Gold: ಕರ್ನಾಟಕಕ್ಕೆ ಗೋಲ್ಡನ್ ಜಾಕ್ಪಾಟ್: ಈ ಜಿಲ್ಲೆಯಲ್ಲಿ 10 ಸಾವಿರ ಎಕರೆಯಲ್ಲಿ ಬಂಗಾರವೋ ಬಂಗಾರ!
ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ಆಕಾಶ ಮುಟ್ಟುತ್ತಿದೆ. ಅದರಲ್ಲೂ, 2025ರ ಆರಂಭದಿಂದಲೂ ಹಳದಿ ಲೋಹದ ದರ ನಿರಂತರವಾಗಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರು ಚಿನ್ನ ಖರೀದಿಸುವುದು ಕನಸು ಎಂಬಂತಾಗಿದೆ. ಈಗಾಗಲೇ ಚಿನ್ನದ ಬೆಲೆ ಪ್ರತಿ ಗ್ರಾಂಗೆ 10 ಸಾವಿರ ರೂಪಾಯಿ ದಾಟಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಅರ್ಥಶಾಸ್ತ್ರಜ್ಞರು ಅಭಿಪ್ರಾಯಪಟ್ಟಿದ್ದಾರೆ.
10 ಗ್ರಾಂ ಚಿನ್ನದ ದರ 1 ಲಕ್ಷ ಗಡಿ ದಾಟಿ ದಾಖಲೆ ಬರೆದಿದ್ದು, ಸದ್ಯ ಚಿನ್ನದ ಬಗ್ಗೆಯೇ ಚರ್ಚೆಯಾಗುತ್ತಿದೆ. ಆದರೆ, ಚಿನ್ನದ ಬೆಲೆ ಏರಿಕೆ ನಡುವೆ ಕರ್ನಾಟಕಕ್ಕೆ ಭರ್ಜರಿ ಜಾಕ್ ಪಾಟ್ ಹೊಡೆದಿದೆ. ಪ್ರವಾಸಿಗರ ಸ್ವರ್ಗ ಎಂದೇ ಹೆಸರುವಾಸಿಯಾಗಿರುವ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇದೀಗ ಚಿನ್ನದ ಬೇಟೆಯ ಸದ್ದು ಕೇಳಿಬರುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಸಾವಿರಾರು ಎಕರೆ ದಟ್ಟ ಅರಣ್ಯ ಮತ್ತು ಕೃಷಿ ಭೂಮಿಯಲ್ಲಿ ಚಿನ್ನದ ನಿಕ್ಷೇಪಕ್ಕಾಗಿ ಶೋಧ ನಡೆಸಲು ಬೆಂಗಳೂರು ಮೂಲದ ಕಂಪನಿಯೊಂದು ಸಿದ್ಧತೆ ನಡೆಸಿದೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ 10,100 ಎಕರೆ ಜಾಗದಲ್ಲಿ ಬಂಗಾರ ಇರುವ ನಿಕ್ಷೇಪ ಪತ್ತೆಯಾಗಿದೆ. ಈಗಾಗಲೇ ತರೀಕೆರೆ ತಾಲೂಕಿನ ಸಾವಿರಾರು ಎಕರೆ ದಟ್ಟ ಅರಣ್ಯ ಮತ್ತು ಕೃಷಿ ಭೂಮಿಯಲ್ಲಿ ಚಿನ್ನದ ನಿಕ್ಷೇಪಕ್ಕಾಗಿ ಶೋಧ ನಡೆಸಲು ಬೆಂಗಳೂರು ಮೂಲದ ಕಂಪನಿಯೊಂದು ಸಿದ್ಧತೆ ನಡೆಸಿದೆ. ಗುರುತಿಸಿರುವ ಪ್ರದೇಶದಲ್ಲಿ ಚಿನ್ನಕ್ಕಾಗಿ ಮತ್ತಷ್ಟು ಪರೀಕ್ಷೆಗಳನ್ನು ನಡೆಸಲು ಡ್ರಿಲ್ಲಿಂಗ್ ಕೆಲಸಗಳನ್ನು ಮಾಡಲು ಅವಕಾಶ ಕೊಡಬೇಕಾಗಿ ಕೋರಿದೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ವ್ಯಾಪ್ತಿಗೆ ಬರುವ ದಟ್ಟ ಅರಣ್ಯ ಪ್ರದೇಶದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಅಡಗಿದೆ ಎಂಬುದು ವರದಿಯಾಗಿದೆ. ಬೆಂಗಳೂರು ಮೂಲದ 'ಆರಂ ಜಿಯೋ ಎಕ್ಸ್ಪ್ಲೋರೇಷನ್ ಪ್ರೈವೇಟ್ ಲಿಮಿಟೆಡ್' ಎಂಬ ಖಾಸಗಿ ಕಂಪನಿ, ಈ ಪ್ರದೇಶದಲ್ಲಿ ಚಿನ್ನದ ನಿಕ್ಷೇಪ ಶೋಧನೆಗೆ ಮುಂದಾಗಿದೆ. ಆರಂ ಜಿಯೋ ಕಂಪನಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಈಗಾಗಲೇ ಸಂಯೋಜಿತ ಪರವಾನಗಿ ನೀಡಿದೆ.
ಈ ಪರವಾನಗಿಯ ಅನ್ವಯ, ಕಂಪನಿಯು ಒಟ್ಟು 10,082 ಎಕರೆಗಳಷ್ಟು ವಿಶಾಲವಾದ ಪ್ರದೇಶದಲ್ಲಿ ಚಿನ್ನದ ನಿಕ್ಷೇಪಕ್ಕಾಗಿ ಸಮೀಕ್ಷೆ ಮತ್ತು ಶೋಧ ಕಾರ್ಯ ನಡೆಸಲಿದೆ. ಆತಂಕಕಾರಿ ವಿಷಯವೆಂದರೆ, ಈ ಬೃಹತ್ ಪ್ರದೇಶದಲ್ಲಿ ಸುಮಾರು 5,600 ಎಕರೆ ದಟ್ಟ ಅರಣ್ಯ ಪ್ರದೇಶವೂ ಸೇರಿದೆ. ಉಳಿದ 3,600 ಎಕರೆ ಕೃಷಿ ಭೂಮಿಯಾಗಿದೆ. ಈ ಹಿಂದಿನ ಅಧ್ಯಯನಗಳ ಪ್ರಕಾರ, ಈ ಪ್ರದೇಶದಲ್ಲಿ ಚಿನ್ನದ ಅದಿರಿನ ಪ್ರಮಾಣ ಅತ್ಯಂತ ಹೆಚ್ಚಳವಾಗಿದೆ. ಇನ್ನೂ ಪ್ರತಿ ಟನ್ ಅದಿರಿನಲ್ಲಿ 19 ಗ್ರಾಂನಿಂದ ಹಿಡಿದು 80 ಗ್ರಾಂಗಳವರೆಗೆ ಚಿನ್ನ ಸಿಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಇನ್ನೂ ಸಿಂಗನಮನೆ, ತಂಬಾಡಿಹಳ್ಳಿ, ಗೋಣಿಬೀಡು ಮತ್ತು ಹೊಸೂರಿನ ಹೊನ್ನುಹಟ್ಟಿ ಎಂಬ ಸ್ಥಳಗಳಲ್ಲಿ ಹಿಂದೆ ಚಿನ್ನಕ್ಕಾಗಿ ಗಣಿಗಾರಿಕೆ ನಡೆದ ಕುರುಹುಗಳಿವೆ ಎಂದು ಕಂಪನಿಯು ಸಲ್ಲಿಸಿರುವ ದಾಖಲೆಗಳಲ್ಲಿ ಉಲ್ಲೇಖಿಸಿದೆ. 10,100 ಎಕರೆ ಜಾಗದಲ್ಲಿ 5,600 ಎಕರೆ ಜಾಗವು ಪಶ್ಚಿಮ ಘಟ್ಟಗಳ ಅರಣ್ಯ ಪ್ರದೇಶದ ವ್ಯಾಪ್ತಿಗೆ ಬರುತ್ತದೆ. ಆ 10,100 ಎಕರೆಯಲ್ಲಿ ಚಿನ್ನದ ನಿಕ್ಷೇಪ ಇರುವ ಬಗ್ಗೆ ಮೇಲ್ನೋಟಕ್ಕೆ ಹಲವಾರು ಆಧಾರಗಳು ಸಿಕ್ಕಿದ್ದು, ಅದನ್ನು ನಿಖರವಾಗಿ ತಿಳಿಯಲು ಡ್ರಿಲ್ಲಿಂಗ್ ಗೆ ಅವಕಾಶ ಕಲ್ಪಿಸಬೇಕು ಎಂದು ಕಂಪನಿ ಕೋರಿದೆ. ಆದರೆ, ಈ ಬಗ್ಗೆ ಕೇಂದ್ರ ಪರಿಸರ ಇಲಾಖೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಲಾಗುತ್ತಿದೆ.
-
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications