ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಮೇ ಒಳಗೆ ಸಂಚಾರ ಮುಕ್ತಗೊಳಿಸಲು ಸೂಚನೆ
ಹಾಸನ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಾಸನ ವ್ಯಾಪ್ತಿಯಲ್ಲಿನ ನಡೆಯುತ್ತಿರುವ ಕಾಮಗಾರಿಗಳಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಹಾಸನ ಸಂಸದ ಶ್ರೇಯಸ್ ಎಂ.ಪಟೇಲ್ ಅವರು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಚರ್ಚಿಸಿ, ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸ್ಪಷ್ಟ ನಿರ್ದೇಶನ ನೀಡಲಾಯಿತು.
ಸುಮಾರು 10 ಕಿಲೋಮೀಟರ್ ಉದ್ದದ ಹಾಸನ ಬೈಪಾಸ್ ರಸ್ತೆಯಲ್ಲಿ ಬಾಕಿ ಉಳಿದಿರುವ ರೈಲ್ವೆ ಓವರ್ಬ್ರಿಡ್ಜ್ ಹಾಗೂ ಸಂಪರ್ಕ ರಸ್ತೆ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಬೇಕು ಹಾಗೂ ಮೇ ತಿಂಗಳ ಒಳಗಾಗಿ ಸಂಚಾರಕ್ಕೆ ಮುಕ್ತಗೊಳಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಯಿತು. ಇದರಿಂದ ನಗರ ಪ್ರದೇಶದಲ್ಲಿ ಸಂಚಾರ ಸಮಸ್ಯೆ ಕಡಿಮೆಯಾಗಲಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಇದೇ ವೇಳೆ, ದೋಣಿಗಾಳ್ ಬಳಿ ಇನ್ನೂ ಪೂರ್ಣಗೊಳ್ಳದ ಸುಮಾರು 600 ಮೀಟರ್ ರಸ್ತೆಯನ್ನು ತುರ್ತು ಆಧಾರದ ಮೇಲೆ ನಿರ್ಮಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆಯೂ ನೀಡಲಾಯಿತು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುಮೋದನೆ
ಕಳೆದ ಮಳೆಗಾಲದಲ್ಲಿ ಸಕಲೇಶಪುರದಿಂದ ಮಾರ್ನಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ ಭಾಗದಲ್ಲಿ ಹಲವು ಕಡೆ ಭೂ ಕುಸಿತ ಉಂಟಾಗಿದ್ದ ಹಿನ್ನೆಲೆ, ಆ ಭಾಗದ ದುರಸ್ತಿ ಮತ್ತು ರಕ್ಷಣಾ ಕಾಮಗಾರಿಗಳಿಗೆ ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುಮೋದನೆ ನೀಡಿದೆ. ಹೀಗಾಗಿ ಈ ಸಂಬಂಧಿತ ಕಾಮಗಾರಿಗಳನ್ನೂ ವಿಳಂಬವಿಲ್ಲದೆ ಪೂರ್ಣಗೊಳಿಸಬೇಕೆಂದು ಸಭೆಯಲ್ಲಿ ಸೂಚನೆ ನೀಡಲಾಗಿಯಿತು.
ಈ ಸಭೆಯಲ್ಲಿ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ, ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ ಆದಿತ್ಯ ಆಮ್ಲಾನ್ ಬಿಶ್ವಾಸ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಸಯ್ಯದ್ ಸೇರಿದಂತೆ ಸಂಬಂಧಿತ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು. ಸಭೆಯ ಅಂತ್ಯದಲ್ಲಿ, ನಿಗದಿತ ಸಮಯದಲ್ಲಿ ಕಾಮಗಾರಿಗಳು ಪೂರ್ಣಗೊಳ್ಳದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನೂ ನೀಡಲಾಯಿತು.

6 ಪಥದ ರಸ್ತೆ
ದೇಶದ ಬಹುನಿರೀಕ್ಷತ ಹೆದ್ದಾರಿಗಳಲ್ಲಿ ಬೆಂಗಳೂರು-ಮಂಗಳೂರು ಎಕ್ಸ್ಪ್ರೆಸ್ ವೇ ಕೂಡ ಒಂದಾಗಿದ್ದು, ಈಗಾಗಲೇ ಕೆಲವು ಸಂಚಾರಕ್ಕೆ ಮುಕ್ತಾವಾಗಿದ್ದು, ಇನ್ನೂ ಕೆಲವು ನಿರ್ಮಾಣ ಹಂತದಲ್ಲಿವೆ. ಬೆಂಗಳೂರು-ಮಂಗಳೂರು ನಡುವೆ ಹೊಸ ಎಕ್ಸ್ಪ್ರೆಸ್ವೇ ಯೋಜನೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಘೋಷಣೆ ಮಾಡಿತ್ತು. ಇದು 6 ಪಥಗಳೊಂದಿಗೆ 335 ಕಿಲೋ ಮೀಟರ್ ವ್ಯಾಪ್ತಿಯನ್ನು ಹೊಂದಿದ್ದು, ಈ ಯೋಜನೆಯ ಕಾಮಗಾರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆಯಿಂದ ನಡೆಯುತ್ತಿದೆ. ಈ ಎಕ್ಸ್ಪ್ರೆಸ್ವೇ ಪೂರ್ಣಗೊಂಡಲ್ಲಿ ಎರಡೂ ನಗರಗಳ ನಡುವಿನ ಪ್ರಯಾಣದ ಸಮಯ 7ರಿಂದ 8 ಗಂಟೆಗಳಷ್ಟು ಕಡಿಮೆಯಾಗಲಿದೆ. ಇದರಿಂದ ಸಮಯ ಉಳಿತಾಯ ಆಗಲಿದ್ದು, ವಾಹನ ಸವಾರರಿಗೆ ಪ್ರಯಾಣ ಸುಲಭವಾಗಲಿದೆ.
ಹೆದ್ದಾರಿ ಅಗಲೀಕರಣ ಕಾಮಗಾರಿ ಆರಂಭವಾಗಿ 10 ವರ್ಷ ಕಳೆದರೂ ಇನ್ನೂವರೆಗೂ ಮುಗಿದಿಲ್ಲ ಎನ್ನುವುದು ಸ್ಥಳೀಯರ ಅಳಲು. ಕಳೆದ ವರ್ಷ ಕೂಡ ಮಳೆಗಾಲದಲ್ಲಿ ಭೂಕುಸಿತ ಉಂಟಾಗಿದ್ದರಿಂದ ಅವೈಜ್ಞಾನಿಕ ಕಾಮಗಾರಿ ಎಂದು ದೂರಿದ್ದರು. ಅಗಲೀಕರಣದ ವೇಳೆ ಸ್ಲೋಪ್ ಆಗಿ ಗುಡ್ಡವನ್ನು ಕಡಿಯುವ ಬದಲಿಗೆ, ಕಡಿದಾಗಿ ಗುಡ್ಡವನ್ನು ಕಡಿಯಲಾಗಿದೆ. ಇದರಿಂದ ಸ್ವಲ್ವ ಮಳೆ ಬಂದರೆ ಸಾಕು ಗುಡ್ಡ ಕುಸಿತವಾಗುತ್ತಿದೆ. ರಸ್ತೆ ಮೇಲೆ ಗುಡ್ಡ ಬಂದು ಬೀಳುತ್ತಿದೆ ಎಂದು ಆತಂಕ ವ್ಯಕ್ತವಾಗಿತ್ತು. ಇದು ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರಿನಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದ್ದು, ಹಾಸನ ಮಾರ್ಗವಾಗಿ ಎರಡು ಪ್ರಮುಖ ನಗರಗಳಿಗೆ ಸಂಪರ್ಕ ಸಾಧ್ಯವಾಗಲಿದೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications