ಬೆಂಗಳೂರು ಏರ್ಫೋರ್ಟ್ ಟರ್ಮಿನಲ್ (2) 45ದಿನ ನಂತರ ಬಳಕೆಗೆ ಲಭ್ಯ
ಬೆಂಗಳೂರು, ನವೆಂಬರ್ 13: ಇತ್ತೀಚೆಗಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಬೃಹತ್ ಟರ್ಮಿನಲ್ 2 ಮುಂದಿನ ಒಂದೂವರೆ ತಿಂಗಳ ನಂತರ ಪ್ರಯಾಣಿಕರ ಬಳಕೆಗೆ ಮುಕ್ತವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಹುಕೋಟಿ ವೆಚ್ಚದಲ್ಲಿ ಎರಡು ಹಂತದಲ್ಲಿ ನಿರ್ಮಾಣವಾಗುತ್ತಿರುವ ಟರ್ಮಿನಲ್ 2 ಪೈಕಿ ಮೊದಲ ಹಂತ ಉದ್ಘಾಟನೆಗೊಂಡಿದೆ. ನವೆಂಬರ್ 11ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಮರುದಿನದಿಂದಲೇ ಟರ್ಮಿನಲ್ 2 ಬಳಕೆಗೆ ಲಭ್ಯವಾಗಲಿದೆ ಎಂದು ಊಹಿಸಲಾಗಿತ್ತು. ಈ ಆಸೆ ನಿರಾಸೆಯಾಗಿದೆ.
ಈ ಸಂಬಂಧ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ)ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರಿ ಮ್ಯಾರರ್ ಪ್ರತಿಕ್ರಿಯಿಸಿದ್ದಾರೆ. ವಾರ್ಷಿಕವಾಗಿ 25 ಮಿಲಿಯನ್ ಪ್ರಯಾಣಿಕರ ಸಾಮರ್ಥ್ಯ ಹೊಂದಿರುವ ಈ ಟರ್ಮಿನಲ್ 2ಅನ್ನು ಉಪಯೋಗಕ್ಕೆ ಇನ್ನೂ 30ರಿಂದ 45 ದಿನಗಳು ಬೇಕಾಗಬಹುದು ಎಂದು ತಿಳಿಸಿದ್ದಾರೆ.

ಜನರು ಸದ್ಯ ಕಣ್ತುಂಬಿಕೊಳ್ಳಬಹುದಷ್ಟೆ
ಕೆಐಎ ಟರ್ಮಿನಲ್ನಲ್ಲಿ ಸೆಕ್ಯೂರಿಟಿ ಸ್ಪೀಪ್ ಮಾಡುವ ಕೆಲಸ ಬಾಕಿ ಇರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಸಾರ್ವಜನಿಕ ಬಳಕೆಗೆ ಟರ್ಮಿನಲ್ 2 ಮುಕ್ತವಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಜನರು ಹೊಸ ಟರ್ಮಿನಲ್ ಬಳಕೆಗೆ ಕಾಯಬೇಕಿದ್ದು, ಸದ್ಯಕ್ಕೆ ಕಣ್ತುಂಬಿಕೊಳ್ಳಬಹುದಾಗಿದೆ.
ವಾರ್ಷಿಕವಾಗಿ ಒಟ್ಟು 2.5ಕೋಟಿ ಜನರನ್ನು ನಿರ್ವಹಿಸಬಹುದಾದ ಈ ಟರ್ಮಿನಲ್ ಅನ್ನು ಉದ್ಯಾನ ನಗರಿ ಎಂದು ಖ್ಯಾತವಾದ ಬೆಂಗಳೂರಿನ ಪ್ರತಿಬಿಂಬದಂತೆ ನಿರ್ಮಿಸಲಾಗಿದೆ. ಹಸಿರು ವಾಲ್ಗಳು, ವಿಶಾಲವಾದ ವಿನ್ಯಾಸ್, ವಿಶೇಷ ಲೈಟಿಂಗ್ಸ್, ನಿರ್ವಹಣೆಗೆ ಸುವ್ಯವಸ್ಥಿತೆಯನ್ನು ಒಳಗೊಂಡಿದೆ. ಆದರೆ ಸೆಕ್ಯೂರಿಟಿ ಸ್ಪೀಪ್ ಕೆಲಸವೊಂದು ಬಾಕಿ ಇದೆ. ಉಳಿದಂತೆ ಅತ್ಯಂತ ಸುಂದರವಾಗಿ ಇದನ್ನು ಸ್ಥಾಪಿಸಲಾಗಿದೆ.
ಎರಡು ಹಂತಗಳಲ್ಲಿ ಟರ್ಮಿನಲ್ 2 ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 13,000 ಕೋಟಿ ವೆಚ್ಚದಲ್ಲಿ ಟರ್ಮಿನಲ್ 2 ನಿರ್ಮಿಸಲಾಗಿದೆ. ಸರಿಸುಮಾರು 2.5 ಲಕ್ಷ ಚದರ ಮೀಟರ್ಗಳಷ್ಟು ವಿಶಾಲವಾಗಿದೆ. ಒಂದನೇ ಹಂತದ ಕಾರ್ಯ ಪೂರ್ಣಗೊಂಡಿದ್ದು, ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿದೆ. ಎರಡನೇ ಹಂತದಲ್ಲಿ ಟರ್ಮಿನಲ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.

ಈ ಎರಡನೇ ಹಂತದ ಟರ್ಮಿನಲ್ ಸುಮಾರು 4.41 ಲಕ್ಷ ಚದರ ಮೀಟರ್ ನಷ್ಟು ವಿಶಾಲವಾಗಿದೆ. ಟರ್ಮಿನಲ್ ಆಕರ್ಷಕವಾಗಿ, ವಿನೂತನವಾಗಿ ಕಾಣುವಂತೆ ಮಾಡಲು ಅಮೆರಿಕದ ವಾಸ್ತುಶಿಲ್ಪ ಸಂಸ್ಥೆ ಸ್ಕಿಡ್ಮೋರ್, ಓವಿಂಗ್ಸ್ ಮತ್ತು ಮೆರಿಲ್ ಸಂಸ್ಥೆಗಳು ಶ್ರಮಿಸಿವೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications