Vande Bharat Express: ಬೆಂಗಳೂರು- ಬೆಳಗಾವಿ ವಂದೇ ಭಾರತ್ ರೈಲು ಸಂಚಾರ ಶೀಘ್ರ ಆರಂಭ
ಹುಬ್ಬಳ್ಳಿ, ಫೆಬ್ರವರಿ 11: ಅತಿ ಶೀಘ್ರದಲ್ಲಿಯೇ ಬೆಂಗಳೂರು-ಬೆಳಗಾವಿ ಮಧ್ಯೆ ವೆಂದೇ ಭಾರತ್ ರೈಲು ಸಂಚರಿಸಲಿದೆ. ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಮತ್ತು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಸಭೆ ಸೇರಿ ಈ ಕುರಿತು ಚರ್ಚೆ ನಡೆಸಿದ್ದಾರೆ.
ಸಚಿವ ಪ್ರಲ್ಹಾದ ಜೋಶಿ ಅವರ ದೆಹಲಿ ಸಂಸದೀಯ ಕಚೇರಿಯಲ್ಲಿ ಸಚಿವದ್ವಯರು ಮತ್ತು ಮಾಜಿ ಸಿಎಂ ಸೇರಿ ಬೆಂಗಳೂರಿನಿಂದ ಬೆಳಗಾವಿವರೆಗೆ ಒಂದೇ ಭಾರತ್ ರೈಲು ಸಂಚಾರ ಕುರಿತ ಸಾಧಕ-ಬಾಧಕ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು. ವಂದೇ ಭಾರತ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸುವ ಕುರಿತು ಈ ಹಿಂದೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಬೆಳಗಾವಿ ಶಾಸಕ ಅಭಯ ಪಾಟೀಲ್ ಸಹ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಸಚಿವ ಪ್ರಲ್ಹಾದ ಜೋಶಿ ಅವರು ಹುಬ್ಬಳ್ಳಿಯ ತಮ್ಮ ಲೋಕಸಭಾ ಕ್ಷೇತ್ರದ ಕಾರ್ಯಾಲಯದಲ್ಲಿ ನೈರುತ್ಯ ವಲಯದ ರೇಲ್ವೆ ಜನರಲ್ ಮ್ಯಾನೇಜರ್ , DRM ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬೆಂಗಳೂರಿನಿಂದ ಬೆಳಗಾವಿವರೆಗೆ ವಂದೇ ಭಾರತ್ ರೈಲು ಸಂಚಾರ ವಿಸ್ತರಣೆ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದರು. ವಂದೇ ಭಾರತ್ ರೈಲು ಬೆಳಗ್ಗೆ ಬೆಳಗಾವಿಯಿಂದ ಹೊರಟು ಬೆಂಗಳೂರು ತಲುಪಿ ಮತ್ತೆ ಬೆಂಗಳೂರಿಂದ ಬೆಳಗಾವಿಗೆ ರಾತ್ರಿ ತಲುಪುವ ಹಾಗೆ ವೇಳೆ ನಿಗದಿಗೊಳಿಸಿ ಎಂದು ಸಚಿವ ಪ್ರಲ್ಹಾದ ಜೋಶಿ ನೈಋತ್ಯ ರೈಲ್ವೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.
ರೈಲ್ವೆ ಅಧಿಕಾರಿಗಳು ತಾಂತ್ರಿಕ ಅಂಶಗಳನ್ನು ವಿಶ್ಲೇಷಿಸಿ, ಸಾಧಕ-ಬಾಧಕಗಳನ್ನು ಅವಲೋಕಿಸಿ ವರದಿ ಸಲ್ಲಿಸಿದ್ದು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ವರದಿ ಪರಿಗಣಿಸಿ ಬೆಂಗಳೂರು -- ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ತೋರಿದ್ದಾರೆ. ವೇಳಾಪಟ್ಟಿ ಶೀಘ್ರ ಬಿಡುಗಡೆ: ಅತೀ ಶೀಘ್ರದಲ್ಲಿಯೇ ಬೆಳಗಾವಿ - ಬೆಂಗಳೂರಿನ ಮಧ್ಯೆ ವಂದೇ ಭಾರತ್ ರೈಲಿನ ಆರಂಭದ ವೇಳಾಪಟ್ಟಿ ಬಿಡುಗಡೆಯಾಗಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಈ ರೈಲು ಸಂಚಾರದಿಂದ ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಭಾಗದ ಜನತೆಗೆ ಬೆಂಗಳೂರು ಪ್ರಯಾಣಕ್ಕೆ ಅನುಕೂಲವಾಗಲಿದೆ ಎಂದ ಸಚಿವರು, ನಮ್ಮ ಮನವಿಗೆ ಸ್ಪಂದಿಸಿ ವಂದೇ ಭಾರತ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸಲು ಸಮ್ಮತಿ ಸೂಚಿಸಿದ ಕೇಂದ್ರ ರೈಲ್ವೆ ಸಚಿವರಿಗೆ ಧನ್ಯವಾದ ಅರ್ಪಿಸುವೆ ಎಂದಿದ್ದಾರೆ.
-
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ -
South Western Railway: ಹುಬ್ಬಳ್ಳಿಯಿಂದ ರಾಮೇಶ್ವರಂಗೆ ವಿಶೇಷ ರೈಲು ಸಂಚಾರ; ಮಾರ್ಚ್ 21ರಿಂದ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications