮೇಶ್ವರ ಅವರೇ ಬಳ್ಳಾರಿಯಲ್ಲಿ ಕಗ್ಗೊಲೆಯಾದ ನಿಮ್ಮದೇ ಪಕ್ಷದ ನತದೃಷ್ಟ ಕಾರ್ಯಕರ್ತನ ಡಬಲ್ ಪೋಸ್ಟ್ ಮಾರ್ಟಂ ಕಥಾನಕದ ಬಗ್ಗೆ ನಾನು ಹೇಳಿದ್ದು ಸತ್ಯ. ಸತ್ತ ಶರೀರವನ್ನೂ ರಾಜಕೀಯ ಸ್ವಾರ್ಥಕ್ಕೆ ಬಳಸಿಕೊಳ್ಳುವ ನಿಮ್ಮ ಕೀಳು ನಡವಳಿಕೆ ಕುರಿತು ನಾನು ಹೇಳಿದ್ದು ಅಕ್ಷರಶಃ ನಿಜ.

ಡಬಲ್ ಪೋಸ್ಟ್ ಮಾರ್ಟಂ ಅಸತ್ಯವಾದರೆ ಬಿಮ್ಸ್ ಅಧೀಕ್ಷಕರನ್ನು ತಕ್ಷಣವೇ ಬ್ರೈನ್ ಮ್ಯಾಪಿಂಗ್ ಗೆ ಒಳಪಡಿಸಿ. ಆಗ ನಿಮ್ಮ ಪೋಸ್ಟ್ ಮಾರ್ಟಂ ಮಾಯಾಜಾಲ ಬಯಲಾಗುತ್ತದೆ. ಮಾಡಿಸುತ್ತೀರಾ ಮಾನ್ಯ ಮಂತ್ರಿಗಳೇ ಎಂದು ಪ್ರಶ್ನೆ ಮಾಡಿದ್ದಾರೆ.
ಪ್ರಕರಣ ಮುಚ್ಚಿಹಾಕಲು ನಿಮ್ಮ ಸರಕಾರ ನಡೆಸುತ್ತಿರುವ ಮಹಾನ್ ಹರಸಾಹಸ ಏನೇನ್ ಎಂಬುದು ನನಗೆ ಗೊತ್ತಿದೆ. ಹಾಗೆಯೇ, ಬಿಮ್ಸ್ ಅಧೀಕ್ಷಕರ ಹೇಳಿಕೆಯನ್ನೂ ಗಮನಿಸಿದ್ದೇನೆ. ಅವರ ಪ್ರಕಾರ 6 ಗಂಟೆಯಿಂದ ಶುರುವಾದ ಪೋಸ್ಟ್ ಮಾರ್ಟಂ 3 ಗಂಟೆಗಳ ಕಾಲ ನಡೆದು ವಿಳಂಬವಾಯಿತು. ದೇಹದಲ್ಲಿ ಅನೇಕ ಚೂರುಗಳು ಇದ್ದವು ಎಂದು ಹೇಳಿದ್ದಾರೆ, ಸರಿ. ಆದರೆ, ಆ ವೈದ್ಯರೇ ಮರಣೋತ್ತರ ಪರೀಕ್ಷೆ ಮುಗಿಸಬಹುದಿತ್ತು. ಹಾಗಿದ್ದ ಮೇಲೆ ಇನ್ನೊಬ್ಬ ವೈದ್ಯರನ್ನು ಕರೆಸಿಕೊಂಡ ಗುಟ್ಟೇನು? ಮೃತದೇಹ ಪರೀಕ್ಷೆಗೆ ಎಷ್ಟು ವೈದ್ಯರು ಬೇಕು? ಮರಣೋತ್ತರ ಪರೀಕ್ಷೆ ವೇಳೆ ನೀವು ಜೀವ ಉಳಿಸಬೇಕಿತ್ತ? ಅಥವಾ ಸತ್ಯ ಹುಡುಕಬೇಕಿತ್ತಾ? ಆಗ ನೀವು ಕರೆಸಬೇಕಿದ್ದದ್ದು ಫೋರೆನ್ಸಿಕ್ ತಜ್ಞರನ್ನು.
ಪೋಸ್ಟ್ ಮಾರ್ಟಂ ವೇಳೆ ಆ ಇಬ್ಬರು ವೈದ್ಯರ ನಡುವೆ ಏನೆಲ್ಲಾ ತಿಕ್ಕಾಟ ನಡೆಯಿತು? ಎನ್ನುವದು ಕೂಡ ನನಗೆ ಗೊತ್ತಿದೆ. ಬಿಮ್ಸ್ ಅಧೀಕ್ಷಕರ ಹೇಳಿಕೆಯಲ್ಲೇ ನಿಮಗೆ ಪ್ರಶ್ನೆಯೂ ಅಡಗಿದೆ, ಉತ್ತರವೂ ಇದೆ. ಮೊದಲ ವೈದ್ಯರೇ ಮರಣೋತ್ತರ ಪರೀಕ್ಷೆ ಮುಗಿಸಬಹುದಿತ್ತು. ಇನ್ನೊಬ್ಬ ವೈದ್ಯರ ಅವಶ್ಯಕತೆ ಏನಿತ್ತು ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಸಮಾಜವನ್ನು ಹಾಳು ಮಾಡಲಿಕ್ಕೊ ಅಥವಾ ನಿಮ್ಮ ತನಿಖೆ ದಿಕ್ಕು ತಪ್ಪಿಸಲಿಕ್ಕೊ, ಮಾಹಿತಿ ಇಲ್ಲದೆಯೋ ನಾನು ಹೇಳಿದ್ದಲ್ಲ. ಮೃತದೇಹವನ್ನೂ ನಿಮ್ಮ ಮನೆಹಾಳು ರಾಜಕೀಯಕ್ಕೆ ಬಳಸಿಕೊಂಡಿದ್ದನ್ನು ರಾಜ್ಯದ ಜನತೆಗೆ ಗಮನಕ್ಕೆ ತಂದಿದ್ದೇನೆ, ಪ್ರಶ್ನಿಸಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಎಚ್.ಡಿ ಕುಮಾರಸ್ವಾಮಿ ಅವರು ಸಮರ್ಥಿಸಿಕೊಂಡಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications