Bengaluru-Bidar Train: ಬೆಂಗಳೂರಿನಿಂದ ಗಡಿ ಜಿಲ್ಲೆಗೆ ವಿಶೇಷ ರೈಲು ಸೇವೆ, ವೇಳಾಪಟ್ಟಿ
ಬೆಂಗಳೂರು, ಡಿಸೆಂಬರ್ 01: ನೈಋತ್ಯ ರೈಲ್ವೆ ಇಲಾಖೆಯು ಕಳೆದ ವಿವಿಧ ಹಬ್ಬಗಳ ಪ್ರಯುಕ್ತ ವಿಶೇಷ ರೈಲುಗಳ ಕಾರ್ಯಾಚರಣೆ ಮಾಡಿತ್ತು. ಅದೇ ರೀತಿ ಮುಂದಿನ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಶಾಲೆ-ಕಾಲೇಜುಗಳಿಗೆ ರಜೆ ಇರುತ್ತದೆ. ಹೀಗಾಗಿ ಪ್ರಯಾಣಿಕರ ಸಂಚಾರ, ದಟ್ಟಣೆ ಹೆಚ್ಚಿರುವ ಕಾರಣ ಬೆಂಗಳೂರಿನಿಂದ ರಾಜ್ಯದ ಗಡಿ ಜಿಲ್ಲೆಗೆ ವಿಶೇಷ ರೈಲು ಸೇವೆ ಒದಗಿಸುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ರೈಲಿನ ಸೇವೆ, ದಿನಾಂಕ, ಸಂಚಾರ ಮಾರ್ಗ, ನಿಲುಗಡೆ ವಿವರ ಇಲ್ಲಿದೆ.
ಕ್ರಿಸ್ಮಸ್ ಪ್ರಯುಕ್ತ ರಾಜಧಾನಿ ಬೆಂಗಳೂರು ಕಂಟೋನ್ಮೆಂಟ್ ಮತ್ತು ಗಡಿ ಜಿಲ್ಲೆ ಬೀದರ್ ಗೆ ವಿಶೇಷ ಎಕ್ಸ್ಪ್ರೆಸ್ ರೈಲು ಒಂದು ಟ್ರಿಪ್ ವಿಶೇಷ ರೈಲು ಕಾರ್ಯಾಚರಣೆ ಮಾಡಲಾಗುತ್ತಿದೆ. ಈ ಮೂಲಕ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲಾಗುತ್ತದೆ. ಇದು ಒಂದು ಟ್ರಿಪ್ ಸೇವೆ ಮಾತ್ರ ಆಗಿರುತ್ತದೆ. ಪ್ರಯಾಣಿಕರು ಮುಂಗಡ ಬುಕ್ಕಿಂಗ್ ಮಾಡಬಹುದು.

ದಿನಾಂಕ 24.12.2025 (ಬುಧವಾರ) ರಂದು ಬೆಂಗಳೂರು ಕಂಟೋನ್ಮೆಂಟ್ - ಬೀದರ್ ವಿಶೇಷ ಎಕ್ಸ್ಪ್ರೆಸ್ ರೈಲು (06291) ಬೆಂಗಳೂರು ಕಂ. ನಿಲ್ದಾಣದಿಂದ ರಾತ್ರಿ 9:15ಕ್ಕೆ ಹೊರಡುತ್ತದೆ. ಮರುದಿನ ಬೆಳಗ್ಗೆ 11:30ಕ್ಕೆ ಬೀದರ್ ರೈಲು ನಿಲ್ದಾವನ್ನು ತಲುಪಲಿದೆ. ಮರಳಿ ಅದೇ ದಿಕ್ಕಿನಲ್ಲಿ ಬೀದರ್ ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ ಪ್ರೆಸ್ ರೈಲು (06292) ದಿನಾಂಕ 25.12.2025 (ಗುರುವಾರ) ಬೀದರ್ನಿಂದ ಮಧ್ಯಾಹ್ನ 1:00ಕ್ಕೆ ಹೊರಡುತ್ತದೆ. ಮರುದಿನ ಬೆಳಗಿನ ಜಾವ 4:00ಕ್ಕೆ ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಕ್ಕೆ ಬಂದು ಸೇರಲಿದೆ.
ಈ ಈ ವಿಶೇಷ ರೈಲು ಮಾರ್ಗ ಮಧ್ಯದಲ್ಲಿ ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ವಾಡಿ, ಶಹಾಬಾದ, ಕಲಬುರಗಿ ಮತ್ತು ಹುಮನಾಬಾದ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
ಈ ವಿಶೇಷ ರೈಲು 22 ಬೋಗಿಗಳನ್ನು ಒಳಗೊಂಡಿರಲಿದೆ, ಇದರಲ್ಲಿ ಒಂದು ಎಸಿ 2-ಟೈರ್, ಎರಡು ಎಸಿ 3-ಟೈರ್, ಹನ್ನೊಂದು ಸ್ವೀಪರ್ ಕ್ಲಾಸ್, ಆರು ಜನರಲ್ ಸೆಕೆಂಡ್ ಕ್ಲಾಸ್, ಮತ್ತು ಎರಡು ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ. ಹೆಚ್ಚಿನ ಮಾಹಿತಿಗೆ ಪ್ರಯಾಣಿಕರು ಅಧಿಕೃತ ವೆಬ್ಸೈಟ್ enquiry.indianrail.gov.in ಗೆ ಸಂಪರ್ಕಿಸಬೇಕು. ಇಲ್ಲವೇ ಸಹಾಯವಾಣಿ 139 ಗೆ ಕರೆ ಮಾಡಬಹುದು ಎಂದು ಪ್ರಕಟಣೆಯಲ್ಲಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications