ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು-ಮಂಗಳೂರು ರೈಲು ಮಾರ್ಗ ಬದಲಾವಣೆ

|
Google Oneindia Kannada News

ಬೆಂಗಳೂರು, ನವೆಂಬರ್ 19 : ಬೆಂಗಳೂರು-ಕಣ್ಣೂರು ಹಾಗೂ ಬೆಂಗಳೂರು-ಕಾರವಾರ ರೈಲಿನ ಮಾರ್ಗ ಬದಲಾವಣೆಯಾಗಿದೆ. ಶ್ರವಣಬೆಳಗೊಳ ಮಾರ್ಗವಾಗಿ ರೈಲು ಸಂಚಾರ ನಡೆಸಲಿದೆ.

ಯಶವಂತಪುರ-ಶ್ರವಣಬೆಳಗೊಳ ಮಾರ್ಗ ಸಿದ್ಧಗೊಂಡಿದ್ದು 2018ರ ಫೆಬ್ರವರಿ 10ರಿಂದ ಈ ಮಾರ್ಗದಲ್ಲಿ ಸಂಚಾರ ನಡೆಸಲಿದೆ ಎಂದು ರೈಲ್ವೆ ಇಲಾಖೆಯ ಪ್ರಕಟಣೆ ತಿಳಿಸಿದೆ.

ಬೆಂಗಳೂರು ಮಂಗಳೂರು ನಡುವೆ ಹೊಸ ರೈಲುಬೆಂಗಳೂರು ಮಂಗಳೂರು ನಡುವೆ ಹೊಸ ರೈಲು

Bengaluru-Mangaluru train route changed

ಬೆಂಗಳೂರು-ಕಣ್ಣೂರು ಹಾಗೂ ಬೆಂಗಳೂರು-ಕಾರವಾರ ರೈಲು ವಾರದಲ್ಲಿ 4 ದಿನ ಯಶವಂತಪುರ-ಶ್ರವಣಬೆಳಗೊಳ ಹಾಗೂ ವಾರದಲ್ಲಿ ಮೂರು ದಿನ ಮೈಸೂರು ಮಾರ್ಗದಲ್ಲಿ ಸಂಚಾರ ನಡೆಸಲಿದೆ.

ಶಿವಮೊಗ್ಗ : ಇಂಟರ್‌ಸಿಟಿ ರೈಲು ವೇಳಾಪಟ್ಟಿ, ದರ ಬದಲಾವಣೆಶಿವಮೊಗ್ಗ : ಇಂಟರ್‌ಸಿಟಿ ರೈಲು ವೇಳಾಪಟ್ಟಿ, ದರ ಬದಲಾವಣೆ

ಈಗಾಗಲೇ ಶ್ರವಣಬೆಳಗೊಳ ಮೂಲಕ ಮಂಗಳೂರಿಗೆ ರೈಲು ಸಂಚಾರ ನಡೆಸಲು ಅನುಮತಿ ಸಿಕ್ಕಿದೆ. 2018ರ ಫೆಬ್ರವರಿಯಲ್ಲಿ ಬೆಂಗಳೂರು-ಶ್ರವಣಬೆಳಗೊಳ-ಮಂಗಳೂರು ರೈಲು ಸಂಚಾರ ಆರಂಭವಾಗಲಿದೆ.

ಬೆಂಗಳೂರಿನಿಂದ ಹೊರಡುವ ರೈಲು ಯಶವಂತಪುರ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಮಣ್ಯ ರಸ್ತೆ, ಬಂಟ್ವಾಳ ನಿಲ್ದಾಣದಲ್ಲಿ ನಿಂತು ಮಂಗಳೂರು ತಲುಪಲಿದ್ದು, ಅಲ್ಲಿಂದ ಮುಂದೆ ಸಾಗಲಿದೆ.

ವೇಳಾಪಟ್ಟಿ : ಫೆಬ್ರವರಿ 10ರಿಂದ ಬುಧವಾರ, ಗುರುವಾರ, ಶುಕ್ರವಾರ ಮತ್ತು ಶನಿವಾರ ಬೆಂಗಳೂರಿನಿಂದ ಸಂಜೆ 7.15ಕ್ಕೆ ಹೊರಡುವ ರೈಲು, ಮರುದಿನ ಬೆಳಗ್ಗೆ 6.20ಕ್ಕೆ ಮಂಗಳೂರನ್ನು ತಲುಪಲಿದೆ.

English summary
Bengaluru-Kannur, Bengaluru-Karwar train route changed. Train will run Bengaluru to Kannur, Karwar via Shravanabelagola from February 10, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X