Get Updates
Get notified of breaking news, exclusive insights, and must-see stories!

ಬೆಂಗಳೂರು-ಹೈದರಾಬಾದ್ ಹೈ-ಸ್ಪೀಡ್ ರೈಲ್ವೆ ಕಾರಿಡಾರ್: ಬೀದರ್‌ವರೆಗೆ ವಿಸ್ತರಿಸುವಂತೆ ಮಾಜಿ ಪ್ರಧಾನಿ ದೇವೇಗೌಡ ಮನವಿ

Bengaluru-Hyderabad High-Speed ​​Railway Corridor: ಇತ್ತೀಚೆಗಷ್ಟೇ ಕೇಂದ್ರ ಬಜೆಟ್‌ ಮಂಡನೆಯಾಗಿದ್ದು, ಈ ವೇಳೆ ರಾಷ್ಟ್ರದ ಅಗತ್ಯಗಳಿಗೆ ಮೀರಿ ರೈಲ್ವೆ ವಲಯಕ್ಕೆ ಹೆಚ್ಚು ಅನುದಾನ ಘೋಷಣೆ ಮಾಡಲಾಗಿದೆ. ಅದರಲ್ಲೂ ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು-ಚೆನ್ನೈ ಸೇರಿದಂತೆ 7 ಹೈಸ್ಪೀಡ್ ರೈಲು ಕಾರಿಡಾರ್ ಘೋಷಿಸಲಾಗಿದ್ದು, ಈ ಯೋಜನೆಯನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಸಹ ಅಭಿನಂದಿದ್ದಾರೆ. ಜೊತೆಗೆ ಇದನ್ನು ಬೀದರ್‌ವರೆಗೆ ವಿಸ್ತರಣೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಈ ಯೋಜನೆಗಳನ್ನು ನೀಡಿರುವ ಬಗ್ಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ಅಭಿನಂದಿಸಿದ್ದಾರೆ. ಈ ಬಗ್ಗೆ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಅವರು, 2026ರ ಬಜೆಟ್‌ನಲ್ಲಿ ಸುಸ್ಥಿರ ಸಾರಿಗೆ ಮತ್ತು ಆರ್ಥಿಕ ಬೆಳವಣಿಗೆಗಾಗಿ ಬೆಳವಣಿಗೆಯ ಕನೆಕ್ಟರ್‌ಗಳಾಗಿ ಸುಮಾರು 4,000 ಕಿಲೋ ಮೀಟರ್ ಉದ್ದದ ಏಳು ಹೊಸ ಹೈ-ಸ್ಪೀಡ್ ರೈಲು ಕಾರಿಡಾರ್‌ಗಳನ್ನು ಘೋಷಿಸಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದ್ದಾರೆ.

Bengaluru-Hyderabad High-Speed Railway Corridor Former PM HD Deve Gowda request Expansion to Bidar

ದೇವೇಗೌಡರು ಹೇಳಿದ್ದೇನು?: ಈ ಪೈಕಿ ಚೆನ್ನೈ-ಬೆಂಗಳೂರು-ಹೈದರಾಬಾದ್ (ಹೈದರಾಬಾದ್-ಚೆನ್ನೈ ಮತ್ತು ಚೆನ್ನೈ-ಬೆಂಗಳೂರು ವಿಭಾಗಗಳೊಂದಿಗೆ) ದಕ್ಷಿಣ ಭಾಗದಲ್ಲಿ ಹೈ-ಸ್ಪೀಡ್ ತ್ರಿಕೋನವನ್ನು ಸೃಷ್ಟಿಸಲಾಗುತ್ತಿದೆ. ಇದು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದ ಜನರ ಆಕಾಂಕ್ಷೆಗಳು ಮತ್ತು ಅವರ ಚಲನಶೀಲತೆಯ ಅಗತ್ಯಗಳನ್ನು ನೇರವಾಗಿ ಪೂರೈಸುತ್ತದೆ ಮತ್ತು ಕೇರಳ ಮತ್ತು ಪುದುಚೇರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಮಾಜಿ ಪ್ರಧಾನಿಗಳು ಹೇಳಿದ್ದಾರೆ.

ಮುಂಬೈ-ಪುಣೆ, ಪುಣೆ-ಹೈದರಾಬಾದ್, ದೆಹಲಿ-ವಾರಣಾಸಿ ಮತ್ತು ವಾರಣಾಸಿ-ಸಿಲಿಗುರಿಯಂತಹ ಇತರ ಕಾರಿಡಾರ್‌ಗಳು ದೇಶಾದ್ಯಂತದ ಪ್ರಮುಖ ನಗರ, ಕೈಗಾರಿಕಾ ಮತ್ತು ಆಧ್ಯಾತ್ಮಿಕ ಕೇಂದ್ರಗಳನ್ನು ಸಂಪರ್ಕಿಸುತ್ತವೆ. ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ ಮತ್ತು 16 ಲಕ್ಷ ಕೋಟಿ ರೂಪಾಯಿ ಹೂಡಿಕೆಗಳನ್ನು ಆಕರ್ಷಿಸುತ್ತವೆ. ಈ ದೂರದೃಷ್ಟಿಯ ಉಪಕ್ರಮವು ವಿಕಸಿತ ಭಾರತ 2047ರ ಉದಾತ್ತ ಕನಸಿನೊಂದಿಗೆ ಸರಾಗವಾಗಿ ಹೊಂದಿಕೆಯಾಗುತ್ತದೆ. ಜಾಗತಿಕ ದರ್ಜೆಯ ಮೂಲಸೌಕರ್ಯದಿಂದ ನಡೆಸಲ್ಪಡುವ ಅಭಿವೃದ್ಧಿ ಹೊಂದಿದ, ಆಧುನಿಕ ಆರ್ಥಿಕತೆಯತ್ತ ನಮ್ಮ ರಾಷ್ಟ್ರದ ಪ್ರಯಾಣವನ್ನು ವೇಗಗೊಳಿಸುತ್ತದೆ ಎಂದು ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಬೀದರ್‌ವರೆಗೆ ವಿಸ್ತರಿಸುವಂತೆ ಮನವಿ: ಬೆಂಗಳೂರು-ಹೈದರಾಬಾದ್ ಹೈ-ಸ್ಪೀಡ್ ರೈಲ್ವೆ ಕಾರಿಡಾರ್ ಅನ್ನು ಬೀದರ್‌ವರೆಗೆ ವಿಸ್ತರಿಸಬೇಕು. ಇದು ಉತ್ತರ ಕರ್ನಾಟಕ ಮತ್ತು ತೆಲಂಗಾಣ ಪ್ರದೇಶಗಳಿಗೆ ಹೆಚ್ಚು ಅನುಕೂಲ ಆಗುತ್ತದೆ. ಬೀದರ್ ಭಾಗದ ಅಗತ್ಯಗಳಿಗೆ ಅನುಕೂಲ ಆಗುತ್ತದೆ ಎಂದು ತಿಳಿಸಿದ್ದಾರೆ.

ಅಪಾರ ಪ್ರಯೋಜನಕಾರಿಯಾಗಲಿದೆ: ಕರ್ನಾಟಕ ರಾಜ್ಯದೊಳಗೆ ಸುಧಾರಿತ ಆಂತರಿಕ ಸಂಪರ್ಕದ ಅಗತ್ಯವಾಗಿದೆ. ಬೆಂಗಳೂರು ಮತ್ತು ಬೆಳಗಾವಿ ನಡುವಿನ ಅಂತರವು ಸುಮಾರು 600 ಕಿಲೋ ಮೀಟರ್ ಮತ್ತು ಪ್ರಸ್ತುತ ಪ್ರಯಾಣದ ಸಮಯ - ಸಾಮಾನ್ಯವಾಗಿ ರಸ್ತೆ ಅಥವಾ ರೈಲು ಮೂಲಕ 8-10 ಗಂಟೆಗಳು ಆಗುತ್ತದೆ. ಈ ದೀರ್ಘ ಪ್ರಯಾಣವು ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಪ್ರದೇಶಗಳಿಗೆ ಪ್ರಗತಿಗೆ ತೀವ್ರವಾಗಿ ಅಡ್ಡಿಯಾಗುತ್ತದೆ. ಬೆಂಗಳೂರು - ಬೆಳಗಾವಿ - ಪುಣೆ - ಮುಂಬೈ ಅನ್ನು ಸಂಪರ್ಕಿಸುವ ವೇಗದ ಹೈ-ಸ್ಪೀಡ್ ರೈಲು ಕಾರಿಡಾರ್ ಅಪಾರ ಪ್ರಯೋಜನಕಾರಿ ಆಗಲಿದೆ ಎಂದು ಅವರು ಹೇಳಿದ್ದಾರೆ.

ಒಟ್ಟಿನಲ್ಲಿ ಹೇಳುವುದಾದರೆ, ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳನ್ನು ಸಂಪರ್ಕಿಸುವ ಬೆಂಗಳೂರು-ಹೈದರಾಬಾದ್ ಹೈ-ಸ್ಪೀಡ್ ರೈಲ್ವೇ ಕಾರಿಡಾರ್ ಯೋಜನೆಯಿಂದ ಸಾರಿಗೆ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಅಭಿವೃದ್ಧಿ ಕ್ರಾಂತಿ ಆಗಲಿದೆ. ಈ ಹೊಸ ರೈಲ್ವೇ ಮಾರ್ಗವು ಪ್ರಯಾಣಿಕರಿಗೆ ಕಡಿಮೆ ಸಮಯದಲ್ಲಿ ಸುರಕ್ಷಿತ ಪ್ರಯಾಣವನ್ನು ಒದಗಿಸುವುದು ಉದ್ದೇಶವಾಗಿದೆ. ಯೋಜನೆಯಡಿ ರೈಲುಗಳು ಗರಿಷ್ಠ ವೇಗದಲ್ಲಿ ಓಡಲಿದ್ದು, ಇದರಿಂದ ಪ್ರಯಾಣ ಸಮಯ ಗಮನಾರ್ಹವಾಗಿ ಇಳಿಕೆಯಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+