ಸಿದ್ದರಾಮಯ್ಯ ಸೇರಿ 5 ಜನರ ವಿರುದ್ಧ ಅನುಪಮಾ ಶೆಣೈ ದೂರು!
ಬೆಂಗಳೂರು, ಅ. 06 : ವರ್ಗಾವಣೆ ವಿಚಾರದಲ್ಲಿ ನನಗೆ ಅನ್ಯಾಯವಾಗಿದೆ ಎಂದು ಕೂಡ್ಲಿಗಿಯ ಹಿಂದಿನ ಡಿವೈಎಸ್ ಪಿ ಅನುಪಮಾ ಶೆಣೈ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಇನ್ನಿತರರ ವಿರುದ್ಧ ದೂರು ದಾಖಲಿಸಿದ್ದಾರೆ.
ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಗೆ ಮಂಗಳವಾರ(ಅ.4) ಅನುಪಮಾ ಶೆಣೈ ಅವರು ದೂರು ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಜಿಪಿ ಓಂಪ್ರಕಾಶ್, ಬಳ್ಳಾರಿ ಸಂಸದ ಶ್ರೀರಾಮುಲು, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಪರಮೇಶ್ವರ ನಾಯಕ್, ಎಸ್ಪಿ ಚೇತನ್ ಹಾಗೂ ಇನ್ನಿಬ್ಬರು ಅಧಿಕಾರಿಗಳು ತನಗೆ ವರ್ಗಾವಣೆ ವಿಚಾರದಲ್ಲಿ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅನುಪಮಾ ಶೆಣೈ ಅವರು ನೀಡಿರುವ ದೂರನ್ನು ಪಡೆದಿರುವ ಹಲಸೂರು ಠಾಣೆ ಪೊಲೀಸರು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಡಿವೈಎಸ್ ಪಿಯಾಗಿದ್ದ ಅನುಪಮಾ ಶೆಣೈ ಅವರನ್ನು 2016ರ ಜನವರಿಯಲ್ಲಿ ವಿಜಯಪುರದ ಇಂಡಿಯ ಡಿವೈಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿತ್ತು.
ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ನಾಯಕ್ ಅವರ ಫೋನ್ ಕರೆ ಸ್ವೀಕರಿಸದ ಕಾರಣ ವರ್ಗಾವಣೆ ಮಾಡಲಾಗಿದೆ ಎಂಬ ವಿವಾದ ಎದ್ದಿತ್ತು. ಸಚಿವ ಪರಮೇಶ್ವರ ನಾಯಕ್ ಅವರ ವಿರುದ್ಧ ಸರಣಿ ಪ್ರತಿಭಟನೆಗಳು ನಡೆದಿದ್ದವು.
ಹಲವು ಒತ್ತಡಕ್ಕೆ ಮಣಿದಿದ್ದ ಸರ್ಕಾರ ಕೂಡ್ಲಗಿಯಲ್ಲಿ ಪುನಃ ಅನುಪಮಾ ಅವರು ಕಾರ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಟ್ಟಿತ್ತು.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications