ಕೊರೊನಾ ಜಾಗೃತಿ ಮೂಡಿಸಿ ಎಲ್ಲರಂತೆ ಸಾಲಿನಲ್ಲಿ ನಿಂತ ತಹಶೀಲ್ದಾರ್
ದಕ್ಷಿಣ ಕನ್ನಡ, ಮಾರ್ಚ್ 25: ಕೊರೊನಾ ವೈರಸ್ ಹರಡದಂತೆ ಎಷ್ಟೇ ಮಾಹಿತಿ ನೀಡಿದರೂ, ಜನರು ಅದನ್ನು ಸರಿಯಾಗಿ ಪಾಲಿಸುತ್ತಿಲ್ಲ. ಆದರೆ, ತಾವೇ ಅದನ್ನು ಪಾಲಿಸುವ ಮೂಲಕ ಜನರಿಗೆ ಬೆಳ್ತಂಗಡಿ ತಹಶೀಲ್ದಾರ್ ತಿಳಿ ಹೇಳಿದ್ದಾರೆ.
ಬೆಳ್ತಂಗಡಿ ತಹಶೀಲ್ದಾರರಾದ ಗಣಪತಿ ಶಾಸ್ತ್ರಿಯವರು ಜನರಿಗೆ ಕೊರೊನಾ ಬಗ್ಗೆ ಅರಿವು ಮೂಡಿಸಿದ್ದಾರೆ. ದಿನಸಿ ಅಂಗಡಿಯಲ್ಲಿ ವಸ್ತುಗಳ ಖರೀದಿ ಸಮಯದಲ್ಲಿ ಸಾಮಾಜಿಕ ಅಂತರ ಬಗ್ಗೆ ಹೇಳಿ, ಜನರು ಸಾಲಿನಲ್ಲಿ, ಒಂದು ಮೀಟರ್ ಅಂತರ ಬಿಟ್ಟು ನಿಲ್ಲುವಂತೆ ತಿಳಿಸಿದ್ದಾರೆ. ತಾವು ಕೂಡ ಎಲ್ಲರಂತೆ ಸಾಲಿನಲ್ಲಿ ನಿಂತಿದ್ದಾರೆ.
ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಪರಿಣಾಮವಾಗಿ ಕೇಂದ್ರ ಸರ್ಕಾರವು ಏಪ್ರಿಲ್ 14 ರವರೆಗೆ 'ಭಾರತ ಲಾಕ್ ಡೌನ್'ಗೆ ಕರೆ ನೀಡಿದೆ. ಬೆಳ್ತಂಗಡಿಯಲ್ಲಿ ಬೆಳಿಗ್ಗೆ 12.00 ಗಂಟೆಯವರೆಗೆ ಜನರಿಗೆ ಅತ್ಯವಶ್ಯಕ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ಈ ಸಮಯದಲ್ಲಿ ವಸ್ತುಗಳು ಸಿಗುವುದಿಲ್ಲವೆನೋ ಎನ್ನುವ ಆತಂಕದಲ್ಲಿ ನಾ ಮುಂದೊ, ನೀ ಮುಂದೊ ಎಂದು ಹೊರಟ ಜನಕ್ಕೆ ಗಣಪತಿ ಶಾಸ್ತ್ರಿ ಬುದ್ದಿವಾದ ಹೇಳಿದ್ದಾರೆ.

ಸದ್ಯ, ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 500ರ ಗಡಿ ದಾಟಿದೆ. ಕರ್ನಾಟಕದಲ್ಲಿ 41 ಪಾಸಿಟಿವ್ ಪ್ರಕರಣಗಳು ದೃಢವಾಗಿವೆ. ಹೀಗಾಗಿ ಕೇಂದ್ರ ಸರ್ಕಾರ ಇಡೀ ದೇಶವನ್ನು ಲಾಕ್ ಡೌನ್ ಮಾಡುವ ನಿರ್ಧಾರವನ್ನು ನಿನ್ನೆ ತಿಳಿಸಿತ್ತು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications