2016ರಲ್ಲಿ ಹಾಸನ-ಬೆಂಗಳೂರು ನಡುವೆ ರೈಲು ಸಂಚಾರ
ಹಾಸನ, ಜೂ. 03 : ಬಹು ನಿರೀಕ್ಷಿತ ಬೆಂಗಳೂರು-ಹಾಸನ ರೈಲು ಮಾರ್ಗದ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳ್ಳಲಿದ್ದು, 2016ರಲ್ಲಿ ರೈಲು ಸಂಚಾರ ಆರಂಭವಾಗಲಿದೆ. ಹಾಸನ ಹೊರವಲಯದ ಕೋರಮಂಗಲದಲ್ಲಿ ಕ್ರಾಸಿಂಗ್ ಜಂಕ್ಷನ್ ನಿರ್ಮಿಸಲು ಇಲಾಖೆ ಯೋಜನೆ ರೂಪಿಸಿದೆ.
ಹಾಸನ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಮೈಸೂರು ವಿಭಾಗದ ವ್ಯವಸ್ಥಾಪಕರಾದ ರಾಜಕುಮಾರ್ ಲಾಲ್ ಅವರು ಈ ಕುರಿತು ಮಾಹಿತಿ ನೀಡಿದರು. ಬೆಂಗಳೂರು-ಹಾಸನ ರೈಲು ಮಾರ್ಗದ ಕಾಮಗಾರಿ 2015ರ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದರು. [ಕುಣಿಗಲ್ ಮಾರ್ಗದ ಬೆಂಗಳೂರು-ಹಾಸನ ರೈಲಿಗೆ ಚಾಲನೆ]

2016ರಲ್ಲಿ ಬೆಂಗಳೂರು-ಹಾಸನ ನಡುವೆ ರೈಲು ಸಂಚಾರ ಆರಂಭವಾಗಲಿದೆ. ಹಾಸನ ರೈಲು ನಿಲ್ದಾಣದಲ್ಲಿ ಕ್ರಾಸಿಂಗ್ ಜಂಕ್ಷನ್ ನಿರ್ಮಾಣ ಮಾಡುವುದಿಲ್ಲ. ನಗರದ ಹೊರವಲಯದ ಕೋರಮಂಗಲದಲ್ಲಿ ಕ್ರಾಸಿಂಗ್ ಜಂಕ್ಷನ್ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ರಾಜಕುಮಾರ್ ಲಾಲ್ ವಿವರಣೆ ನೀಡಿದರು. [ಮಲ್ಯ ಕುಣಿಗಲ್ ಕುದುರೆಯ ಮೇಲೆ ರೈಲ್ವೆ ಸವಾರಿ!]
ಸಹಾಯವಾಣಿ ಸಂಖ್ಯೆಗಳು : ಮೈಸೂರು ವಿಭಾಗದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ 138 ಸಂಖ್ಯೆಯ ಸಹಾಯವಾಣಿ ಆರಂಭಿಸಲಾಗಿದೆ. ಈ ನಂಬರ್ಗೆ ಕರೆ ಮಾಡಿ ಸ್ವಚ್ಛತೆ, ತುರ್ತು ಚಿಕಿತ್ಸೆ, ಆಹಾರ ಮತ್ತು ರೈಲ್ವೆ ಬೋಗಿಯ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದೆ ಎಂದರು. [ಜೂ.1 ರಿಂದ ರೈಲ್ವೆ ಪ್ರಯಾಣ ದರ ತುಸು ದುಬಾರಿ]
ಕೆಲವು ದಿನಗಳಲ್ಲಿ ಹಾಸನ ಮತ್ತು ಅರಸೀಕೆರೆ ರೈಲು ನಿಲ್ದಾಣಗಳಲ್ಲಿ ಎಟಿಎಂ ಮಾದರಿಯಲ್ಲಿ ರೈಲು ಪ್ರಯಾಣದ ಟಿಕೆಟ್ ಪಡೆಯುವ ಯಂತ್ರವನ್ನು ಸ್ಥಾಪನೆ ಮಾಡಲಾಗುತ್ತದೆ. ಹಾಸನದಲ್ಲಿ ಪ್ರಸ್ತುತ ಇರುವ ಟಿಕೆಟ್ ಕೌಂಟರ್ ಜೊತೆ ಮತ್ತೊಂದು ಕೌಂಟರ್ ಆರಂಭಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಮಂಗಳೂರಿಗೆ ರೈಲು ಇಲ್ಲ : ಬೆಂಗಳೂರು-ಮಂಗಳೂರು ನಡುವೆ ನೂತನ ರೈಲು ಸೇವೆಯನ್ನು ಆರಂಭಿಸುವ ಚಿಂತನೆ ಇಲಾಖೆ ಮುಂದಿಲ್ಲ ಎಂದು ರಾಜಕುಮಾರ್ ಲಾಲ್ ಸ್ಪಷ್ಟಪಡಿಸಿದರು. ನೂತನ ರೈಲನ್ನು ಪರಿಚಯಿಸಿದರೆ ಕ್ರಾಸಿಂಗ್ ನೀಡುವುದು ಕಷ್ಟ. ಆದ್ದರಿಂದ ಹೊಸ ರೈಲನ್ನು ಓಡಿಸುವುದಿಲ್ಲ ಎಂದು ಹೇಳಿದರು.
-
New Railway Line: 6000 ಕಿಮೀ ರೈಲ್ವೆ ಜಾಲ ವಿಸ್ತರಣೆ, 100 ಯೋಜನೆಗಳ ಜಾರಿಗೆ ₹1.53 ಲಕ್ಷ ಕೋಟಿ ಹೂಡಿಕೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್












Click it and Unblock the Notifications