ಡಾಕ್ಟರ್, ಎಂಜಿನಿಯರ್ ಎಂದು ಹೇಳಿ 15 ಮಹಿಳೆಯರನ್ನು ಮದುವೆಯಾದ ಬೆಂಗಳೂರಿನ ವ್ಯಕ್ತಿಯ ಬಂಧನ
ಮೈಸೂರು, ಜುಲೈ. 10: ತಾನು ವೈದ್ಯ ಅಥವಾ ಎಂಜಿನಿಯರ್ ಎಂದು ಹೇಳಿಕೊಂಡು ಹಲವು ಮಹಿಳೆಯರಿಗೆ ವಂಚನೆ ಮಾಡಿ ಮದುವೆಯಾಗಿದ್ದ ಬೆಂಗಳೂರಿನ ವ್ಯಕ್ತಿಯನ್ನು ಮೈಸೂರು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಈ ವ್ಯಕ್ತಿ ಕನಿಷ್ಠ 15 ಮಹಿಳೆಯರನ್ನು ವಂಚಿಸಿದ್ದಾರೆ. ಆತ ಸಿಕ್ಕಿಬೀಳುವ ಮೊದಲು ಇಷ್ಟು ಮಹಿಳೆಯರನ್ನು ಮದುವೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಯ ಪ್ರಕಾರ, ಬೆಂಗಳೂರಿನ ಬನಶಂಕರಿ ನಿವಾಸಿ ಮಹೇಶ್ ನಾಯಕ್ ಅವರು ತಾನು ಡಾಕ್ಟರ್, ಎಂಜಿನಿಯರ್ ಮತ್ತು ಸಿವಿಲ್ ಗುತ್ತಿಗೆದಾರ ಎಂದು ಹೇಳಿಕೊಂಡು ಮ್ಯಾಟ್ರಿಮೋನಿಯಲ್ ಪ್ರೊಫೈಲ್ ಅನ್ನು ರಚಿಸಿದ್ದಾರೆ. 35 ವರ್ಷದ ಆರೋಪಿ 2014 ರಿಂದ ಕನಿಷ್ಠ 15 ಮಹಿಳೆಯರನ್ನು ಮದುವೆಯಾಗಿದ್ದು, ನಾಲ್ಕು ಮಕ್ಕಳ ತಂದೆಯಾಗಿದ್ದಾನೆ.

ಇದಲ್ಲದೆ ತುಮಕೂರಿನಲ್ಲಿ ನಕಲಿ ಚಿಕಿತ್ಸಾಲಯ ಸ್ಥಾಪಿಸಿ ನರ್ಸ್ ಒಬ್ಬರನ್ನು ನೇಮಿಸಿಕೊಂಡು ಅಭ್ಯಾಸ ವೈದ್ಯನೆಂದು ಬಿಂಬಿಸಿಕೊಂಡಿದ್ದರು ಎಂದು ವರದಿಯಾಗಿದೆ. ಆತನನ್ನು ಮದುವೆಯಾಗಿದ್ದ ಸಾಫ್ಟ್ವೇರ್ ಎಂಜಿನಿಯರ್ ದೂರು ದಾಖಲಿಸಿದ್ದು, ಭಾನುವಾರ ಮೈಸೂರಿನಲ್ಲಿ ಸಿಕ್ಕಿಬಿದ್ದಿದ್ದಾರೆ. ಬಳಿಕ ಆತನಿಂದ ವಂಚನೆಗೆ ಒಳಗಾಗಿದ್ದೇವೆ ಎಂದು ಅನೇಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ತನ್ನನ್ನು ತಾನು ಕೆಲವರಿಗೆ ವೈದ್ಯ ಎಂದು ಪರಿಚಯಿಸಿಕೊಂಡಿದ್ದಾರೆ. ಮತ್ತೆ ಕೆಲವರಿಗೆ ಎಂಜಿನಿಯರ್ ಎಂದು ಮೋಸ ಮಾಡಿದ್ದಾನೆ ಎಂದು ಸಂತ್ರಸ್ತ ಮಹಿಳೆಯರು ದೂರು ದಾಖಲಿಸಿದ್ದಾರೆ. ಕ್ಲಿನಿಕ್ ಸ್ಥಾಪಿಸಲು ಹಣಕ್ಕಾಗಿ ಕಿರುಕುಳ ನೀಡುತ್ತಿದ್ದರು ಎಂದು ಸಂತ್ರಸ್ತರೊಬ್ಬರು ಹೇಳಿದ್ದಾರೆ. ಹಣ ಕೊಡಲು ನಿರಾಕರಿಸಿದ ನಂತರ ಆತ ತನ್ನ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದಾನೆ ಎಂದು ಆರೋಪಿಸಿದ್ದಾರೆ.
ಈ ಹಿಂದೆ ಮಹೇಶ್ ನಾಯಕ್ ಮೇಲೆ ಅವರ ತಂದೆ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದರು ಎಂದು ವರದಿ ತಿಳಿಸಿದೆ. ಇನ್ನು, ಈತನ ಮೋಸಕ್ಕೆ ಬಲಿಯಾದ ಸಂತ್ರಸ್ತರ ಹೆಚ್ಚಿನ ವಿವರಗಳನ್ನು ಪತ್ತೆ ಹಚ್ಚಲು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Dawood Ibrahim: "ರಿಯಲ್ ಡಾನ್ ದಾವೂದ್ ಇಬ್ರಾಹಿಂ" ಸ್ಟಿಕ್ಕರ್ ಹಾಕಿಸಿದ್ದ ಬಸ್ ಚಿಕ್ಕಮಗಳೂರಿನಲ್ಲಿ ಪೊಲೀಸ್ ವಶಕ್ಕೆ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ











Click it and Unblock the Notifications