ಬೆಂಗಳೂರು ಸಭ್ಯ ಕುಡುಕರ ರಾಜಧಾನಿ ಎಂದ ಅಬಕಾರಿ ಸಚಿವ
ಬೆಂಗಳೂರು, ಆಗಸ್ಟ್, 02: ಸಚಿವ ಸ್ಥಾನ ದಕ್ಕಿದ ಬಳಿಕ ರಾಜ್ಯ ಅಬಕಾರಿ ಸಚಿವ ಎಚ್ ವೈ ಮೇಟಿ ಮಾತನಾಡಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಹುಲ್ಲಪ್ಪ ಯಮನಪ್ಪ ಮೇಟಿ(68) ಅಬಕಾರಿ ಇಲಾಖೆ 'ಮದ್ಯರಾತ್ರಿ'ಯನ್ನು ಬೆಂಗಳೂರಿನಲ್ಲಿ ಒಂದು ಗಂಟೆವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಕುಡುಕರ ಪರವಾಗಿ ಮಂಗಳವಾರ ಮಾತನಾಡಿರುವ ಸಚಿವ ಮೇಟಿ, ಬೆಂಗಳೂರಿನ ಕುಡುಕರು ಸಭ್ಯರು. ಅವರು ಕುಡಿದು ಗಲಾಟೆ ಮಾಡುವುದಿಲ್ಲ ಎಂದು ವಾದ ಮುಂದಿಟ್ಟಿದ್ದಾರೆ.[ಈ ವಿಷಯದಲ್ಲಿ ಕರ್ನಾಟಕಕ್ಕಿಂತ ಬಿಹಾರವೇ ಉತ್ತಮ!]

ಬೆಂಗಳೂರಿನ ಕುಡುಕರು ಸುಶಿಕ್ಷಿತರಾಗಿದ್ದು, ಗಲಾಟೆ ಮಾಡಿ ಯಾರಿಗೂ ತೊಂದರೆ ಕೊಡುವುದಿಲ್ಲ. ಹಳ್ಳಿಯ ಕುಡುಕರು ಕುಡಿದು, ಹಾದಿ ಬೀದಿಯಲ್ಲಿ ಬೀಳುತ್ತಾರೆ ಎಂದು ವಿವಾದಾತ್ಮಕ ಹೇಳಿಕೆಯನ್ನು ಸಹ ನೀಡಿದ್ದಾರೆ.
ಅಬಕಾರಿ ಸಚಿವರು ಹೇಳಿದ್ದಿಷ್ಟು
* ರಾಜ್ಯದ ಇತರೆ ಜಿಲ್ಲೆಯಲ್ಲಿ ರಾತ್ರಿ ಒಂದು ಗಂಟೆವರೆಗೆ ಮದ್ಯದ ಅಂಗಡಿ ತೆರೆದಿರಲು ಅವಕಾಶ ಇಲ್ಲ.[ಬ್ಲಾಕ್ ಲೇಬೆಲ್, ರೇಣುಕಾಚಾರ್ಯ ಇನ್ ಟ್ರಬಲ್]
* ಹೊಸ ಬಾರ್ ಲೈಸನ್ಸ್ ನೀಡುವ ಹಾಗೂ ಪಾನ ನಿಷೇಧ ಜಾರಿ ಮಾಡುವ ಕುರಿತು ಯಾವುದೇ ಪ್ರಸ್ತಾವನೆ ಇಲ್ಲ.
* ಮದ್ಯದ ಅಂಗಡಿಯಲ್ಲಿ ಎಂಆರ್ಪಿ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿವೆ. ಈ ಬಗ್ಗೆ ಪರಿಹಾರ ಕ್ರಮ ತೆಗೆದುಕೊಳ್ಳಲಾಗುವುದು.[ತಾಜಾತಾಜಾ ಬೀರ್ ಗೆ ರೇಣುಕಾಚಾರ್ಯ ಚಿಯರ್ಸ್]
* ಎಲ್ಲ ಮದ್ಯದ ಅಂಗಡಿಯಲ್ಲಿ ದರ ಪಟ್ಟಿ ಕಡ್ಡಾಯಗೊಳಿಸಲಾಗುತ್ತಿದೆ. ಅದರಂತೆ ವ್ಯಾಪಾರ ವಹಿವಾಟು ನಡೆಯಬೇಕು ಎಂದು ಹೇಳಿದರು.
ಆದರೆ ಏನೇ ಹೇಳಿ ಬಿಜೆಪಿ ಸರ್ಕಾರದಲ್ಲಿ ಅಬಕಾರಿ ಮಂತ್ರಿಯಾಗಿದ್ದ ರೇಣುಕಾಚಾರ್ಯ ಅವರಷ್ಟು ಸುದ್ದಿಯನ್ನು ಮೇಟಿ ಮಾಡುತ್ತಿಲ್ಲ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications