ಮಾರ್ಚ್ 24 ರಿಂದ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
ಬೆಂಗಳೂರು, ಫೆ. 19: 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮಾರ್ಚ್ 24 ರಿಂದ 31ರವರೆಗೆ ಬೆಂಗಳೂರಿನಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಭಾರತೀಯ ಪ್ರದರ್ಶನ ಕಲೆಗಳ ಮಹತ್ವ" ವಿಷಯದ ಮೇಲೆ ಈ ಬಾರಿಯ ಚಿತ್ರೋತ್ಸವ ನಡೆಯಲಿದೆ.
ಭಾರತದ ಪ್ರತಿಷ್ಠಿತ ಚಿತ್ರೋತ್ಸವವಾಗಿ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಬೆಳೆದು ಬಂದಿದ್ದು, ಈಗಾಗಲೇ ದೇಶ-ವಿದೇಶಗಳಲ್ಲಿ ಪ್ರಸಿದ್ದಿ ಪಡೆದಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಅಂತಾರಾಷ್ಟ್ರೀಯ FIAPF ಮಾನ್ಯತೆ ದೊರೆಯುವ ಸಾಧ್ಯತೆಗಳಿದ್ದು, ಇದು ಆಶಾದಾಯಕ ಬೆಳವಣಿಗೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಕೋವಿಡ್ ನಿಯಮಾವಳಿಗಳು ಮತ್ತು ಮಾರ್ಗಸೂಚಿಗಳಿಗನುಸಾರವಾಗಿ ಚಿತ್ರೋತ್ಸವ ನಡೆಯಬೇಕೆಂದು ಅವರು ಇದೇ ಸಂದರ್ಭದಲ್ಲಿ ಸೂಚಿಸಿದ್ದಾರೆ.

200 ಅತ್ಯುತ್ತಮ ಚಿತ್ರಗಳ ಪ್ರದರ್ಶನ
ಬೆಂಗಳೂರಿನ ರಾಜಾಜಿನಗರದಲ್ಲಿರುವ ಒರಾಯನ್ ಮಾಲ್ನ ಪಿವಿಆರ್ ಚಿತ್ರಮಂದಿರದ 11 ಪರದೆಗಳಲ್ಲಿ ಒಟ್ಟಾರೆ 50ಕ್ಕೂ ಹೆಚ್ಚು ದೇಶಗಳ ಸುಮಾರು 200 ಅತ್ಯುತ್ತಮ ಚಿತ್ರಗಳನ್ನು ಪ್ರದರ್ಶಿಸಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ. ಪಾಟೀಲ್ ಸಭೆಯ ಬಳಿಕ ತಿಳಿಸಿದ್ದಾರೆ.

ಏಳು ದಿನಗಳ ಚಲನಚಿತ್ರೋತ್ಸವ
ಬೆಂಗಳೂರು ನಗರದಲ್ಲಿ ಏಳು ದಿನಗಳ ಕಾಲ ನಡೆಯುವ ಚಲನಚಿತ್ರೋತ್ಸವದಲ್ಲಿ ಏಷಿಯನ್ ಸಿನಿಮಾ, ಚಿತ್ರಭಾರತಿ (ಭಾರತೀಯ ಸಿನಿಮಾ) ಹಾಗೂ ಕನ್ನಡ ಸಿನಿಮಾಗಳ ಸ್ಪರ್ಧಾ ವಿಭಾಗವಿರುತ್ತದೆ. ಅಲ್ಲದೆ, ವಿಶ್ವಸಿನಿಮಾ, ಸಿಂಹಾವಲೋಕನ, ಗ್ರ್ಯಾಂಡ್ ಕ್ಲಾಸಿಕ್, ಕೆಲವು ದೇಶಗಳ ವಿಶೇಷ ಸಿನಿಮಾ, ಅಗಲಿದ ವಿಶ್ವದ, ಭಾರತದ ಮತ್ತು ಕನ್ನಡ ಚಿತ್ರರಂಗದ ಗಣ್ಯರ ಸಂಸ್ಮರಣೆ, ಚಲನಚಿತ್ರ ವಿಮರ್ಶಕರ ಅಂತಾರಾಷ್ಟ್ರೀಯ ಒಕ್ಕೂಟದ ಪ್ರಶಸ್ತಿ ವಿಭಾಗ, ನೆಟ್ಪ್ಯಾಕ್, ಜೀವನಚರಿತ್ರೆ ಆಧರಿಸಿದ ಚಿತ್ರಗಳ ವಿಭಾಗಗಳು ವಿವಿಧ ದೃಷ್ಟಿಕೋನವನ್ನು ಬಿಂಬಿಸಲಿವೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್ ವಿವರಿಸಿದರು.

ಕನ್ನಡ ಸಿನಿಮಾಗಳ ಸೃಜನಶೀಲ ಮುಖ
ಚಿತ್ರೋತ್ಸವದಲ್ಲಿ ಅತ್ಯುತ್ತಮ ಸಿನಿಮಾಗಳ ಪ್ರದರ್ಶನದ ಜೊತೆಗೆ ಚಲನಚಿತ್ರರಂಗದ ನುರಿತ ದೇಶ-ವಿದೇಶಗಳ ನಿರ್ದೇಶಕರು, ಕಲಾವಿದರು, ತಂತ್ರಜ್ಞರೊಂದಿಗಿನ ಸಂವಾದ, ವಿಚಾರ ಸಂಕಿರಣ, ಚಿತ್ರಕಥೆ ರಚನೆ ಕಾರ್ಯಾಗಾರ, ಮಾಸ್ಟರ್ಕ್ಲಾಸ್ ಮೊದಲಾದ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಚಿತ್ರೋದ್ಯಮಿಗಳಿಗೆ, ವಿದ್ಯಾರ್ಥಿಗಳಿಗೆ ಮತ್ತು ಸಿನಿಮಾಸಕ್ತರಿಗೆ ಅನುಕೂಲವಾಗಲಿದೆ. ಕನ್ನಡ ಸಿನಿಮಾಗಳ ಸೃಜನಶೀಲ ಮುಖಗಳನ್ನು ವಿಶ್ವದ ನಾನಾ ದೇಶಗಳಿಗೆ ಪರಿಚಯಿಸುವ ಕೆಲಸವೂ ಈ ಮೂಲಕ ನಡೆಯುತ್ತಿದೆ ಎಂದು ಸುನೀಲ್ ಪುರಾಣಿಕ್ ಇದೇ ಸಂದರ್ಭದಲ್ಲಿ ತಿಳಿಸಿದರು.
Recommended Video

ಲಾಂಛನ ಬಿಡುಗಡೆ
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ 13ನೇ ಆವೃತ್ತಿಯ ಲಾಂಛನವನ್ನು ಬಿಡುಗಡೆ ಮಾಡಿದರು.
ಸಭೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್. ಜೈರಾಜ್, ಹಿರಿಯ ಕಲಾವಿದರಾದ ಶೃತಿ, ತಾರಾ ಅನುರಾಧ , ಚಲನಚಿತ್ರ ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಅಜುಂ ಪರ್ವೇಜ್, ಆಯುಕ್ತ ಪಿ.ಎಸ್. ಹರ್ಷ ಮತ್ತಿತರರು ಉಪಸ್ಥಿತರಿದ್ದರು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ











Click it and Unblock the Notifications