ಇಂಧನ ಸಚಿವ ಡಿಕೆ ಶಿವಕುಮಾರ್ ವಿಚಾರಣೆ ನಂತರ ಮುಂದೇನು?
ಡಿಕೆ ಶಿವಕುಮಾರ್ ವಿರುದ್ಧದ ಆರೋಪ ಸಾಬೀತಾದರೆ ಮಂದೇನು? ಅವರು ಬೇನಾಮಿ ಆಸ್ತಿ ಮಾಡಿರುವುದು ಪತ್ತೆಯಾದರೆ, ಆ ಆಸ್ತಿಯ ಮಾರುಕಟ್ಟೆ ಮೌಲ್ಯದ ಶೇ. 25ರಷ್ಟು ದಂಡ ಹಾಕಬಹುದು. ಬೇನಾಮಿ ಆಸ್ತಿಯ ಸಂಪೂರ್ಣ ಭಾಗವನ್ನು ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರ
ಬೆಂಗಳೂರು, ಆಗಸ್ಟ್ 8: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ವಿಚಾರಣೆ ಆಯ್ತು. ಸೋಮವಾರ ಇಲ್ಲಿನ ಕ್ವೀನ್ಸ್ ರಸ್ತೆಯಲ್ಲಿರುವ ಕಚೇರಿಗೆ ಆಗಮಿಸಿದ್ದ ಅವರು, ಮೂರು ಗಂಟೆಗಳ ಕಾಲ ವಿಚಾರಣೆಗೊಳಪಟ್ಟಿದ್ದರು.
ಆನಂತರ, ಏನಾಯಿತು? ಇದಕ್ಕೆ ಉತ್ತರ ಆದಾಯ ತೆರಿಗೆ ಇಲಾಖೆಯೇ ನೀಡಿದೆ. ಅಲ್ಲಿನ ಮೂಲಗಳ ಪ್ರಕಾರ, ಡಿ.ಕೆ. ಶಿವಕುಮಾರ್ ಅವರ ವಿಚಾರಣೆ ವೇಳೆ ಅವರು ಹಲವಾರು ಮಾಹಿತಿಗಳನ್ನು ಇಲಾಖೆಗೆ ನೀಡಿದ್ದಾರೆ.
ಆದರೆ, ಅವರ ಆಸ್ತಿ ಮೌಲ್ಯ ಮಾಪನದ ಸಂದರ್ಭದಲ್ಲಿ ಬೇನಾಮಿ ಆಸ್ತಿ ವಹಿವಾಟು ನಡೆಸಿರುವ ಗುಮಾನಿ ಇಲಾಖೆಗೆ ಇದೆ. ಈ ಬಗ್ಗೆ ಹೆಚ್ಚಿನ ಗಮನ ಕೊಡಲಾಗಿದೆ.
ಇದಿನ್ನೂ ಖಚಿತವಾಗಿಲ್ಲ. ಇದು ಖಚಿತವಾದರೆ, ಅವರ ವಿರುದ್ಧ ಬೇನಾಮಿ ವಹಿವಾಟು ನಿಷೇಧ ಕಾಯ್ದೆ ಅನ್ವಯವಾಗುತ್ತದೆ. ಆಗ, ಡಿಕೆ ಶಿವಕುಮಾರ್ ಅವರು ಮತ್ತಷ್ಟು ಕಾನೂನಾತ್ಮಕ ಸಮಸ್ಯೆಗಳಿಗೆ ಒಳಗಾಗುವ ಸಂಭವವಿರುತ್ತದೆ ಎಂದು ಹೇಳಲಾಗಿದೆ.

ದಂಡ, ಜಪ್ತಿಗೂ ಅವಕಾಶ
ಈ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರ ತಪ್ಪು ಸಾಬೀತಾದರೆ, ಅವರು ಗಳಿಸಿರುವ ಒಟ್ಟಾರೆ ಬೇನಾಮಿ ಆಸ್ತಿಯ ಮಾರುಕಟ್ಟೆ ಮೌಲ್ಯದ ಮೇಲೆ ಶೇ. 25ರಷ್ಟು ದಂಡ ವಿಧಿಸಬಹುದಾಗಿದೆ. ಅಲ್ಲದೆ, ಅಗತ್ಯ ಬಿದ್ದರೆ, ಆದಾಯ ತೆರಿಗೆ ಇಲಾಖೆಯು ಬೇನಾಮಿ ಆಸ್ತಿಯನ್ನು ಜಪ್ತಿ ಮಾಡಲೂಬಹುದು.

ಆಸ್ತಿ ಘೋಷಣೆ ಮುಖ್ಯ
ಆಸ್ತಿ ತೆರಿಗೆ ಮೌಲ್ಯ ಮಾಪನಕ್ಕೆ ಒಳಪಡುವ ವ್ಯಕ್ತಿ ಅಥವಾ ಸಂಸ್ಥೆಗಳು ತಮ್ಮ ಆಸ್ತಿ ಪಾಸ್ತಿ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಘೋಷಿಸಿಕೊಳ್ಳಬೇಕು. ಇದರ ಜತೆಗೆ ತೆರಿಗೆ ಪಾವತಿಸಬೇಕು. ಇದನ್ನು ಪಾಲಿಸದಿದ್ದರೆ ತೊಂದರೆಯಾಗುತ್ತದೆ.

ಆಸ್ತಿ ಘೋಷಣೆ ಜತೆಗೆ, ತೆರಿಗೆಯನ್ನೂ ಕಟ್ಟಬೇಕು
ಶೋಧದ ವೇಳೆ ಇಂಥ ಬೇನಾಮಿ ಆಸ್ತಿಪಾಸ್ತಿ ಇರುವುದು ಕಂಡುಬಂದರೆ ಅಂಥ ಆಸ್ತಿಯನ್ನು ಹೊಂದಿದವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ. ಇಂಥ ಆಸ್ತಿಯ ಮೂಲದ ಬಗ್ಗೆ ಆರೋಪಿತರು ದಾಖಲೆಗಳನ್ನು ನೀಡಬೇಕಾಗುತ್ತದೆ. ಇದು ಅವರಿಂದ ಸಾಧ್ಯವಾಗದಿದ್ದರೆ, ದಂಡ, ಮುಟ್ಟುಗೋಲಿನಂಥ ಕ್ರಮಗಳನ್ನು ಎದುರಿಸಬೇಕಾಗುತ್ತದೆ.

2016ರಲ್ಲಿ ಕಾಯ್ದೆಗೆ ತಿದ್ದುಪಡಿ
1988ರಿಂದ ಇದ್ದ ಕಾಯ್ದೆಗೆ ಕೇಂದ್ರ ಸರ್ಕಾರ 2016ರಲ್ಲಿ ತಿದ್ದುಪಡಿ ತಂದಿದೆ. ಅದರ ಅನ್ವಯ ಬೇನಾಮಿ ಆಸ್ತಿ ಜಪ್ತಿ ಮಾಡುವ ಅಧಿಕಾರ ಇಲಾಖೆಗೆ ಇದೆ ಎಂದೂ ಮೂಲಗಳು ತಿಳಿಸಿವೆ. ಐ.ಟಿ ಇಲಾಖೆಯ ಬೆಂಗಳೂರು ಕಚೇರಿಯಲ್ಲಿ ಪ್ರತ್ಯೇಕ ವಿಭಾಗವನ್ನೂ ತೆರೆಯಲಾಗಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ











Click it and Unblock the Notifications