ಕಾವೇರಿಗಾಗಿ ಬೆಂಗಳೂರು ಬಂದ್ ಗೆ ಬಿಜೆಪಿ ಬೆಂಬಲದ ಕುರಿತು ಸಿ ಟಿ ರವಿ ಹೇಳಿದ್ದೇನು?
ಬೆಂಗಳೂರು, ಸೆಪ್ಟೆಂಬರ್ 25: ಕಾವೇರಿ ನೀರಿಗಾಗಿ ಹೋರಾಟ ತೀವ್ರಗೊಂಡಿದ್ದು, ಸರ್ವ ಸಂಘಟನೆಗಳು ಸಹ ಬೆಂಗಳೂರು ಬಂದ್ ಗೆ ಕರೆ ಕೊಟ್ಟಿದೆ. ಈ ಸಂಬಂಧ ಮಂಗಳವಾರ ನಡೆಯುವ ಬೆಂಗಳೂರು ಬಂದ್ಗೆ ಬಿಜೆಪಿ ಬೆಂಬಲ ಕೊಡಲಿದೆ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇರುವಾಗ, ಮಂಡ್ಯದ ರೈತರ ಸಮಸ್ಯೆ ಅರ್ಥ ಮಾಡಿಕೊಳ್ಳದೆ, ಬೆಂಗಳೂರಿನ ಕುಡಿಯುವ ನೀರಿನ ಪರಿಸ್ಥಿತಿಯನ್ನೂ ಅರ್ಥ ಮಾಡದೆ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುತ್ತಿರುವುದು ಖಂಡನೀಯ ಎಂದು ಹೇಳಿದರು.

ನೀರಿನ ವಿಚಾರ, ರಾಜ್ಯದ ಹಿತಾಸಕ್ತಿ ಸಂದರ್ಭದಲ್ಲಿ ಬಿಜೆಪಿ ನೆರವಿಗೆ ನಿಲ್ಲಲಿದೆ ಎಂದು ನಮ್ಮ ನಾಯಕರಾದ ಯಡಿಯೂರಪ್ಪನವರು ತಿಳಿಸಿದ್ದಾರೆ. ಕಬ್ಬು ಬೆಳೆಗಾರರ ಸಂಘಟನೆ ನೇತೃತ್ವದಲ್ಲಿ ಕೆಲವು ಸಂಘಟನೆಗಳು ಬಂದ್ ಕರೆ ಕೊಟ್ಟಿವೆ. ಇದನ್ನು ಬಿಜೆಪಿ ಬೆಂಬಲಿಸಲಿದ್ದು, ನಮ್ಮೆಲ್ಲ ಕಾರ್ಯಕರ್ತರು ಇದರಲ್ಲಿ ಭಾಗವಹಿಸುತ್ತಾರೆ. ಬೆಂಗಳೂರಿನ ಶಾಂತಿಯನ್ನು ಕಾಪಾಡಿಕೊಂಡು ಚಳವಳಿಯಲ್ಲಿ ಪಾಲ್ಗೊಳ್ಳಲು ಅವರು ತಿಳಿಸಿದರು.
ವಾಡಿಕೆಗಿಂತ ಶೇ 42ರಷ್ಟು ಮಳೆ ಕಡಿಮೆ ಇದೆ ಎಂದು ಸರಕಾರವೇ ತಿಳಿಸಿದೆ. ಈಗ ಕೆಆರ್ ಎಸ್ನಲ್ಲಿ ಕೇವಲ 20 ಟಿಎಂಸಿ ನೀರಿದೆ ಎಂಬ ಮಾಹಿತಿ ಇದೆ. ಈಗ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ಸ್ ನೀರು ಬಿಟ್ಟರೆ 7 ಟಿಎಂಸಿ ಖಾಲಿ ಆಗಲಿದೆ. ಉಳಿಯುವುದು 13 ಟಿಎಂಸಿ. ಡೆಡ್ ಸ್ಟೋರೇಜ್ 7 ಟಿಎಂಸಿ. ಉಳಿದ 6 ಟಿಎಂಸಿ ಬೆಂಗಳೂರಿನ ಜನರ ಕುಡಿಯುವ ನೀರಿಗೆ 3 ತಿಂಗಳಿಗೆ ಸಾಕಾಗದು ಎಂದು ಸಿ.ಟಿ.ರವಿ ಅವರು ಪ್ರಶ್ನೆಗೆ ಉತ್ತರಿಸುವ ವೇಳೆ ವಿಶ್ಲೇಷಿಸಿದರು.
ರಾಜ್ಯದ ಕಾಂಗ್ರೆಸ್ ಸರಕಾರದಿಂದ ನೀರು ಬಿಡುವುದಿಲ್ಲ ಎಂಬ ಗಟ್ಟಿ ತೀರ್ಮಾನವನ್ನು ನಿರೀಕ್ಷೆ ಮಾಡಿದ್ದೆವು. ಅಂಥ ತೀರ್ಮಾನ ತೆಗೆದುಕೊಂಡರೆ 7 ಕೋಟಿ ಜನರು ನಿಮ್ಮ ಜೊತೆಗೆ ಇರುತ್ತಾರೆ ಎಂದು ಸರ್ವಪಕ್ಷ ಸಭೆಯಲ್ಲಿ ಸ್ಪಷ್ಟಪಡಿಸಿದ್ದೇವೆ. ನಮ್ಮಲ್ಲಿ ಕುಡಿಯುವ ನೀರಿಗೇ ಸಮಸ್ಯೆ ಇದೆ. ತಮಿಳುನಾಡಿನ ಮೆಟ್ಟೂರು ಅಣೆಕಟ್ಟಿನಲ್ಲಿ ನೀರಿದ್ದರೂ ಅವರು ಬೆಳೆಗೆ ನೀರು ಕೇಳುತ್ತಿದ್ದಾರೆ. ಹಾಗಿದ್ದಾಗ ಯೋಚಿಸಿ ನಿರ್ಧಾರ ಮಾಡಬೇಕಿತ್ತಲ್ಲವೇ ಎಂದು ಕೇಳಿದರು.
ಇವರು ಕಾಕಾ ಪಾಟೀಲ್ ನಿನಗೂ ಫ್ರೀ ಎಂದಂತೆ ಸ್ಟಾಲಿನ್ ನಿನ್ಗೂ ಫ್ರೀ ಎಂದು ನೀರು ಬಿಡುತ್ತಿದ್ದಾರೆ. ಈ ಬೇಜವಾಬ್ದಾರಿ ನಿಲುವಿನ ವಿರುದ್ಧ ವಿವಿಧ ಸಂಘಟನೆಗಳು ಕರೆಕೊಟ್ಟ ಹೋರಾಟಕ್ಕೆ ನಾವು ಬೆಂಬಲ ಕೊಡುತ್ತೇವೆ ಎಂದು ತಿಳಿಸಿದರು.
ನಮ್ಮ ನೀರು ನಮ್ಮ ಹಕ್ಕು ಚಳವಳಿಯನ್ನು ಕಾಂಗ್ರೆಸ್ಸೇ ಮಾಡಿತ್ತಲ್ಲವೇ? ಎಲ್ಲಿದೆ ನಮ್ಮ ಹಕ್ಕು ಶಿವಕುಮಾರ್ ಅವರೇ? ಜನ ನಿಮಗೆ ಅಧಿಕಾರ ಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ನೀರು ಬಿಡುವುದಿಲ್ಲ ಎಂದು ತೀರ್ಮಾನ ತೆಗೆದುಕೊಳ್ಳಿ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸುತ್ತ ಸವಾಲೆಸೆದರು. ತಮಿಳುನಾಡು ಕೇಳುವ ಮೊದಲೇ ನೀರು ಬಿಟ್ಟಿದ್ದೀರಲ್ಲ? ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಕೇಳಿದರು.
ಇಂಡಿಯ ಮೈತ್ರಿಕೂಟವನ್ನು ಗಟ್ಟಿಯಾಗಿ ಉಳಿಸಿಕೊಳ್ಳಲು ರಾಜ್ಯದ ಜನರ ಹಿತವನ್ನು ಬಲಿ ಕೊಟ್ಟಿದ್ದಾರೆ. ಕಾಂಗ್ರೆಸ್ಸಿನ ಹೈಕಮಾಂಡಿನ ಮೆಚ್ಚುಗೆ ಪಡೆಯಲು ನೀವು ಕೇಳುವ ಮೊದಲೇ ನೀರು ಬಿಟ್ಟಿದ್ದೀರಲ್ಲವೇ ಎಂದು ಪ್ರಶ್ನಿಸಿದರು. ಸಾಕಷ್ಟು ನೀರಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ ಎಂದು ಹೇಳಿದರು.
ಅಕ್ರಮ ಗೋಹತ್ಯೆಗೆ ಕಾಂಗ್ರೆಸ್ ಸರಕಾರ ಕುಮ್ಮಕ್ಕು ಕೊಡುವಂತಿದೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಆಡಳಿತ ನಡೆಸುವ ಕಾಂಗ್ರೆಸ್ ಕೃಪಾಕಟಾಕ್ಷ ಇಲ್ಲದೆ ಇಂಥ ಬೃಹತ್ ಗೋಮಾಂಸ ಸಾಗಾಟ ವ್ಯವಸ್ಥೆ ನಿರ್ಮಾಣ ಆಗಲು ಅಸಾಧ್ಯ. ಹಾಗಿದ್ದರೆ ಗೋಹತ್ಯಾ ನಿಷೇಧ ಕಾಯ್ದೆ ಯಾಕೆ ಇಟ್ಟುಕೊಂಡಿದ್ದೀರಿ ಎಂದು ಕೇಳಿದರು. ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಟೀಕಿಸಿದರು.
ರಾಜಕಾರಣ ಎಂದರೆ ಕೇವಲ ಗಣಿತ (ಮ್ಯಾಥಮೆಟಿಕ್ಸ್) ಅಲ್ಲ. ಅದರ ಹಿಂದೆ ಕೆಮಿಸ್ಟ್ರಿ ಇರುತ್ತದೆ. ಆ ಕೆಮಿಸ್ಟ್ರಿ ಕಾರ್ಯಕರ್ತರ ಹಂತದಲ್ಲೇ ಸಮನ್ವಯ ಆಗುವ ರೀತಿಯಲ್ಲಿ ನೋಡಿಕೊಳ್ಳುವ ಜವಾಬ್ದಾರಿ ಎರಡೂ ಪಕ್ಷಗಳಿಗಿದೆ ಎಂದು ಅವರು ಬಿಜೆಪಿ- ಜೆಡಿಎಸ್ ನಡುವಿನ ಮೈತ್ರಿ ಕುರಿತು ಪ್ರಶ್ನೆಗೆ ಉತ್ತರ ಕೊಟ್ಟರು. ಈಗ ಎನ್ಡಿಎ ಭಾಗವಾಗಿ ಜೆಡಿಎಸ್ ಅನ್ನು ಸೇರಿಸಿಕೊಂಡಿದ್ದಾರೆ ಎಂದು ವಿವರಿಸಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications